<p><strong>ನವದೆಹಲಿ</strong>: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಬಣವೇ ನಿಜವಾದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್ಸಿಪಿ) ಎಂದು ಗುರುತಿಸಿರುವ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಹಿರಿಯ ನಾಯಕ ಶರದ್ ಪವಾರ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p><p>ಸೋಮವಾರ ಸಂಜೆ ವಕೀಲ ಅಭಿಷೇಕ್ ಜೆಬರಾಜ್ ಮೂಲಕ ಪವಾರ್ ಮನವಿ ಸಲ್ಲಿಸಿದ್ದಾರೆ.</p><p>ಶರದ್ ಪವಾರ್ ಬಣವು ಈ ಸಂಬಂಧ ಯಾವುದೇ ಅರ್ಜಿ ಸಲ್ಲಿಸಿದರೂ ಅದರ ವಿಚಾರಣೆಗೂ ಮುನ್ನ ನಮ್ಮ ವಾದ ಆಲಿಸಬೇಕೆಂದು ಅಜಿತ್ ಪವಾರ್ ಬಣವು ವಕೀಲ ಅಭಿಕಲ್ಪ್ ಪ್ರತಾಪ್ ಸಿಂಗ್ ಮೂಲಕ ಕೇವಿಯಟ್ ಸಲ್ಲಿಸಿದೆ.</p><p>ಫೆಬ್ರುವರಿ 6 ರಂದು ಚುನಾವಣಾ ಆಯೋಗವು ಅಜಿತ್ ಪವಾರ್ ಬಣವೇ ನಿಜವಾದ ಎನ್ಸಿಪಿ ಎಂದು ಘೋಷಿಸಿತ್ತು. ಆ ಮೂಲಕ, ಪಕ್ಷದ ಸಂಸ್ಥಾಪಕ ಶರದ್ ಪವಾರ್ ಅವರಿಗೆ ದೊಡ್ಡ ಹಿನ್ನಡೆಯಾಗಿತ್ತು.</p><p>ಅಜಿತ್ ಪವಾರ್ ಅವರ ಎನ್ಸಿಪಿಗೆ ಚುನಾವಣಾ ಆಯೋಗವು ಗಡಿಯಾರದ ಚಿಹ್ನೆ ನೀಡಿದೆ.</p><p>ಪಕ್ಷದ ಸಂವಿಧಾನದ ಗುರಿ, ಉದ್ದೇಶ ಮತ್ತು ಶಾಸಕರ ಸಂಖ್ಯೆಯನ್ನು ಆಧರಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಆಯೋಗ ತಿಳಿಸಿತ್ತು.</p><p>ಕಳೆದ ವರ್ಷದ ಜುಲೈನಲ್ಲಿ ಎನ್ಸಿಪಿ ಇಬ್ಭಾಗವಾಗಿತ್ತು. ಅಜಿತ್ ಪವಾರ್ ಅವರ ನೇತೃತ್ವದಲ್ಲಿ ಪಕ್ಷದ ಬಹುತೇಕ ಶಾಸಕರು ಏಕನಾಥ ಶಿಂದೆ ನೇತೃತ್ವದ ಬಿಜೆಪಿ–ಶಿವಸೇನಾ ಮೈತ್ರಿ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದರು. ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದರು. ಆ ಬಳಿಕ ಎನ್ಸಿಪಿ ಸಂಸ್ಥಾಪಕ ಶರದ್ ಪವಾರ್ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಬಣಗಳ ನಡುವೆ ನಿರಂತರ ವಾಕ್ಸಮರ ನಡೆದಿತ್ತು.</p> .ಮಹಾರಾಷ್ಟ್ರ | ಶರದ್ ಪವಾರ್ ಬಣಕ್ಕೆ ಹೊಸ ಹೆಸರು ‘ಎನ್ಸಿಪಿ-ಶರದ್ಚಂದ್ರ ಪವಾರ್’.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಬಣವೇ ನಿಜವಾದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್ಸಿಪಿ) ಎಂದು ಗುರುತಿಸಿರುವ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಹಿರಿಯ ನಾಯಕ ಶರದ್ ಪವಾರ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p><p>ಸೋಮವಾರ ಸಂಜೆ ವಕೀಲ ಅಭಿಷೇಕ್ ಜೆಬರಾಜ್ ಮೂಲಕ ಪವಾರ್ ಮನವಿ ಸಲ್ಲಿಸಿದ್ದಾರೆ.</p><p>ಶರದ್ ಪವಾರ್ ಬಣವು ಈ ಸಂಬಂಧ ಯಾವುದೇ ಅರ್ಜಿ ಸಲ್ಲಿಸಿದರೂ ಅದರ ವಿಚಾರಣೆಗೂ ಮುನ್ನ ನಮ್ಮ ವಾದ ಆಲಿಸಬೇಕೆಂದು ಅಜಿತ್ ಪವಾರ್ ಬಣವು ವಕೀಲ ಅಭಿಕಲ್ಪ್ ಪ್ರತಾಪ್ ಸಿಂಗ್ ಮೂಲಕ ಕೇವಿಯಟ್ ಸಲ್ಲಿಸಿದೆ.</p><p>ಫೆಬ್ರುವರಿ 6 ರಂದು ಚುನಾವಣಾ ಆಯೋಗವು ಅಜಿತ್ ಪವಾರ್ ಬಣವೇ ನಿಜವಾದ ಎನ್ಸಿಪಿ ಎಂದು ಘೋಷಿಸಿತ್ತು. ಆ ಮೂಲಕ, ಪಕ್ಷದ ಸಂಸ್ಥಾಪಕ ಶರದ್ ಪವಾರ್ ಅವರಿಗೆ ದೊಡ್ಡ ಹಿನ್ನಡೆಯಾಗಿತ್ತು.</p><p>ಅಜಿತ್ ಪವಾರ್ ಅವರ ಎನ್ಸಿಪಿಗೆ ಚುನಾವಣಾ ಆಯೋಗವು ಗಡಿಯಾರದ ಚಿಹ್ನೆ ನೀಡಿದೆ.</p><p>ಪಕ್ಷದ ಸಂವಿಧಾನದ ಗುರಿ, ಉದ್ದೇಶ ಮತ್ತು ಶಾಸಕರ ಸಂಖ್ಯೆಯನ್ನು ಆಧರಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಆಯೋಗ ತಿಳಿಸಿತ್ತು.</p><p>ಕಳೆದ ವರ್ಷದ ಜುಲೈನಲ್ಲಿ ಎನ್ಸಿಪಿ ಇಬ್ಭಾಗವಾಗಿತ್ತು. ಅಜಿತ್ ಪವಾರ್ ಅವರ ನೇತೃತ್ವದಲ್ಲಿ ಪಕ್ಷದ ಬಹುತೇಕ ಶಾಸಕರು ಏಕನಾಥ ಶಿಂದೆ ನೇತೃತ್ವದ ಬಿಜೆಪಿ–ಶಿವಸೇನಾ ಮೈತ್ರಿ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದರು. ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದರು. ಆ ಬಳಿಕ ಎನ್ಸಿಪಿ ಸಂಸ್ಥಾಪಕ ಶರದ್ ಪವಾರ್ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಬಣಗಳ ನಡುವೆ ನಿರಂತರ ವಾಕ್ಸಮರ ನಡೆದಿತ್ತು.</p> .ಮಹಾರಾಷ್ಟ್ರ | ಶರದ್ ಪವಾರ್ ಬಣಕ್ಕೆ ಹೊಸ ಹೆಸರು ‘ಎನ್ಸಿಪಿ-ಶರದ್ಚಂದ್ರ ಪವಾರ್’.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>