<p><strong>ಪುಣೆ:</strong> ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ(ಎನ್ಸಿಪಿ) ಶರದ್ ಪವಾರ್ ಬಣ ಮತ್ತು ಅಜಿತ್ ಪವಾರ್ ಬಣ ಮುಂದಿನ ಜಿಲ್ಲಾ ಪರಿಷತ್ ಮತ್ತು ಪಂಚಾಯತ್ ಸಮಿತಿ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸಿದೆ.</p>.<p>ಪುಣೆ ನಗರ ಪಾಲಿಕೆ ಚುನಾವಣೆಯಲ್ಲಿ ಎನ್ಸಿಪಿಯ ಎರಡು ಬಣಗಳು ತೀವ್ರ ಸೋಲನುಭವಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.</p>.<p>‘ಎರಡೂ ಬಣಗಳು ಚರ್ಚೆ ನಡೆಸಿವೆ. 12 ಜಿಲ್ಲಾ ಪರಿಷದ್ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸಲಿದ್ದೇವೆ. ಮೈತ್ರಿ ಮಾಡಿಕೊಳ್ಳುವ ಅಗತ್ಯವಿದ್ದರೆ ಯೋಚನೆ ಮಾಡುತ್ತೇವೆ’ ಎಂದು ಎನ್ಸಿಪಿ(ಶರದ್ ಬಣ) ಮಹಾರಾಷ್ಟ್ರ ಘಟಕದ ಅಧ್ಯಕ್ಷ ಶಶಿಕಾಂತ್ ಶಿಂದೆ ಅವರು ತಿಳಿಸಿದ್ದಾರೆ.</p>.<p>ಈ ಕುರಿತು ಶರದ್ ಪವಾರ್ ನಿವಾಸದಲ್ಲಿ ನಡೆದ ಚರ್ಚೆಯಲ್ಲಿ ಅಜಿತ್ ಪವಾರ್, ಸುಪ್ರಿಯಾ ಸುಳೆ ಸೇರಿದಂತೆ ಎರಡು ಬಣಗಳ ಪ್ರಮುಖ ನಾಯಕರು ಭಾಗಿಯಾಗಿದ್ದರು.</p>.<p>ಮಹಾರಾಷ್ಟ್ರದ 12 ಜಿಲ್ಲಾ ಪರಿಷತ್ ಮತ್ತು 125 ಪಂಚಾಯತ್ ಸಮಿತಿಗಳಿಗೆ ಫೆಬ್ರುವರಿ 5ರಂದು ಚುನಾವಣೆ ನಡೆಯಲಿದೆ.</p>.ಪುಣೆ ನಗರ ಪಾಲಿಕೆ ಚುನಾವಣೆ: ಎನ್ಸಿಪಿ ಬಣಗಳ ಮಧ್ಯೆ ಮೈತ್ರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ(ಎನ್ಸಿಪಿ) ಶರದ್ ಪವಾರ್ ಬಣ ಮತ್ತು ಅಜಿತ್ ಪವಾರ್ ಬಣ ಮುಂದಿನ ಜಿಲ್ಲಾ ಪರಿಷತ್ ಮತ್ತು ಪಂಚಾಯತ್ ಸಮಿತಿ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸಿದೆ.</p>.<p>ಪುಣೆ ನಗರ ಪಾಲಿಕೆ ಚುನಾವಣೆಯಲ್ಲಿ ಎನ್ಸಿಪಿಯ ಎರಡು ಬಣಗಳು ತೀವ್ರ ಸೋಲನುಭವಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.</p>.<p>‘ಎರಡೂ ಬಣಗಳು ಚರ್ಚೆ ನಡೆಸಿವೆ. 12 ಜಿಲ್ಲಾ ಪರಿಷದ್ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸಲಿದ್ದೇವೆ. ಮೈತ್ರಿ ಮಾಡಿಕೊಳ್ಳುವ ಅಗತ್ಯವಿದ್ದರೆ ಯೋಚನೆ ಮಾಡುತ್ತೇವೆ’ ಎಂದು ಎನ್ಸಿಪಿ(ಶರದ್ ಬಣ) ಮಹಾರಾಷ್ಟ್ರ ಘಟಕದ ಅಧ್ಯಕ್ಷ ಶಶಿಕಾಂತ್ ಶಿಂದೆ ಅವರು ತಿಳಿಸಿದ್ದಾರೆ.</p>.<p>ಈ ಕುರಿತು ಶರದ್ ಪವಾರ್ ನಿವಾಸದಲ್ಲಿ ನಡೆದ ಚರ್ಚೆಯಲ್ಲಿ ಅಜಿತ್ ಪವಾರ್, ಸುಪ್ರಿಯಾ ಸುಳೆ ಸೇರಿದಂತೆ ಎರಡು ಬಣಗಳ ಪ್ರಮುಖ ನಾಯಕರು ಭಾಗಿಯಾಗಿದ್ದರು.</p>.<p>ಮಹಾರಾಷ್ಟ್ರದ 12 ಜಿಲ್ಲಾ ಪರಿಷತ್ ಮತ್ತು 125 ಪಂಚಾಯತ್ ಸಮಿತಿಗಳಿಗೆ ಫೆಬ್ರುವರಿ 5ರಂದು ಚುನಾವಣೆ ನಡೆಯಲಿದೆ.</p>.ಪುಣೆ ನಗರ ಪಾಲಿಕೆ ಚುನಾವಣೆ: ಎನ್ಸಿಪಿ ಬಣಗಳ ಮಧ್ಯೆ ಮೈತ್ರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>