<p class="title"><strong>ಕೋಲ್ಕತ್ತ:</strong> ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಭಯದಿಂದ ಪಶ್ಚಿಮ ಬಂಗಾಳದಲ್ಲಿ ಆರು ಮಂದಿ ಮೃತಪಟ್ಟಿದ್ದು, ಬಿಜೆಪಿ ಈ ಬಗ್ಗೆ ಭಯ ಸೃಷ್ಟಿಸಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂರಿದ್ದಾರೆ.</p>.<p class="title">ಇಂಡಿಯನ್ ನ್ಯಾಷನಲ್ ತೃಣಮೂಲ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTTUC) ಸಮಾವೇಶದಲ್ಲಿ ಮಾತನಾಡಿದ ಅವರು, 'ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಈ ಬಗ್ಗೆ ರಾಜಕೀಯ ಲಾಭ ಗಳಿಸಲು ಯತ್ನಿಸುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಆರು ಮಂದಿ ಮೃತಪಟ್ಟಿರುವುದಾಗಿ ಹೇಳಲು ಬೇಸರವಾಗುತ್ತಿದೆ. ಸಾವಿಗೆ ಕಾರಣವಾದ ಆತಂಕ ಸೃಷ್ಟಿಸಿರುವ ಬಿಜೆಪಿ ಮುಖಂಡರಿಗೆ ನಾಚಿಕೆ ಆಗಬೇಕು' ಎಂದು ಟೀಕಿಸಿದರು.</p>.<p class="title">ಬಂಗಾಳದಲ್ಲಿ ಎನ್ಆರ್ಸಿಗೆ ಅನುಮತಿ ನೀಡಲಾಗದು ಎಂದು ಇದೇ ಸಂದರ್ಭದಲ್ಲಿ ಅವರು ಸ್ಪಷ್ಟಪಡಿಸಿದರು.</p>.<p class="title">ಬಂಗಾಳದಲ್ಲಾಗಲೀ, ಇತರ ಯಾವುದೇ ಪ್ರದೇಶದಲ್ಲಾಗಲೀ ಎನ್ಆರ್ಸಿಗೆ ಅವಕಾಶ ಇರದು. ಈ ಒಪ್ಪಂದಕ್ಕೆ ಅಸ್ಸಾಂ ಸಮ್ಮತಿಸಿರುವುದರಿಂದ ಅಲ್ಲಿ ಎನ್ಆರ್ಸಿಗೆ ಅವಕಾಶ ನೀಡಲಾಗಿದೆ. ಹಿಂದೂ ಮುಸ್ಲಿಮರನ್ನು ವಿಭಜಿಸಲು ಕೆಲವರು ಎನ್ಆರ್ಸಿ ಕುರಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಸ್ಸಾಂನಲ್ಲಿ 13 ಲಕ್ಷ ಹಿಂದೂಗಳನ್ನು ಎನ್ಆರ್ಸಿಯಿಂದ ಕೈಬಿಡಲಾಗಿದೆ. ಮುಸ್ಲಿಮರು, ಅಸ್ಸಾಮಿಯರು,ಹಿಂದಿ ಮಾತನಾಡುವವರನ್ನು ಕೈಬಿಡಲಾಗಿದೆ ಎಂದು ಬ್ಯಾನರ್ಜಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೋಲ್ಕತ್ತ:</strong> ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಭಯದಿಂದ ಪಶ್ಚಿಮ ಬಂಗಾಳದಲ್ಲಿ ಆರು ಮಂದಿ ಮೃತಪಟ್ಟಿದ್ದು, ಬಿಜೆಪಿ ಈ ಬಗ್ಗೆ ಭಯ ಸೃಷ್ಟಿಸಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂರಿದ್ದಾರೆ.</p>.<p class="title">ಇಂಡಿಯನ್ ನ್ಯಾಷನಲ್ ತೃಣಮೂಲ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTTUC) ಸಮಾವೇಶದಲ್ಲಿ ಮಾತನಾಡಿದ ಅವರು, 'ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಈ ಬಗ್ಗೆ ರಾಜಕೀಯ ಲಾಭ ಗಳಿಸಲು ಯತ್ನಿಸುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಆರು ಮಂದಿ ಮೃತಪಟ್ಟಿರುವುದಾಗಿ ಹೇಳಲು ಬೇಸರವಾಗುತ್ತಿದೆ. ಸಾವಿಗೆ ಕಾರಣವಾದ ಆತಂಕ ಸೃಷ್ಟಿಸಿರುವ ಬಿಜೆಪಿ ಮುಖಂಡರಿಗೆ ನಾಚಿಕೆ ಆಗಬೇಕು' ಎಂದು ಟೀಕಿಸಿದರು.</p>.<p class="title">ಬಂಗಾಳದಲ್ಲಿ ಎನ್ಆರ್ಸಿಗೆ ಅನುಮತಿ ನೀಡಲಾಗದು ಎಂದು ಇದೇ ಸಂದರ್ಭದಲ್ಲಿ ಅವರು ಸ್ಪಷ್ಟಪಡಿಸಿದರು.</p>.<p class="title">ಬಂಗಾಳದಲ್ಲಾಗಲೀ, ಇತರ ಯಾವುದೇ ಪ್ರದೇಶದಲ್ಲಾಗಲೀ ಎನ್ಆರ್ಸಿಗೆ ಅವಕಾಶ ಇರದು. ಈ ಒಪ್ಪಂದಕ್ಕೆ ಅಸ್ಸಾಂ ಸಮ್ಮತಿಸಿರುವುದರಿಂದ ಅಲ್ಲಿ ಎನ್ಆರ್ಸಿಗೆ ಅವಕಾಶ ನೀಡಲಾಗಿದೆ. ಹಿಂದೂ ಮುಸ್ಲಿಮರನ್ನು ವಿಭಜಿಸಲು ಕೆಲವರು ಎನ್ಆರ್ಸಿ ಕುರಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಸ್ಸಾಂನಲ್ಲಿ 13 ಲಕ್ಷ ಹಿಂದೂಗಳನ್ನು ಎನ್ಆರ್ಸಿಯಿಂದ ಕೈಬಿಡಲಾಗಿದೆ. ಮುಸ್ಲಿಮರು, ಅಸ್ಸಾಮಿಯರು,ಹಿಂದಿ ಮಾತನಾಡುವವರನ್ನು ಕೈಬಿಡಲಾಗಿದೆ ಎಂದು ಬ್ಯಾನರ್ಜಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>