<p><strong>ಜಲ್ನಾ</strong>: ‘ಮಹಾರಾಷ್ಟ್ರದಲ್ಲಿ ಸಾಮಾಜಿಕ ಅಸಮಾನತೆ ಸೃಷ್ಟಿಗೆ ಎನ್ಸಿಪಿ (ಎಸ್ಪಿ) ವರಿಷ್ಠ ಶರದ್ ಪವಾರ್ ಅವರೇ ಕಾರಣ’ ಎಂದು ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಆರೋಪಿಸಿದರು.</p>.<p>ಮರಾಠ ಮೀಸಲಾತಿ ಕುರಿತ ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಮುಖ್ಯಸ್ಥರೂ ಆಗಿರುವ ಸಚಿವ ಪಾಟೀಲ್ ಅವರು ಶರದ್ ಪವಾರ್ ವಿರುದ್ಧ ಗುರುವಾರ ರಾತ್ರಿ ವಾಗ್ದಾಳಿ ನಡೆಸಿದರು.</p>.<p>‘ಪವಾರ್ ಅವರು ಮುಖ್ಯಮಂತ್ರಿ ಆಗಿದ್ದಾಗ 1994ರಲ್ಲಿ ಮಂಡಲ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವಾಗ ಮರಾಠ ಸಮುದಾಯವನ್ನು ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ ಸೇರಿಸಿದ್ದರೆ, ಪ್ರಸ್ತುತ ಮೀಸಲಾತಿ ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ’ ಎಂದರು.</p>.<p>‘ಶರದ್ ಪವಾರ್ ಅವರೇ ಈ ವಿಷಯದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು’ ಎಂದು ಆಗ್ರಹಿಸಿದರು.</p>.<p>ಜಲ್ನಾದ ಅಂತರವಾಲಿ ಸರಾಟಿ ಗ್ರಾಮದಲ್ಲಿ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಅವರೊಂದಿಗೆ ಸಚಿವರು ಗೋಪ್ಯ ಸಭೆ ನಡೆಸಿದರು.</p>.<p>‘ಜರಾಂಗೆ ಆರೋಗ್ಯ ವಿಚಾರಿಸಲು ಇಲ್ಲಿಗೆ ಬಂದಿರುವೆ. ಇದು ವೈಯಕ್ತಿಕ ಭೇಟಿ’ ಎಂದು ಪಾಟೀಲ್ ಪತ್ರಕರ್ತರಿಗೆ ತಿಳಿಸಿದರು.</p>.<p>‘ಮರಾಠ ಮೀಸಲಾತಿಯನ್ನು ಒಬಿಸಿ ನಾಯಕರು ಒಪ್ಪಿಕೊಳ್ಳಬೇಕು’ ಎಂದ ಪಾಟೀಲ್, ಸಚಿವ ಛಗನ್ ಭುಜಬಲ್ ಇದಕ್ಕೆ ವಿರೋಧಿಸಬಾರದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಲ್ನಾ</strong>: ‘ಮಹಾರಾಷ್ಟ್ರದಲ್ಲಿ ಸಾಮಾಜಿಕ ಅಸಮಾನತೆ ಸೃಷ್ಟಿಗೆ ಎನ್ಸಿಪಿ (ಎಸ್ಪಿ) ವರಿಷ್ಠ ಶರದ್ ಪವಾರ್ ಅವರೇ ಕಾರಣ’ ಎಂದು ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಆರೋಪಿಸಿದರು.</p>.<p>ಮರಾಠ ಮೀಸಲಾತಿ ಕುರಿತ ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಮುಖ್ಯಸ್ಥರೂ ಆಗಿರುವ ಸಚಿವ ಪಾಟೀಲ್ ಅವರು ಶರದ್ ಪವಾರ್ ವಿರುದ್ಧ ಗುರುವಾರ ರಾತ್ರಿ ವಾಗ್ದಾಳಿ ನಡೆಸಿದರು.</p>.<p>‘ಪವಾರ್ ಅವರು ಮುಖ್ಯಮಂತ್ರಿ ಆಗಿದ್ದಾಗ 1994ರಲ್ಲಿ ಮಂಡಲ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವಾಗ ಮರಾಠ ಸಮುದಾಯವನ್ನು ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ ಸೇರಿಸಿದ್ದರೆ, ಪ್ರಸ್ತುತ ಮೀಸಲಾತಿ ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ’ ಎಂದರು.</p>.<p>‘ಶರದ್ ಪವಾರ್ ಅವರೇ ಈ ವಿಷಯದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು’ ಎಂದು ಆಗ್ರಹಿಸಿದರು.</p>.<p>ಜಲ್ನಾದ ಅಂತರವಾಲಿ ಸರಾಟಿ ಗ್ರಾಮದಲ್ಲಿ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಅವರೊಂದಿಗೆ ಸಚಿವರು ಗೋಪ್ಯ ಸಭೆ ನಡೆಸಿದರು.</p>.<p>‘ಜರಾಂಗೆ ಆರೋಗ್ಯ ವಿಚಾರಿಸಲು ಇಲ್ಲಿಗೆ ಬಂದಿರುವೆ. ಇದು ವೈಯಕ್ತಿಕ ಭೇಟಿ’ ಎಂದು ಪಾಟೀಲ್ ಪತ್ರಕರ್ತರಿಗೆ ತಿಳಿಸಿದರು.</p>.<p>‘ಮರಾಠ ಮೀಸಲಾತಿಯನ್ನು ಒಬಿಸಿ ನಾಯಕರು ಒಪ್ಪಿಕೊಳ್ಳಬೇಕು’ ಎಂದ ಪಾಟೀಲ್, ಸಚಿವ ಛಗನ್ ಭುಜಬಲ್ ಇದಕ್ಕೆ ವಿರೋಧಿಸಬಾರದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>