ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗುತ್ತದೆ ಎಂಬ ವರದಿಗಳ ಬಗ್ಗೆಯೂ ಪವಾರ್ ಪ್ರಸ್ತಾಪಿಸಿದರು. ‘ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲು ಏನಾದರೂ ಕಾರಣಗಳಿವೆಯೇ? ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವುದು ತಮಾಷೆಯ ವಿಷಯವೇ’ ಎಂದು ಪ್ರಶ್ನಿಸಿದ ಅವರು, ‘ಆಡಳಿತಾರೂಢ ಮಹಾ ವಿಕಾಸ್ ಆಘಾಡಿಗೆ ಸರಳ ಬಹುಮತ ಇದ್ದು, ಅವಧಿ ಪೂರ್ಣಗೊಳಿಸುವುದು‘ ಎಂದು ಹೇಳಿದರು.