<p><strong>ಪುಣೆ:</strong> ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದನ್ನು ರಾಜಕೀಯಗೊಳಿಸಬಾರದು ಎಂದು ಅಜಿತ್ ಅವರ ದೊಡ್ಡಪ್ಪ, ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಮನವಿ ಮಾಡಿದರು. </p>.<p>ಈ ಮೂಲಕ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ. </p>.<p>‘ಅಜಿತ್ ಸಾವು ಮಹಾರಾಷ್ಟ್ರಕ್ಕೆ ದೊಡ್ಡ ಆಘಾತ ತರಿಸಿದೆ. ಕಠಿಣ ಪರಿಶ್ರಮಿ, ದಕ್ಷ ನಾಯಕನನ್ನು ರಾಜ್ಯ ಕಳೆದುಕೊಂಡಿದ್ದು, ತುಂಬಲಾರದ ನಷ್ವವಾಗಿದೆ. ಎಲ್ಲವೂ ನಮ್ಮ ಕೈಯಲ್ಲಿಲ್ಲ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>‘ಇದೊಂದು ಅಪಘಾತ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಅನಗತ್ಯವಾಗಿ ರಾಜಕೀಯ ತರಬೇಡಿ ಎಂದು ನಾನು ಮಮತಾ ಅವರಲ್ಲಿ ವಿನಂತಿಸುತ್ತೇನೆ’ ಎಂದು ಅವರು ಪ್ರತಿಕ್ರಿಯಿಸಿದರು.</p>.<p>‘ಬಹುತೇಕ ಸಂಸ್ಥೆಗಳು ಪೂರ್ಣವಾಗಿ ರಾಜಿ ಮಾಡಿಕೊಂಡಿರುವ ಕಾರಣ, ಅಜಿತ್ ಸಾವಿನ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು’ ಎಂದು ಮಮತಾ ಪ್ರತಿಪಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದನ್ನು ರಾಜಕೀಯಗೊಳಿಸಬಾರದು ಎಂದು ಅಜಿತ್ ಅವರ ದೊಡ್ಡಪ್ಪ, ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಮನವಿ ಮಾಡಿದರು. </p>.<p>ಈ ಮೂಲಕ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ. </p>.<p>‘ಅಜಿತ್ ಸಾವು ಮಹಾರಾಷ್ಟ್ರಕ್ಕೆ ದೊಡ್ಡ ಆಘಾತ ತರಿಸಿದೆ. ಕಠಿಣ ಪರಿಶ್ರಮಿ, ದಕ್ಷ ನಾಯಕನನ್ನು ರಾಜ್ಯ ಕಳೆದುಕೊಂಡಿದ್ದು, ತುಂಬಲಾರದ ನಷ್ವವಾಗಿದೆ. ಎಲ್ಲವೂ ನಮ್ಮ ಕೈಯಲ್ಲಿಲ್ಲ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>‘ಇದೊಂದು ಅಪಘಾತ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಅನಗತ್ಯವಾಗಿ ರಾಜಕೀಯ ತರಬೇಡಿ ಎಂದು ನಾನು ಮಮತಾ ಅವರಲ್ಲಿ ವಿನಂತಿಸುತ್ತೇನೆ’ ಎಂದು ಅವರು ಪ್ರತಿಕ್ರಿಯಿಸಿದರು.</p>.<p>‘ಬಹುತೇಕ ಸಂಸ್ಥೆಗಳು ಪೂರ್ಣವಾಗಿ ರಾಜಿ ಮಾಡಿಕೊಂಡಿರುವ ಕಾರಣ, ಅಜಿತ್ ಸಾವಿನ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು’ ಎಂದು ಮಮತಾ ಪ್ರತಿಪಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>