<p><strong>ತಿರುವನಂತಪುರ:</strong> ಕೇರಳ ಸರ್ಕಾರವನ್ನು ಶ್ಲಾಘಿಸಿದ ಬಳಿಕ ಪೇಚಿಗೆ ಸಿಲುಕಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಈಗ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ್ದಾರೆ. </p><p>'ನಾನು ಕೇರಳದ ಸಿಪಿಐ(ಎಂ) ನೇತೃತ್ವದ ಸರ್ಕಾರವನ್ನು ಹೊಗಳಲಿಲ್ಲ. ಬದಲಿಗೆ ನವೋದ್ಯಮ (ಸ್ಟಾರ್ಟ್ಅಪ್) ಕ್ಷೇತ್ರದಲ್ಲಿ ರಾಜ್ಯದ ಪ್ರಗತಿಯನ್ನಷ್ಟೇ ಉಲ್ಲೇಖಿಸಿದ್ದೇನೆ' ಎಂದು ತಿರುವನಂತಪುರದ ಸಂಸದ ಹೇಳಿದ್ದಾರೆ. </p><p>ಆಂಗ್ಲ ದಿನಪತ್ರಿಕೆಯಲ್ಲಿ ಶಶಿ ತರೂರ್ ಬರೆದ ಲೇಖನವು ಕೇರಳದ ಕಾಂಗ್ರೆಸ್ ನಾಯಕರಲ್ಲಿ ಭಿನ್ನಮತಕ್ಕೆ ಕಾರಣವಾಗಿತ್ತು. ಮತ್ತೊಂದೆಡೆ ಆಡಳಿತಾರೂಢ ಎಡಪಕ್ಷಗಳು ತರೂರ್ ಹೇಳಿಕೆಯನ್ನು ಸ್ವಾಗತಿಸಿದ್ದವು. </p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ತರೂರ್, 'ನನ್ನ ಲೇಖನದಲ್ಲಿ ಯಾವುದೇ ರಾಜಕೀಯ ಉಲ್ಲೇಖ ಇರಲಿಲ್ಲ. ಕೇರಳದ ಉದ್ಯಮಶೀಲತೆ ಮತ್ತು ನಾವೀನ್ಯತೆಯ ಬೆಳವಣಿಗೆ ಕುರಿತು ಪ್ರತಿಪಾದಿಸಿದ್ದೇನೆ. ರಾಜ್ಯದ ಅಭಿವೃದ್ಧಿವನ್ನು ಎತ್ತಿ ಹಿಡಿಯುವ ಪ್ರಯತ್ನವನ್ನು ಮಾಡಿದ್ದೇನೆ' ಎಂದು ಹೇಳಿದ್ದಾರೆ. </p><p>'ಗ್ಲೋಬಲ್ ಸ್ಟಾರ್ಟ್ಅಪ್ ಇಕೊಸಿಸ್ಟಂ 2024 ವರದಿ ಆಧರಿಸಿ ನಾನು ಲೇಖನವನ್ನು ಬರೆದಿದ್ದೇನೆ. ಕೇರಳವು 18 ತಿಂಗಳಲ್ಲಿ 1.7 ಶತಕೋಟಿ ಅಮೆರಿಕನ್ ಡಾಲರ್ ಹೂಡಿಕೆಯನ್ನು ಆಕರ್ಷಿಸಿದೆ ಎಂದು ವರದಿಯಲ್ಲಿದೆ' ಎಂದು ತರೂರ್ ತಿಳಿಸಿದ್ದಾರೆ. </p><p>'ಆದರೂ ಕೇರಳದಲ್ಲಿ ಒಟ್ಟಾರೆ ಕೈಗಾರಿಕಾ ವಾತಾವರಣ ಬದಲಾಗಿದೆ ಎಂದು ನಂಬುವುದಿಲ್ಲ. ಕೇರಳ ಈಗಲೂ ದೊಡ್ಡ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ರಾಜ್ಯದಲ್ಲಿ ಶೇ 80ರಷ್ಟು ಸಾರ್ವಜನಿಕ ಉದ್ದಿಮೆಗಳು (ಪಿಎಸ್ಯು) ನಷ್ಟದಲ್ಲಿವೆ' ಎಂದು ಅವರು ಹೇಳಿದ್ದಾರೆ. </p><p>'ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ರಾಜ್ಯದಲ್ಲಿ ಪ್ರಗತಿಗೆ ಅಡಿಪಾಯ ಹಾಕಿದರು. ಸ್ಟಾರ್ಟ್ಅಪ್ ವಿಲ್ಲೇಜ್, ಸ್ಟಾರ್ಟ್ಅಪ್ ಮಿಷನ್ ಸೇರಿದಂತೆ ಹಲವಾರು ಉಪಕ್ರಮಗಳನ್ನು ಆರಂಭಿಸಿದರು. ಈಗಿನ ಸರ್ಕಾರವು ಅದನ್ನು ಮುನ್ನಡೆಸಿಕೊಂಡು ಹೋಗುತ್ತಿದೆ' ಎಂದು ಅವರು ಹೇಳಿದ್ದಾರೆ. </p>.ಭಾರತದಲ್ಲೇ ಅತಿ ಹೆಚ್ಚು ನಿರುದ್ಯೋಗಿಗಳು: ಶಶಿ ತರೂರ್.ಅಮೆರಿಕ ಅಧ್ಯಕ್ಷ ಟ್ರಂಪ್ ಅವಧಿಯಲ್ಲಿ ನೀರಸ ಕ್ಷಣಗಳಿರುವುದಿಲ್ಲ: ಸಂಸದ ಶಶಿ ತರೂರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳ ಸರ್ಕಾರವನ್ನು ಶ್ಲಾಘಿಸಿದ ಬಳಿಕ ಪೇಚಿಗೆ ಸಿಲುಕಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಈಗ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ್ದಾರೆ. </p><p>'ನಾನು ಕೇರಳದ ಸಿಪಿಐ(ಎಂ) ನೇತೃತ್ವದ ಸರ್ಕಾರವನ್ನು ಹೊಗಳಲಿಲ್ಲ. ಬದಲಿಗೆ ನವೋದ್ಯಮ (ಸ್ಟಾರ್ಟ್ಅಪ್) ಕ್ಷೇತ್ರದಲ್ಲಿ ರಾಜ್ಯದ ಪ್ರಗತಿಯನ್ನಷ್ಟೇ ಉಲ್ಲೇಖಿಸಿದ್ದೇನೆ' ಎಂದು ತಿರುವನಂತಪುರದ ಸಂಸದ ಹೇಳಿದ್ದಾರೆ. </p><p>ಆಂಗ್ಲ ದಿನಪತ್ರಿಕೆಯಲ್ಲಿ ಶಶಿ ತರೂರ್ ಬರೆದ ಲೇಖನವು ಕೇರಳದ ಕಾಂಗ್ರೆಸ್ ನಾಯಕರಲ್ಲಿ ಭಿನ್ನಮತಕ್ಕೆ ಕಾರಣವಾಗಿತ್ತು. ಮತ್ತೊಂದೆಡೆ ಆಡಳಿತಾರೂಢ ಎಡಪಕ್ಷಗಳು ತರೂರ್ ಹೇಳಿಕೆಯನ್ನು ಸ್ವಾಗತಿಸಿದ್ದವು. </p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ತರೂರ್, 'ನನ್ನ ಲೇಖನದಲ್ಲಿ ಯಾವುದೇ ರಾಜಕೀಯ ಉಲ್ಲೇಖ ಇರಲಿಲ್ಲ. ಕೇರಳದ ಉದ್ಯಮಶೀಲತೆ ಮತ್ತು ನಾವೀನ್ಯತೆಯ ಬೆಳವಣಿಗೆ ಕುರಿತು ಪ್ರತಿಪಾದಿಸಿದ್ದೇನೆ. ರಾಜ್ಯದ ಅಭಿವೃದ್ಧಿವನ್ನು ಎತ್ತಿ ಹಿಡಿಯುವ ಪ್ರಯತ್ನವನ್ನು ಮಾಡಿದ್ದೇನೆ' ಎಂದು ಹೇಳಿದ್ದಾರೆ. </p><p>'ಗ್ಲೋಬಲ್ ಸ್ಟಾರ್ಟ್ಅಪ್ ಇಕೊಸಿಸ್ಟಂ 2024 ವರದಿ ಆಧರಿಸಿ ನಾನು ಲೇಖನವನ್ನು ಬರೆದಿದ್ದೇನೆ. ಕೇರಳವು 18 ತಿಂಗಳಲ್ಲಿ 1.7 ಶತಕೋಟಿ ಅಮೆರಿಕನ್ ಡಾಲರ್ ಹೂಡಿಕೆಯನ್ನು ಆಕರ್ಷಿಸಿದೆ ಎಂದು ವರದಿಯಲ್ಲಿದೆ' ಎಂದು ತರೂರ್ ತಿಳಿಸಿದ್ದಾರೆ. </p><p>'ಆದರೂ ಕೇರಳದಲ್ಲಿ ಒಟ್ಟಾರೆ ಕೈಗಾರಿಕಾ ವಾತಾವರಣ ಬದಲಾಗಿದೆ ಎಂದು ನಂಬುವುದಿಲ್ಲ. ಕೇರಳ ಈಗಲೂ ದೊಡ್ಡ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ರಾಜ್ಯದಲ್ಲಿ ಶೇ 80ರಷ್ಟು ಸಾರ್ವಜನಿಕ ಉದ್ದಿಮೆಗಳು (ಪಿಎಸ್ಯು) ನಷ್ಟದಲ್ಲಿವೆ' ಎಂದು ಅವರು ಹೇಳಿದ್ದಾರೆ. </p><p>'ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ರಾಜ್ಯದಲ್ಲಿ ಪ್ರಗತಿಗೆ ಅಡಿಪಾಯ ಹಾಕಿದರು. ಸ್ಟಾರ್ಟ್ಅಪ್ ವಿಲ್ಲೇಜ್, ಸ್ಟಾರ್ಟ್ಅಪ್ ಮಿಷನ್ ಸೇರಿದಂತೆ ಹಲವಾರು ಉಪಕ್ರಮಗಳನ್ನು ಆರಂಭಿಸಿದರು. ಈಗಿನ ಸರ್ಕಾರವು ಅದನ್ನು ಮುನ್ನಡೆಸಿಕೊಂಡು ಹೋಗುತ್ತಿದೆ' ಎಂದು ಅವರು ಹೇಳಿದ್ದಾರೆ. </p>.ಭಾರತದಲ್ಲೇ ಅತಿ ಹೆಚ್ಚು ನಿರುದ್ಯೋಗಿಗಳು: ಶಶಿ ತರೂರ್.ಅಮೆರಿಕ ಅಧ್ಯಕ್ಷ ಟ್ರಂಪ್ ಅವಧಿಯಲ್ಲಿ ನೀರಸ ಕ್ಷಣಗಳಿರುವುದಿಲ್ಲ: ಸಂಸದ ಶಶಿ ತರೂರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>