ನವದೆಹಲಿ: ಹರಿಯಾಣದ ಫತೇಹಾಬಾದ್ನಲ್ಲಿ ಇದೇ 25ರಂದು ನಡೆಯಲಿರುವ ಭಾರತೀಯ ರಾಷ್ಟ್ರೀಯ ಲೋಕದಳದ (ಐಎನ್ಎಲ್ಡಿ) ರ್ಯಾಲಿಯಲ್ಲಿ ಎನ್ಸಿಪಿ ಅಧ್ಯಕ್ಷ ಶರದ್ ಪವಾರ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನಾ ನಾಯಕ ಉದ್ಧವ್ ಠಾಕ್ರೆ, ಡಿಎಂಕೆಯ ಕನಿಮೋಳಿ ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಪಾಲ್ಗೊಳ್ಳುವರು ಎಂದು ಜೆಡಿಯು ವಕ್ತಾರ ಕೆ.ಸಿ.ತ್ಯಾಗಿ ಗುರುವಾರ ಹೇಳಿದ್ದಾರೆ.