ಪ್ರಯಾಗ್ರಾಜ್(ಉತ್ತರ ಪ್ರದೇಶ): ಕೃಷ್ಣ ಜನ್ಮಭೂಮಿ ದೇವಸ್ಥಾನವು ಸಂರಕ್ಷಿತ ಸ್ಮಾರಕವಾಗಿದೆ. ಹಾಗಾಗಿ, ಈ ದೇವಸ್ಥಾನದ ಮೇಲ್ವಿಚಾರಣೆಯು ಪ್ರಾಚೀನ ಸ್ಮಾರಕಗಳು ಹಾಗೂ ಪುರಾತತ್ವ ಸ್ಥಳಗಳು ಮತ್ತು ಅವಶೇಷಗಳ ಕಾಯ್ದೆ ವ್ಯಾಪ್ತಿಗೆ ಬರುತ್ತದೆ ಎಂದು ಹಿಂದೂ ಅರ್ಜಿದಾರರು ಅಲಹಾಬಾದ್ ಹೈಕೋರ್ಟ್ಗೆ ಗುರುವಾರ ತಿಳಿಸಿದ್ದಾರೆ.