<p><strong>ಪುಣೆ:</strong> ಎನ್ಸಿಪಿ (ಎಸ್ಪಿ) ಅಧ್ಯಕ್ಷ ಶರದ್ ಪವಾರ್ (85) ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ವೈದ್ಯರು ಬುಧವಾರ ತಿಳಿಸಿದ್ದಾರೆ.</p><p>ಎದೆ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿರುವ ಕಾರಣ ಅವರನ್ನು ಸೋಮವಾರ ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. </p>.<p>ಉಸಿರಾಟದ ಸಮಸ್ಯೆ ಮತ್ತು ನಿರಂತರ ಕೆಮ್ಮಿನಿಂದ ಬಳಲುತ್ತಿದ್ದ ಪವಾರ್ ಅವರನ್ನು ಬಾರಾಮತಿ ಪಟ್ಟಣದಲ್ಲಿನ ಅವರ ನಿವಾಸದಿಂದ ಪುಣೆ ಆಸ್ಪತ್ರೆಗೆ ಕರೆತರಲಾಗಿತ್ತು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ. </p><p>ಆಸ್ಪತ್ರೆಯಲ್ಲಿ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ಮಾಡಲಾಗಿದೆ. ಪವಾರ್ ಎದೆ ಭಾಗದಲ್ಲಿ ಸೋಂಕು ಇರುವುದು ಸಿ.ಟಿ ಸ್ಕ್ಯಾನ್ನಲ್ಲಿ ಪತ್ತೆಯಾಗಿದೆ. ಅವರ ಹೃದಯ ಬಡಿತ ಮತ್ತು ಆಮ್ಲಜನಕದ ಮಟ್ಟಗಳು ಸ್ಥಿರವಾಗಿವೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. </p><p>ಇತ್ತೀಚಿನ ಪ್ರವಾಸ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಭಾಗವಹಿಸಿದ್ದರಿಂದ ಉಂಟಾದ ದೈಹಿಕ ಒತ್ತಡ ಹಾಗೂ ದಣಿವು ಈ ಸ್ಥಿತಿಗೆ ಕಾರಣವಾಗಿರಬಹುದು ಎಂದು ವೈದ್ಯರು ಹೇಳಿದ್ದಾರೆ.</p><p>ಪ್ರಸ್ತುತ ಸ್ಥಿತಿಯನ್ನು ಗಮನಿಸಿ ಮುಂದಿನ ಎರಡು ದಿನಗಳಲ್ಲಿ ಅವರನ್ನು ಬಿಡುಗಡೆ ಮಾಡುವ ಯೋಜನೆ ಇದೆ, ಇದು ಅವರ ಚೇತರಿಕೆಯನ್ನು ಅವಲಂಬಿಸಿದೆ ಎಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ಹೇಳಿದ್ದಾರೆ.</p>.ಸುನೇತ್ರಾ ಡಿಸಿಎಂ ಆಗುವುದರ ಬಗ್ಗೆ ನನಗೇನು ಗೊತ್ತಿಲ್ಲ: ಶರದ್ ಪವಾರ್.ಸಿಜೆಐ ಮೇಲೆ ಶೂ ಎಸೆತ: ದೇಶಕ್ಕೆ ಎಚ್ಚರಿಕೆ ಗಂಟೆ ಎಂದ ಶರದ್ ಪವಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ಎನ್ಸಿಪಿ (ಎಸ್ಪಿ) ಅಧ್ಯಕ್ಷ ಶರದ್ ಪವಾರ್ (85) ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ವೈದ್ಯರು ಬುಧವಾರ ತಿಳಿಸಿದ್ದಾರೆ.</p><p>ಎದೆ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿರುವ ಕಾರಣ ಅವರನ್ನು ಸೋಮವಾರ ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. </p>.<p>ಉಸಿರಾಟದ ಸಮಸ್ಯೆ ಮತ್ತು ನಿರಂತರ ಕೆಮ್ಮಿನಿಂದ ಬಳಲುತ್ತಿದ್ದ ಪವಾರ್ ಅವರನ್ನು ಬಾರಾಮತಿ ಪಟ್ಟಣದಲ್ಲಿನ ಅವರ ನಿವಾಸದಿಂದ ಪುಣೆ ಆಸ್ಪತ್ರೆಗೆ ಕರೆತರಲಾಗಿತ್ತು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ. </p><p>ಆಸ್ಪತ್ರೆಯಲ್ಲಿ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ಮಾಡಲಾಗಿದೆ. ಪವಾರ್ ಎದೆ ಭಾಗದಲ್ಲಿ ಸೋಂಕು ಇರುವುದು ಸಿ.ಟಿ ಸ್ಕ್ಯಾನ್ನಲ್ಲಿ ಪತ್ತೆಯಾಗಿದೆ. ಅವರ ಹೃದಯ ಬಡಿತ ಮತ್ತು ಆಮ್ಲಜನಕದ ಮಟ್ಟಗಳು ಸ್ಥಿರವಾಗಿವೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. </p><p>ಇತ್ತೀಚಿನ ಪ್ರವಾಸ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಭಾಗವಹಿಸಿದ್ದರಿಂದ ಉಂಟಾದ ದೈಹಿಕ ಒತ್ತಡ ಹಾಗೂ ದಣಿವು ಈ ಸ್ಥಿತಿಗೆ ಕಾರಣವಾಗಿರಬಹುದು ಎಂದು ವೈದ್ಯರು ಹೇಳಿದ್ದಾರೆ.</p><p>ಪ್ರಸ್ತುತ ಸ್ಥಿತಿಯನ್ನು ಗಮನಿಸಿ ಮುಂದಿನ ಎರಡು ದಿನಗಳಲ್ಲಿ ಅವರನ್ನು ಬಿಡುಗಡೆ ಮಾಡುವ ಯೋಜನೆ ಇದೆ, ಇದು ಅವರ ಚೇತರಿಕೆಯನ್ನು ಅವಲಂಬಿಸಿದೆ ಎಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ಹೇಳಿದ್ದಾರೆ.</p>.ಸುನೇತ್ರಾ ಡಿಸಿಎಂ ಆಗುವುದರ ಬಗ್ಗೆ ನನಗೇನು ಗೊತ್ತಿಲ್ಲ: ಶರದ್ ಪವಾರ್.ಸಿಜೆಐ ಮೇಲೆ ಶೂ ಎಸೆತ: ದೇಶಕ್ಕೆ ಎಚ್ಚರಿಕೆ ಗಂಟೆ ಎಂದ ಶರದ್ ಪವಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>