<p><strong>ನವದೆಹಲಿ</strong>: ಪ್ರಧಾನಿ ನರೇಂದ್ರ ಮೋದಿಯವರು ಭಾರತ ಮಾತೆ ಗೌರವಕ್ಕೆ ದ್ರೋಹ ಬಗೆದಿದ್ದಾರೆ ಎಂದು ಘೋಷಿಸೋಣವೇ? ಎಂಬುದಾಗಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಎಕ್ಸ್ ಪೋಸ್ಟ್ನಲ್ಲಿ ಹೇಳಿದ್ದಾರೆ.</p><p> ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯು(ಪಿಎಲ್ಎ) 60 ಕಿ.ಮೀ.ನಷ್ಟು ಭಾರತೀಯ ಭೂಪ್ರದೇಶಕ್ಕೆ ಪ್ರವೇಶಿಸಿ, ಬೀಡುಬಿಟ್ಟಿದೆ ಎಂಬ ಲೇಖನ ಒಂದನ್ನು ಉಲ್ಲೇಖಿಸಿ, ಮೋದಿಯು ಭಾರತ ಮಾತೆಯ ಗೌರವಕ್ಕೆ ದ್ರೋಹ ಬಗೆದಿದ್ದಾರೆ ಎಂದು ನಾವು ಘೋಷಿಸೋಣವೇ? ಎಂದು ಪ್ರಶ್ನಿಸಿದ್ದಾರೆ. </p><p>ಅಲ್ಲದೆ, ಚೀನಾ ಜೊತೆಗಿನ ರಾಯಭಾರಿ ಮಟ್ಟದ ಸಂಬಂಧವನ್ನು ಕಡಿದುಕೊಳ್ಳಲು ನಾನು ಒತ್ತಾಯಿಸುತ್ತೇನೆ ಎಂದಿದ್ದಾರೆ.</p><p>ಮೋದಿ ಸರ್ಕಾರದ ವಿರುದ್ಧ ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟೀಕೆಗೈದಿರುವುದು ಇದೇ ಮೊದಲಲ್ಲ. ಕಳೆದ ತಿಂಗಳೂ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು, ವಿದೇಶಿ ನೀತಿಯನ್ನು ಪ್ರಶ್ನಿಸಿದ್ದರು.</p><p>'ಮಾಲ್ದಿವ್ಸ್ ಸಿಂಡ್ರೋಮ್' ಬಾಂಗ್ಲಾದೇಶದಲ್ಲಿ ಮೌನವಾಗಿ ಹರಡುವುದು ಮುಂದುವರಿದಿದೆ ಮತ್ತು ಮೋದಿಯವರ ಪರಂಪರೆಯು ಭಾರತದ ವಿಘಟನೆಗಾಗಿ ಕೆಲಸ ಮಾಡುವ ನೆರೆಹೊರೆಯವರ್ನು ಸೃಷ್ಟಿಸುತ್ತದೆ’ ಎಂಬ ತಲೆಬರಹವಿರುವ BLiTZನ ಲೇಖನವನ್ನು .ಸ್ವಾಮಿ ಹಂಚಿಕೊಂಡಿದ್ದರು.</p><p>‘ಮುಂಬರುವ 25 ವರ್ಷಗಳ 'ಅದ್ಭುತ' ಮೋದಿ ಪರಂಪರೆ: ಭಾರತವನ್ನು ಸುತ್ತುವರೆದಿರುವ ನೆರೆಹೊರೆಯವರು ನಮ್ಮ ವಿಘಟನೆಗಾಗಿ ಕೆಲಸ ಮಾಡುತ್ತಾರೆ’ ಎಂದು ಅವರು ಬರೆದುಕೊಂಡಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪ್ರಧಾನಿ ನರೇಂದ್ರ ಮೋದಿಯವರು ಭಾರತ ಮಾತೆ ಗೌರವಕ್ಕೆ ದ್ರೋಹ ಬಗೆದಿದ್ದಾರೆ ಎಂದು ಘೋಷಿಸೋಣವೇ? ಎಂಬುದಾಗಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಎಕ್ಸ್ ಪೋಸ್ಟ್ನಲ್ಲಿ ಹೇಳಿದ್ದಾರೆ.</p><p> ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯು(ಪಿಎಲ್ಎ) 60 ಕಿ.ಮೀ.ನಷ್ಟು ಭಾರತೀಯ ಭೂಪ್ರದೇಶಕ್ಕೆ ಪ್ರವೇಶಿಸಿ, ಬೀಡುಬಿಟ್ಟಿದೆ ಎಂಬ ಲೇಖನ ಒಂದನ್ನು ಉಲ್ಲೇಖಿಸಿ, ಮೋದಿಯು ಭಾರತ ಮಾತೆಯ ಗೌರವಕ್ಕೆ ದ್ರೋಹ ಬಗೆದಿದ್ದಾರೆ ಎಂದು ನಾವು ಘೋಷಿಸೋಣವೇ? ಎಂದು ಪ್ರಶ್ನಿಸಿದ್ದಾರೆ. </p><p>ಅಲ್ಲದೆ, ಚೀನಾ ಜೊತೆಗಿನ ರಾಯಭಾರಿ ಮಟ್ಟದ ಸಂಬಂಧವನ್ನು ಕಡಿದುಕೊಳ್ಳಲು ನಾನು ಒತ್ತಾಯಿಸುತ್ತೇನೆ ಎಂದಿದ್ದಾರೆ.</p><p>ಮೋದಿ ಸರ್ಕಾರದ ವಿರುದ್ಧ ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟೀಕೆಗೈದಿರುವುದು ಇದೇ ಮೊದಲಲ್ಲ. ಕಳೆದ ತಿಂಗಳೂ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು, ವಿದೇಶಿ ನೀತಿಯನ್ನು ಪ್ರಶ್ನಿಸಿದ್ದರು.</p><p>'ಮಾಲ್ದಿವ್ಸ್ ಸಿಂಡ್ರೋಮ್' ಬಾಂಗ್ಲಾದೇಶದಲ್ಲಿ ಮೌನವಾಗಿ ಹರಡುವುದು ಮುಂದುವರಿದಿದೆ ಮತ್ತು ಮೋದಿಯವರ ಪರಂಪರೆಯು ಭಾರತದ ವಿಘಟನೆಗಾಗಿ ಕೆಲಸ ಮಾಡುವ ನೆರೆಹೊರೆಯವರ್ನು ಸೃಷ್ಟಿಸುತ್ತದೆ’ ಎಂಬ ತಲೆಬರಹವಿರುವ BLiTZನ ಲೇಖನವನ್ನು .ಸ್ವಾಮಿ ಹಂಚಿಕೊಂಡಿದ್ದರು.</p><p>‘ಮುಂಬರುವ 25 ವರ್ಷಗಳ 'ಅದ್ಭುತ' ಮೋದಿ ಪರಂಪರೆ: ಭಾರತವನ್ನು ಸುತ್ತುವರೆದಿರುವ ನೆರೆಹೊರೆಯವರು ನಮ್ಮ ವಿಘಟನೆಗಾಗಿ ಕೆಲಸ ಮಾಡುತ್ತಾರೆ’ ಎಂದು ಅವರು ಬರೆದುಕೊಂಡಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>