ಅಜಿತ್ ಪವಾರ್ ಬಣವನ್ನು ನಿಜವಾದ ಎನ್ಸಿಪಿ ಎಂದು ಚುನಾವಣಾ ಆಯೋಗವು ಮಾನ್ಯ ಮಾಡಿದೆ. ಇದನ್ನು ಪ್ರಶ್ನಿಸಿ ಶರದ್ ಪವಾರ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಶರದ್ ಪವಾರ್ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಕೆ.ವಿ. ವಿಶ್ವನಾಥನ್ ಅವರು ಇರುವ ವಿಭಾಗೀಯ ಪೀಠವು ಅಜಿತ್ ಪವಾರ್ ಬಣಕ್ಕೆ ಸೂಚನೆ ನೀಡಿದೆ.