<p><strong>ಮುಂಬೈ</strong>: 84ನೇ ವಸಂತಕ್ಕೆ ಕಾಲಿಟ್ಟಿರುವ ಎನ್ಸಿಪಿ(ಎಸ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಕುಟಂಬ ವರ್ಗದವರು ಮತ್ತು ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.</p><p>ಕತ್ತಿಯಿಂದ ಕೇಕ್ ಕತ್ತರಿಸುವ ಮೂಲಕ ಪವಾರ್ ತಮ್ಮ ಜನ್ಮ ದಿನಾಚರಣೆಯನ್ನು ಹಿತೈಷಿಗಳೊಂದಿಗೆ ಸಂಭ್ರಮಿಸಿದ್ದಾರೆ.</p><p>ಶರದ್ ಪವಾರ್ ಅವರನ್ನು ನೇರವಾಗಿ ಭೇಟಿಯಾದ ಅಜಿತ್ ಪವಾರ್, ಅವರ ಪತ್ನಿ ಸುನೇತ್ರಾ ಪವಾರ್ ಮತ್ತು ಪುತ್ರ ಪಾರ್ಥ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು. ಈ ವೇಳೆ ಎನ್ಸಿಪಿ(ಅಜಿತ್ ಪವಾರ್ ಬಣ) ನಾಯಕರಾದ ಪ್ರಫುಲ್ ಪಟೇಲ್, ಛಗನ್ ಭುಜಬಲ್ ಮತ್ತು ಸುನೀಲ್ ತತ್ಕರೆ ಇದ್ದರು.</p><p>ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ರಾಜಕೀಯ ಮುಖಂಡರು ಪವಾರ್ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.</p><p>1940ರ ಡಿಸೆಂಬರ್ 12ರಂದು ಜನಿಸಿದ ಶರದ್ ಪವಾರ್ ಅವರು ಕಾಲೇಜು ದಿನಗಳಲ್ಲಿಯೇ ರಾಜಕೀಯದ ಬಗ್ಗೆ ಆಸ್ತಕಿ ಹೊಂದಿದ್ದರು. ಹಿರಿಯ ಕಾಂಗ್ರೆಸ್ ನಾಯಕ ಯಶವಂತರಾವ್ ಚವಾಣ್ ಅವರ ಬೆಂಬಲದೊಂದಿಗೆ ರಾಜಕೀಯ ಪ್ರಯಾಣ ಪ್ರಾರಂಭಿಸಿದ್ದರು.</p><p>ನಾಲ್ಕು ಬಾರಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ, ರಕ್ಷಣಾ ಸಚಿವರಾಗಿ, ಕೇಂದ್ರ ಕೃಷಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.</p><p>1999ರಲ್ಲಿ ಕಾಂಗ್ರೆಸ್ ತೊರೆದ ಪವಾರ್, ಎನ್ಸಿಪಿ ಸ್ಥಾಪಿಸಿದ್ದರು. 2022ರಲ್ಲಿ ಅಜಿತ್ ಪವಾರ್ ಮತ್ತು ಇತರ ಶಾಸಕರು ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡುವ ಮೂಲಕ ಎನ್ಸಿಪಿ ಎರಡು ಭಾಗವಾಗಿ ವಿಭಜನೆಯಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: 84ನೇ ವಸಂತಕ್ಕೆ ಕಾಲಿಟ್ಟಿರುವ ಎನ್ಸಿಪಿ(ಎಸ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಕುಟಂಬ ವರ್ಗದವರು ಮತ್ತು ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.</p><p>ಕತ್ತಿಯಿಂದ ಕೇಕ್ ಕತ್ತರಿಸುವ ಮೂಲಕ ಪವಾರ್ ತಮ್ಮ ಜನ್ಮ ದಿನಾಚರಣೆಯನ್ನು ಹಿತೈಷಿಗಳೊಂದಿಗೆ ಸಂಭ್ರಮಿಸಿದ್ದಾರೆ.</p><p>ಶರದ್ ಪವಾರ್ ಅವರನ್ನು ನೇರವಾಗಿ ಭೇಟಿಯಾದ ಅಜಿತ್ ಪವಾರ್, ಅವರ ಪತ್ನಿ ಸುನೇತ್ರಾ ಪವಾರ್ ಮತ್ತು ಪುತ್ರ ಪಾರ್ಥ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು. ಈ ವೇಳೆ ಎನ್ಸಿಪಿ(ಅಜಿತ್ ಪವಾರ್ ಬಣ) ನಾಯಕರಾದ ಪ್ರಫುಲ್ ಪಟೇಲ್, ಛಗನ್ ಭುಜಬಲ್ ಮತ್ತು ಸುನೀಲ್ ತತ್ಕರೆ ಇದ್ದರು.</p><p>ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ರಾಜಕೀಯ ಮುಖಂಡರು ಪವಾರ್ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.</p><p>1940ರ ಡಿಸೆಂಬರ್ 12ರಂದು ಜನಿಸಿದ ಶರದ್ ಪವಾರ್ ಅವರು ಕಾಲೇಜು ದಿನಗಳಲ್ಲಿಯೇ ರಾಜಕೀಯದ ಬಗ್ಗೆ ಆಸ್ತಕಿ ಹೊಂದಿದ್ದರು. ಹಿರಿಯ ಕಾಂಗ್ರೆಸ್ ನಾಯಕ ಯಶವಂತರಾವ್ ಚವಾಣ್ ಅವರ ಬೆಂಬಲದೊಂದಿಗೆ ರಾಜಕೀಯ ಪ್ರಯಾಣ ಪ್ರಾರಂಭಿಸಿದ್ದರು.</p><p>ನಾಲ್ಕು ಬಾರಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ, ರಕ್ಷಣಾ ಸಚಿವರಾಗಿ, ಕೇಂದ್ರ ಕೃಷಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.</p><p>1999ರಲ್ಲಿ ಕಾಂಗ್ರೆಸ್ ತೊರೆದ ಪವಾರ್, ಎನ್ಸಿಪಿ ಸ್ಥಾಪಿಸಿದ್ದರು. 2022ರಲ್ಲಿ ಅಜಿತ್ ಪವಾರ್ ಮತ್ತು ಇತರ ಶಾಸಕರು ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡುವ ಮೂಲಕ ಎನ್ಸಿಪಿ ಎರಡು ಭಾಗವಾಗಿ ವಿಭಜನೆಯಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>