<p><strong>ನವದೆಹಲಿ</strong>: ಕೇಂದ್ರದ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ‘ಒಂದು ದೇಶ, ಒಂದೇ ಚುನಾವಣೆ’ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. 'ಇಂಡಿಯಾ’ ಬಣದ ನಾಯಕರು ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.</p><p>ಈ ತಿದ್ದುಪಡಿ ಮಸೂದೆಯು ಮೂಲ ರಚನೆಯನ್ನೇ ಬುಡಮೇಲು ಮಾಡುವಂತಿದೆ. ಹಾಗಾಗಿ, ಕೂಡಲೇ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. </p><p> ‘ಒಂದು ದೇಶ, ಒಂದೇ ಚುನಾವಣೆ’ ತಿದ್ದುಪಡಿ ಮಸೂದೆಯು ಸಂವಿಧಾನ ವಿರೋಧಿ ಮಸೂದೆಯಾಗಿದ್ದು, ಭಾರತದ ಪ್ರಜೆಗಳ ಮತದಾನದ ಹಕ್ಕಿಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ.</p><p>ರಾಷ್ಟ್ರಪತಿಗೆ ಚುನಾವಣೆ ಕುರಿತಂತೆ ಸಲಹೆ ನೀಡಬಹುದಾದ ಅಧಿಕಾರವನ್ನು ಚುನಾವಣಾ ಆಯೋಗಕ್ಕೆ ನೀಡುವಿಕೆಯ ಪ್ರಸ್ತಾಪವು ಅಸಾಂವಿಧಾನಿಕ ಎಂದಿದ್ದಾರೆ.</p><p>ಈ ಮಸೂದೆಯ ಪ್ರಸ್ತಾಪಗಳು ಸ್ವಯಂ ಆಡಳಿತ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಹಕ್ಕುಗಳ ಉಲ್ಲಂಘನೆಯಾಗಿವೆ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಕೇಂದ್ರದ ಉಪಾಂಗವಲ್ಲ. ಇದನ್ನು ಅಂಗೀಕರಿಸುವ ಸಾಮರ್ಥ್ಯ ಸಂಸತ್ತಿಗಿಲ್ಲ ಎಂದು ಸಂಸದ ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ.</p><p>ಮಸೂದೆಯ ಪರಿಶೀಲನೆಗೆ ಜಂಟಿ ಸಂಸದೀಯ ಸಮಿತಿಗೆ ಕಳುಹಿಸುವಂತೆ ಡಿಎಂಕೆ ಆಗ್ರಹಿಸಿದೆ.</p><p>ಈ ನಡುವೆ, ಗೃಹ ಸಚಿವ ಅಮಿತ್ ಶಾ ಅವರ ಸಲಹೆ ಆಧರಿಸಿ ಮಸೂದೆಯನ್ನು ಮತ್ತಷ್ಟು ಚರ್ಚೆಗೆ ಒಳಪಡಿಸಲು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲು ಸರ್ಕಾರ ಬಯಸಿದೆ ಎಂದು ಮೇಘವಾಲ್ ಘೋಷಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರದ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ‘ಒಂದು ದೇಶ, ಒಂದೇ ಚುನಾವಣೆ’ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. 'ಇಂಡಿಯಾ’ ಬಣದ ನಾಯಕರು ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.</p><p>ಈ ತಿದ್ದುಪಡಿ ಮಸೂದೆಯು ಮೂಲ ರಚನೆಯನ್ನೇ ಬುಡಮೇಲು ಮಾಡುವಂತಿದೆ. ಹಾಗಾಗಿ, ಕೂಡಲೇ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. </p><p> ‘ಒಂದು ದೇಶ, ಒಂದೇ ಚುನಾವಣೆ’ ತಿದ್ದುಪಡಿ ಮಸೂದೆಯು ಸಂವಿಧಾನ ವಿರೋಧಿ ಮಸೂದೆಯಾಗಿದ್ದು, ಭಾರತದ ಪ್ರಜೆಗಳ ಮತದಾನದ ಹಕ್ಕಿಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ.</p><p>ರಾಷ್ಟ್ರಪತಿಗೆ ಚುನಾವಣೆ ಕುರಿತಂತೆ ಸಲಹೆ ನೀಡಬಹುದಾದ ಅಧಿಕಾರವನ್ನು ಚುನಾವಣಾ ಆಯೋಗಕ್ಕೆ ನೀಡುವಿಕೆಯ ಪ್ರಸ್ತಾಪವು ಅಸಾಂವಿಧಾನಿಕ ಎಂದಿದ್ದಾರೆ.</p><p>ಈ ಮಸೂದೆಯ ಪ್ರಸ್ತಾಪಗಳು ಸ್ವಯಂ ಆಡಳಿತ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಹಕ್ಕುಗಳ ಉಲ್ಲಂಘನೆಯಾಗಿವೆ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಕೇಂದ್ರದ ಉಪಾಂಗವಲ್ಲ. ಇದನ್ನು ಅಂಗೀಕರಿಸುವ ಸಾಮರ್ಥ್ಯ ಸಂಸತ್ತಿಗಿಲ್ಲ ಎಂದು ಸಂಸದ ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ.</p><p>ಮಸೂದೆಯ ಪರಿಶೀಲನೆಗೆ ಜಂಟಿ ಸಂಸದೀಯ ಸಮಿತಿಗೆ ಕಳುಹಿಸುವಂತೆ ಡಿಎಂಕೆ ಆಗ್ರಹಿಸಿದೆ.</p><p>ಈ ನಡುವೆ, ಗೃಹ ಸಚಿವ ಅಮಿತ್ ಶಾ ಅವರ ಸಲಹೆ ಆಧರಿಸಿ ಮಸೂದೆಯನ್ನು ಮತ್ತಷ್ಟು ಚರ್ಚೆಗೆ ಒಳಪಡಿಸಲು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲು ಸರ್ಕಾರ ಬಯಸಿದೆ ಎಂದು ಮೇಘವಾಲ್ ಘೋಷಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>