<p><strong>ತಿರುವನಂತಪುರ:</strong> ಕಾಂಗ್ರೆಸ್ ಪಕ್ಷದಿಂದ ಈಗಾಗಲೇ ಅಮಾನತುಗೊಂಡಿರುವ ಪಾಲಕ್ಕಾಡ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಅತ್ಯಾಚಾರ ಹಾಗೂ ಬಲವಂತದ ಗರ್ಭಪಾತದ ಆರೋಪದ ಮೇಲೆ ಪೊಲೀಸ್ ಪ್ರಕರಣ ದಾಖಲಾಗಿದೆ. </p><p> ಇದರ ಬೆನ್ನಲ್ಲೇ, ರಾಹುಲ್ ತಲೆಮರೆಸಿಕೊಂಡಿದ್ದು, ಪೊಲೀಸರು ಲುಕ್ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ. ಆರೋಪಿಯು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.</p><p> ಇದೇ ಡಿಸೆಂಬರ್ 9 ಹಾಗೂ 11ರಂದು ರಾಜ್ಯ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಆಡಳಿತಾರೂಢ ಎಲ್ಡಿಎಫ್ ಹಾಗೂ ಕಾಂಗ್ರೆಸ್ ನೇತೃತ್ವದ ಯುಡಿಎಫ್ ವಿರುದ್ಧ ಭಾರಿ ಹಣಾಹಣಿ ನಡೆಯುತ್ತಿದೆ. ಇದರ ಮಧ್ಯದಲ್ಲಿಯೇ, ರಾಹುಲ್ ವಿರುದ್ಧ ಆರೋಪ ಕೇಳಿಬಂದಿದೆ.</p><p> ಶಾಸಕರ ವಿರುದ್ಧ ಈ ಹಿಂದೆ ಹಲವು ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಕೂಡ ಲೈಂಗಿಕ ಕಿರುಕುಳದ ದೂರು ನೀಡಿದ್ದರು. ಈ ಬೆಳವಣಿಗೆ ಬಳಿಕ ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಕಳೆದ ಆಗಸ್ಟ್ನಲ್ಲಿ ಪಕ್ಷದಿಂದಲೂ ಅಮಾನತುಗೊಳಿಸಲಾಗಿತ್ತು. ನಂತರ ಪೊಲೀಸರೇ ಸ್ವಯಂಪ್ರೇರಿತವಾಗಿ ಕಿರುಕುಳದ ಪ್ರಕರಣ ದಾಖಲಿಸಿದ್ದರು. ಆದರೆ, ಯಾವ ಮಹಿಳೆ ಕೂಡ ದೂರು ದಾಖಲಿಸಲು ಮುಂದೆ ಬಂದಿರಲಿಲ್ಲ. ಈ ಕಾರಣದಿಂದಲೇ, ಕಳೆದ ಗುರುವಾರದವರೆಗೂ ಶಾಸಕರು ಹಲವು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.</p> .ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ: ಕೇರಳ ಶಾಸಕ ರಾಹುಲ್ ಕಾಂಗ್ರೆಸ್ನಿಂದ ಅಮಾನತು.ಮೂಡುಬಿದಿರೆ |ಯುವತಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಕರಣ ದಾಖಲು.<p> <strong>ಸಂತ್ರಸ್ತೆಯಿಂದ ಸಿ.ಎಂ ಭೇಟಿ </strong></p><p>ರಾಹುಲ್ ನನ್ನ ಮೇಲೆ ಹಲವು ಲೈಂಗಿಕ ದೌರ್ಜನ್ಯವೆಸಗಿದ್ದು, ಬಲವಂತವಾಗಿ ಗರ್ಭಪಾತವೆಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆಯೊಬ್ಬರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿಯಾಗಿ ಗುರುವಾರ ದೂರು ನೀಡಿದ್ದರು. ಮದುವೆಯಾಗುವುದಾಗಿ ನಂಬಿಸಿ, ಹಲವು ಸಲ ಅತ್ಯಾಚಾರವೆಸಗಿದ್ದರು ಎಂದು ದೂರಿನಲ್ಲಿ ತಿಳಿಸಿದ್ದರು.</p><p>ಮಹಿಳೆಯ ದೂರು ಆಧರಿಸಿ, ಶಾಸಕ ವಿರುದ್ಧ ಬಿಎನ್ಎಸ್ನ ಅಡಿಯಲ್ಲಿ ಅತ್ಯಾಚಾರ, ಬಲವಂತದ ಗರ್ಭಪಾತದ ಪ್ರಕರಣ ದಾಖಲಿಸಲಾಗಿತ್ತು.</p><p>ಇದರ ಬೆನ್ನಲ್ಲೇ, ಶಾಸಕ ರಾಹುಲ್ ತಿರುವನಂತಪುರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. </p><p>ಸಂತ್ರಸ್ತೆ ಜೊತೆ ಒಪ್ಪಿತ ದೈಹಿಕ ಸಂಬಂಧವಿತ್ತು. ಬಲವಂತದ ಗರ್ಭಪಾತಕ್ಕೆ ಒತ್ತಾಯಿಸಿರಲಿಲ್ಲ ಎಂದು ಆರೋಪವನ್ನು ನಿರಾಕರಿಸಿದ್ದಾರೆ.</p><p>ದೂರಿನ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ಕೇರಳ ಘಟಕದ ಅಧ್ಯಕ್ಷ ಸನ್ನಿ ಜೋಸೆಫ್, ‘ರಾಹುಲ್ ಮಾಂಕೂಟತ್ತಿಲ್ ಅವರನ್ನು ಈಗಾಗಲೇ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕಾಂಗ್ರೆಸ್ ಪಕ್ಷದಿಂದ ಈಗಾಗಲೇ ಅಮಾನತುಗೊಂಡಿರುವ ಪಾಲಕ್ಕಾಡ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಅತ್ಯಾಚಾರ ಹಾಗೂ ಬಲವಂತದ ಗರ್ಭಪಾತದ ಆರೋಪದ ಮೇಲೆ ಪೊಲೀಸ್ ಪ್ರಕರಣ ದಾಖಲಾಗಿದೆ. </p><p> ಇದರ ಬೆನ್ನಲ್ಲೇ, ರಾಹುಲ್ ತಲೆಮರೆಸಿಕೊಂಡಿದ್ದು, ಪೊಲೀಸರು ಲುಕ್ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ. ಆರೋಪಿಯು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.</p><p> ಇದೇ ಡಿಸೆಂಬರ್ 9 ಹಾಗೂ 11ರಂದು ರಾಜ್ಯ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಆಡಳಿತಾರೂಢ ಎಲ್ಡಿಎಫ್ ಹಾಗೂ ಕಾಂಗ್ರೆಸ್ ನೇತೃತ್ವದ ಯುಡಿಎಫ್ ವಿರುದ್ಧ ಭಾರಿ ಹಣಾಹಣಿ ನಡೆಯುತ್ತಿದೆ. ಇದರ ಮಧ್ಯದಲ್ಲಿಯೇ, ರಾಹುಲ್ ವಿರುದ್ಧ ಆರೋಪ ಕೇಳಿಬಂದಿದೆ.</p><p> ಶಾಸಕರ ವಿರುದ್ಧ ಈ ಹಿಂದೆ ಹಲವು ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಕೂಡ ಲೈಂಗಿಕ ಕಿರುಕುಳದ ದೂರು ನೀಡಿದ್ದರು. ಈ ಬೆಳವಣಿಗೆ ಬಳಿಕ ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಕಳೆದ ಆಗಸ್ಟ್ನಲ್ಲಿ ಪಕ್ಷದಿಂದಲೂ ಅಮಾನತುಗೊಳಿಸಲಾಗಿತ್ತು. ನಂತರ ಪೊಲೀಸರೇ ಸ್ವಯಂಪ್ರೇರಿತವಾಗಿ ಕಿರುಕುಳದ ಪ್ರಕರಣ ದಾಖಲಿಸಿದ್ದರು. ಆದರೆ, ಯಾವ ಮಹಿಳೆ ಕೂಡ ದೂರು ದಾಖಲಿಸಲು ಮುಂದೆ ಬಂದಿರಲಿಲ್ಲ. ಈ ಕಾರಣದಿಂದಲೇ, ಕಳೆದ ಗುರುವಾರದವರೆಗೂ ಶಾಸಕರು ಹಲವು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.</p> .ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ: ಕೇರಳ ಶಾಸಕ ರಾಹುಲ್ ಕಾಂಗ್ರೆಸ್ನಿಂದ ಅಮಾನತು.ಮೂಡುಬಿದಿರೆ |ಯುವತಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಕರಣ ದಾಖಲು.<p> <strong>ಸಂತ್ರಸ್ತೆಯಿಂದ ಸಿ.ಎಂ ಭೇಟಿ </strong></p><p>ರಾಹುಲ್ ನನ್ನ ಮೇಲೆ ಹಲವು ಲೈಂಗಿಕ ದೌರ್ಜನ್ಯವೆಸಗಿದ್ದು, ಬಲವಂತವಾಗಿ ಗರ್ಭಪಾತವೆಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆಯೊಬ್ಬರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿಯಾಗಿ ಗುರುವಾರ ದೂರು ನೀಡಿದ್ದರು. ಮದುವೆಯಾಗುವುದಾಗಿ ನಂಬಿಸಿ, ಹಲವು ಸಲ ಅತ್ಯಾಚಾರವೆಸಗಿದ್ದರು ಎಂದು ದೂರಿನಲ್ಲಿ ತಿಳಿಸಿದ್ದರು.</p><p>ಮಹಿಳೆಯ ದೂರು ಆಧರಿಸಿ, ಶಾಸಕ ವಿರುದ್ಧ ಬಿಎನ್ಎಸ್ನ ಅಡಿಯಲ್ಲಿ ಅತ್ಯಾಚಾರ, ಬಲವಂತದ ಗರ್ಭಪಾತದ ಪ್ರಕರಣ ದಾಖಲಿಸಲಾಗಿತ್ತು.</p><p>ಇದರ ಬೆನ್ನಲ್ಲೇ, ಶಾಸಕ ರಾಹುಲ್ ತಿರುವನಂತಪುರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. </p><p>ಸಂತ್ರಸ್ತೆ ಜೊತೆ ಒಪ್ಪಿತ ದೈಹಿಕ ಸಂಬಂಧವಿತ್ತು. ಬಲವಂತದ ಗರ್ಭಪಾತಕ್ಕೆ ಒತ್ತಾಯಿಸಿರಲಿಲ್ಲ ಎಂದು ಆರೋಪವನ್ನು ನಿರಾಕರಿಸಿದ್ದಾರೆ.</p><p>ದೂರಿನ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ಕೇರಳ ಘಟಕದ ಅಧ್ಯಕ್ಷ ಸನ್ನಿ ಜೋಸೆಫ್, ‘ರಾಹುಲ್ ಮಾಂಕೂಟತ್ತಿಲ್ ಅವರನ್ನು ಈಗಾಗಲೇ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>