<p>ನವದೆಹಲಿ: ‘ಉದ್ಯೋಗದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆ, ನಿರ್ಬಂಧ ಮತ್ತು ಪರಿಹಾರ) ಕಾಯ್ದೆ (ಪಾಶ್ ಕಾಯ್ದೆ– 2013) ಅನ್ವಯ ‘ದೂರು ಮೇಲ್ವಿಚಾರಣಾ ಸಮಿತಿ’ ರಚಿಸುವಂತೆ ರಾಜಕೀಯ ಪಕ್ಷಗಳಿಗೆ ನಿರ್ದೇಶನ ನೀಡಿ’ ಎಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿಯೊಂದು ಸಲ್ಲಿಕೆಯಾಗಿದೆ.</p><p>‘ಚುನಾವಣಾ ಪ್ರಚಾರ, ತಳಮಟ್ಟದಲ್ಲಿನ ಪಕ್ಷದ ಕಾರ್ಯಚಟುವಟಿಕೆಗಳ ಸಂದರ್ಭದಲ್ಲಿ ಪಕ್ಷಗಳ ಮಹಿಳಾ ಕಾರ್ಯಕರ್ತರು ಲೈಂಗಿಕ ದೌರ್ಜನ್ಯ ಅನುಭವಿಸುತ್ತಿದ್ದಾರೆ. ಪಕ್ಷಗಳ ಕಾರ್ಯಕರ್ತೆಯರ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಯಾವುದೇ ಪ್ರತ್ಯೇಕ ಕಾನೂನು ಇಲ್ಲ’ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.</p><p>‘ರಾಜಕೀಯ ಪಕ್ಷಗಳು ಕೂಡ ಈ ಕಾಯ್ದೆಯ ಅಡಿಯಲ್ಲಿ ಬರುತ್ತವೆ. ಆದ್ದರಿಂದ, ಅವುಗಳು ಕೂಡ ದೂರು ಮೇಲ್ವಿಚಾರಣಾ ಸಮಿತಿ ರಚಿಸಬೇಕಾಗುತ್ತದೆ’ ಎಂದು ಹೇಳಲಾಗಿದೆ.</p><p>ಯೋಗಮಯ ಎಂ.ಜಿ ಎಂಬುವರು 2024ರಲ್ಲಿ ಇಂಥದ್ದೇ ಅರ್ಜಿಯನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದರು. ‘ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವ ಸಂಸ್ಥೆ ಬಳಿ ನಿಮ್ಮ ಮನವಿ ನೀಡಿ’ ಎಂದು ಆಗ ನ್ಯಾಯಾಲಯ ಹೇಳಿತ್ತು.</p><p>ಈ ಬಳಿಕ ಅರ್ಜಿದಾರರು, ಚುನಾವಣಾ ಆಯೋಗದ ಮೊರೆ ಹೋಗಿದ್ದರು. ‘ಮನವಿ ಸಲ್ಲಿಸಿದರೂ ಇಲ್ಲಿಯವರೆಗೆ ಆಯೋಗದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ‘ಉದ್ಯೋಗದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆ, ನಿರ್ಬಂಧ ಮತ್ತು ಪರಿಹಾರ) ಕಾಯ್ದೆ (ಪಾಶ್ ಕಾಯ್ದೆ– 2013) ಅನ್ವಯ ‘ದೂರು ಮೇಲ್ವಿಚಾರಣಾ ಸಮಿತಿ’ ರಚಿಸುವಂತೆ ರಾಜಕೀಯ ಪಕ್ಷಗಳಿಗೆ ನಿರ್ದೇಶನ ನೀಡಿ’ ಎಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿಯೊಂದು ಸಲ್ಲಿಕೆಯಾಗಿದೆ.</p><p>‘ಚುನಾವಣಾ ಪ್ರಚಾರ, ತಳಮಟ್ಟದಲ್ಲಿನ ಪಕ್ಷದ ಕಾರ್ಯಚಟುವಟಿಕೆಗಳ ಸಂದರ್ಭದಲ್ಲಿ ಪಕ್ಷಗಳ ಮಹಿಳಾ ಕಾರ್ಯಕರ್ತರು ಲೈಂಗಿಕ ದೌರ್ಜನ್ಯ ಅನುಭವಿಸುತ್ತಿದ್ದಾರೆ. ಪಕ್ಷಗಳ ಕಾರ್ಯಕರ್ತೆಯರ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಯಾವುದೇ ಪ್ರತ್ಯೇಕ ಕಾನೂನು ಇಲ್ಲ’ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.</p><p>‘ರಾಜಕೀಯ ಪಕ್ಷಗಳು ಕೂಡ ಈ ಕಾಯ್ದೆಯ ಅಡಿಯಲ್ಲಿ ಬರುತ್ತವೆ. ಆದ್ದರಿಂದ, ಅವುಗಳು ಕೂಡ ದೂರು ಮೇಲ್ವಿಚಾರಣಾ ಸಮಿತಿ ರಚಿಸಬೇಕಾಗುತ್ತದೆ’ ಎಂದು ಹೇಳಲಾಗಿದೆ.</p><p>ಯೋಗಮಯ ಎಂ.ಜಿ ಎಂಬುವರು 2024ರಲ್ಲಿ ಇಂಥದ್ದೇ ಅರ್ಜಿಯನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದರು. ‘ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವ ಸಂಸ್ಥೆ ಬಳಿ ನಿಮ್ಮ ಮನವಿ ನೀಡಿ’ ಎಂದು ಆಗ ನ್ಯಾಯಾಲಯ ಹೇಳಿತ್ತು.</p><p>ಈ ಬಳಿಕ ಅರ್ಜಿದಾರರು, ಚುನಾವಣಾ ಆಯೋಗದ ಮೊರೆ ಹೋಗಿದ್ದರು. ‘ಮನವಿ ಸಲ್ಲಿಸಿದರೂ ಇಲ್ಲಿಯವರೆಗೆ ಆಯೋಗದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>