<p><strong>ಮುಂಬೈ:</strong> ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಸರಪಂಚ್ ಸಂತೋಷ್ ದೇಶಮುಖ್ ಹತ್ಯೆಯಿಂದಾಗಿ ಬೀಡ್-ಪರ್ಭಾನಿ ಜಿಲ್ಲೆಗಳಲ್ಲಿ ಉಂಟಾಗಿರುವ ಸಾಮಾಜಿಕ ಉದ್ವಿಗ್ನತೆಯನ್ನು ತಹಬಂದಿಗೆ ತರುವ ಪ್ರಯತ್ನಗಳ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷಾತೀತವಾಗಿ ಎಲ್ಲರೂ ಒಟ್ಟಾಗಿ ಪ್ರಯತ್ನಿಸಿದರೆ ಮಾತ್ರ ಬೀಡ್-ಪರ್ಭಾನಿ ಜಿಲ್ಲೆಗಳಲ್ಲಿ ಉದ್ಭವಿಸಿರುವ ಉದ್ವಿಗ್ನತೆಯನ್ನು ಶಮನ ಮಾಡಲು ಸಾಧ್ಯ’ ಎಂದು ಅವರು ಹೇಳಿದ್ದಾರೆ. </p><p>ಬೀಡ್ ಜಿಲ್ಲೆಯ ಸರಪಂಚ್ ಆಗಿದ್ದ ಸಂತೋಷ್ ದೇಶ್ಮುಖ್ ಅವರನ್ನು ಡಿಸೆಂಬರ್ 9ರಂದು ಅಪಹರಿಸಿ, ಹತ್ಯೆ ಮಾಡಲಾಗಿತ್ತು. ಕಂಪನಿಯೊಂದರಿಂದ ಸುಲಿಗೆ ಮಾಡುತ್ತಿರುವುದನ್ನು ವಿರೋಧಿಸಿದ ಕಾರಣಕ್ಕೆ ಸಂತೋಷ್ ಹತ್ಯೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಈಗಾಗಲೇ ಬಂಧಿಸಲಾಗಿದೆ. </p><p>ಸಂತೋಷ್ ಹತ್ಯೆ ಪ್ರಕರಣದ ತನಿಖೆಗೆ ಮಹಾರಾಷ್ಟ್ರ ಸರ್ಕಾರ 10 ಜನರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದೆ.</p><p>ಅಪರಾಧ ತನಿಖಾ ವಿಭಾಗದ (ಸಿಐಡಿ) ಡಿಐಜಿ ಬಸವರಾಜ್ ತೆಲಿ ಅವರ ನೇತೃತ್ವದಲ್ಲಿ ಎಸ್ಐಟಿ ತನಿಖೆ ನಡೆಸಲಿದೆ ಎಂದು ಗೃಹ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.</p>.ಮಹಾರಾಷ್ಟ್ರ | ಸರಪಂಚ್ ಸಂತೋಷ್ ಹತ್ಯೆ ಖಂಡಿಸಿ ಪ್ರತಿಭಟನೆ .ಸರಪಂಚ್ನನ್ನು ಹತ್ಯೆಗೈದವರನ್ನು ಗಲ್ಲಿಗೇರಿಸಿ: ಧನಂಜಯ ಮುಂಡೆ.ಮಹಾರಾಷ್ಟ್ರ | ಸಿಐಡಿಗೆ ಶರಣಾದ ಸಚಿವ ಧನಂಜಯ್ ಮುಂಡೆ ಆಪ್ತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಸರಪಂಚ್ ಸಂತೋಷ್ ದೇಶಮುಖ್ ಹತ್ಯೆಯಿಂದಾಗಿ ಬೀಡ್-ಪರ್ಭಾನಿ ಜಿಲ್ಲೆಗಳಲ್ಲಿ ಉಂಟಾಗಿರುವ ಸಾಮಾಜಿಕ ಉದ್ವಿಗ್ನತೆಯನ್ನು ತಹಬಂದಿಗೆ ತರುವ ಪ್ರಯತ್ನಗಳ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷಾತೀತವಾಗಿ ಎಲ್ಲರೂ ಒಟ್ಟಾಗಿ ಪ್ರಯತ್ನಿಸಿದರೆ ಮಾತ್ರ ಬೀಡ್-ಪರ್ಭಾನಿ ಜಿಲ್ಲೆಗಳಲ್ಲಿ ಉದ್ಭವಿಸಿರುವ ಉದ್ವಿಗ್ನತೆಯನ್ನು ಶಮನ ಮಾಡಲು ಸಾಧ್ಯ’ ಎಂದು ಅವರು ಹೇಳಿದ್ದಾರೆ. </p><p>ಬೀಡ್ ಜಿಲ್ಲೆಯ ಸರಪಂಚ್ ಆಗಿದ್ದ ಸಂತೋಷ್ ದೇಶ್ಮುಖ್ ಅವರನ್ನು ಡಿಸೆಂಬರ್ 9ರಂದು ಅಪಹರಿಸಿ, ಹತ್ಯೆ ಮಾಡಲಾಗಿತ್ತು. ಕಂಪನಿಯೊಂದರಿಂದ ಸುಲಿಗೆ ಮಾಡುತ್ತಿರುವುದನ್ನು ವಿರೋಧಿಸಿದ ಕಾರಣಕ್ಕೆ ಸಂತೋಷ್ ಹತ್ಯೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಈಗಾಗಲೇ ಬಂಧಿಸಲಾಗಿದೆ. </p><p>ಸಂತೋಷ್ ಹತ್ಯೆ ಪ್ರಕರಣದ ತನಿಖೆಗೆ ಮಹಾರಾಷ್ಟ್ರ ಸರ್ಕಾರ 10 ಜನರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದೆ.</p><p>ಅಪರಾಧ ತನಿಖಾ ವಿಭಾಗದ (ಸಿಐಡಿ) ಡಿಐಜಿ ಬಸವರಾಜ್ ತೆಲಿ ಅವರ ನೇತೃತ್ವದಲ್ಲಿ ಎಸ್ಐಟಿ ತನಿಖೆ ನಡೆಸಲಿದೆ ಎಂದು ಗೃಹ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.</p>.ಮಹಾರಾಷ್ಟ್ರ | ಸರಪಂಚ್ ಸಂತೋಷ್ ಹತ್ಯೆ ಖಂಡಿಸಿ ಪ್ರತಿಭಟನೆ .ಸರಪಂಚ್ನನ್ನು ಹತ್ಯೆಗೈದವರನ್ನು ಗಲ್ಲಿಗೇರಿಸಿ: ಧನಂಜಯ ಮುಂಡೆ.ಮಹಾರಾಷ್ಟ್ರ | ಸಿಐಡಿಗೆ ಶರಣಾದ ಸಚಿವ ಧನಂಜಯ್ ಮುಂಡೆ ಆಪ್ತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>