<p><strong>ಪ್ರಯಾಗರಾಜ್</strong>: ಕೃಷ್ಣ ಜನ್ಮಭೂಮಿ – ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದಂತೆ ಎರಡೂ ಕಡೆಯವರ ವಾದವನ್ನು ಆಲಿಸಿರುವ ಅಲಹಾಬಾದ್ ಹೈಕೋರ್ಟ್, ಮಸೀದಿ ಸಂಕೀರ್ಣದ ಸಮೀಕ್ಷೆ ಹೇಗಿರಬೇಕು ಎಂಬುದರ ಆದೇಶವನ್ನು ನಂತರ ಪ್ರಕಟಿಸುವುದಾಗಿ ಹೇಳಿದೆ.</p>.<p>ಮಥುರಾದಲ್ಲಿನ ಕೃಷ್ಣ ಜನ್ಮಭೂಮಿ ದೇವಸ್ಥಾನದ ಪಕ್ಕದಲ್ಲಿ ಇರುವ ಶಾಹಿ ಈದ್ಗಾದ ಸಮೀಕ್ಷೆಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಸಲು ಹೈಕೋರ್ಟ್ ಒಪ್ಪಿತ್ತು. ಸಮೀಕ್ಷೆಯು ಹೇಗಿರಬೇಕು ಎಂಬುದನ್ನು ಮುಂದಿನ ವಿಚಾರಣೆಯಲ್ಲಿ ಚರ್ಚಿಸಬಹುದು ಎಂದು ಹೇಳಿತ್ತು.</p>.<p>ನ್ಯಾಯಮೂರ್ತಿ ಮಯಾಂಕ್ ಕುಮಾರ್ ಜೈನ್ ಅವರು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. </p>.<p>ಗುರುವಾರ ವಿಚಾರಣೆ ಆರಂಭವಾಗುತ್ತಿದ್ದಂತೆ, ಮುಸ್ಲಿಮರ ಪರ ವಕೀಲರು ವಿಚಾರಣೆ ಮುಂದೂಡುವಂತೆ ಕೋರಿದರು. ಸಮೀಕ್ಷೆಗೆ ನೀಡಿರುವ ಆದೇಶವನ್ನು ಪ್ರಶ್ನಿಸಿರುವ ಮೇಲ್ಮನವಿಯೊಂದರ ವಿಚಾರಣೆ ಬಾಕಿರುವ ಇರುವ ಕಾರಣ ಈ ವಿಚಾರಣೆಯನ್ನು ಮುಂದೂಡಬೇಕು ಎಂದರು. </p>.<p>ಸಮೀಕ್ಷೆ ನಡೆಸುವ ತಂಡದಲ್ಲಿ ಯಾರಿರಬೇಕು ಎಂಬ ಆದೇಶ ನೀಡಿದಾಕ್ಷಣ ಯಾರಿಗೂ ತೊಂದರೆ ಆಗುವುದಿಲ್ಲ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮೀಕ್ಷೆ ತಂಡವನ್ನು ರಚಿಸಬಹುದು ಎಂದು ಹಿಂದೂಗಳ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.</p>.<p>ಎರಡೂ ಕಡೆಯವರ ವಾದ ಆಲಿಸಿದ ನ್ಯಾಯಪೀಠವು, ಆದೇಶವನ್ನು ನಂತರ ನೀಡಲಾಗುತ್ತದೆ. ಅದನ್ನು ಹೈಕೋರ್ಟ್ನ ಪೋರ್ಟಲ್ನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಯಾಗರಾಜ್</strong>: ಕೃಷ್ಣ ಜನ್ಮಭೂಮಿ – ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದಂತೆ ಎರಡೂ ಕಡೆಯವರ ವಾದವನ್ನು ಆಲಿಸಿರುವ ಅಲಹಾಬಾದ್ ಹೈಕೋರ್ಟ್, ಮಸೀದಿ ಸಂಕೀರ್ಣದ ಸಮೀಕ್ಷೆ ಹೇಗಿರಬೇಕು ಎಂಬುದರ ಆದೇಶವನ್ನು ನಂತರ ಪ್ರಕಟಿಸುವುದಾಗಿ ಹೇಳಿದೆ.</p>.<p>ಮಥುರಾದಲ್ಲಿನ ಕೃಷ್ಣ ಜನ್ಮಭೂಮಿ ದೇವಸ್ಥಾನದ ಪಕ್ಕದಲ್ಲಿ ಇರುವ ಶಾಹಿ ಈದ್ಗಾದ ಸಮೀಕ್ಷೆಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಸಲು ಹೈಕೋರ್ಟ್ ಒಪ್ಪಿತ್ತು. ಸಮೀಕ್ಷೆಯು ಹೇಗಿರಬೇಕು ಎಂಬುದನ್ನು ಮುಂದಿನ ವಿಚಾರಣೆಯಲ್ಲಿ ಚರ್ಚಿಸಬಹುದು ಎಂದು ಹೇಳಿತ್ತು.</p>.<p>ನ್ಯಾಯಮೂರ್ತಿ ಮಯಾಂಕ್ ಕುಮಾರ್ ಜೈನ್ ಅವರು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. </p>.<p>ಗುರುವಾರ ವಿಚಾರಣೆ ಆರಂಭವಾಗುತ್ತಿದ್ದಂತೆ, ಮುಸ್ಲಿಮರ ಪರ ವಕೀಲರು ವಿಚಾರಣೆ ಮುಂದೂಡುವಂತೆ ಕೋರಿದರು. ಸಮೀಕ್ಷೆಗೆ ನೀಡಿರುವ ಆದೇಶವನ್ನು ಪ್ರಶ್ನಿಸಿರುವ ಮೇಲ್ಮನವಿಯೊಂದರ ವಿಚಾರಣೆ ಬಾಕಿರುವ ಇರುವ ಕಾರಣ ಈ ವಿಚಾರಣೆಯನ್ನು ಮುಂದೂಡಬೇಕು ಎಂದರು. </p>.<p>ಸಮೀಕ್ಷೆ ನಡೆಸುವ ತಂಡದಲ್ಲಿ ಯಾರಿರಬೇಕು ಎಂಬ ಆದೇಶ ನೀಡಿದಾಕ್ಷಣ ಯಾರಿಗೂ ತೊಂದರೆ ಆಗುವುದಿಲ್ಲ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮೀಕ್ಷೆ ತಂಡವನ್ನು ರಚಿಸಬಹುದು ಎಂದು ಹಿಂದೂಗಳ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.</p>.<p>ಎರಡೂ ಕಡೆಯವರ ವಾದ ಆಲಿಸಿದ ನ್ಯಾಯಪೀಠವು, ಆದೇಶವನ್ನು ನಂತರ ನೀಡಲಾಗುತ್ತದೆ. ಅದನ್ನು ಹೈಕೋರ್ಟ್ನ ಪೋರ್ಟಲ್ನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>