ನವದೆಹಲಿ: ಭಾರತೀಯ ನೌಕಾಪಡೆಯ ಎಂಟು ಮಂದಿ ಮಾಜಿ ಸಿಬ್ಬಂದಿಗೆ ಕತಾರ್ನ ನ್ಯಾಯಾಲಯವೊಂದು ಮರಣದಂಡನೆ ವಿಧಿಸಿರುವುದಕ್ಕೆ ಕಾಂಗ್ರೆಸ್ ಸಂಸದ ಶಶಿ ತರೂರ್ ಆಘಾತ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ತರೂರ್, 'ಭಾರತೀಯ ನೌಕಾಪಡೆಯ ಎಂಟು ಮಂದಿ ಮಾಜಿ ಸಿಬ್ಬಂದಿಗೆ ಕತಾರ್ನ ನ್ಯಾಯಾಲಯ ಮರಣದಂಡನೆ ವಿಧಿಸಿರುವ ಸುದ್ದಿ ತಿಳಿದು ಆಘಾತವಾಯಿತು. ಇಡೀ ಪ್ರಕರಣದ ವರದಿ ನಿಗೂಢ ಮತ್ತು ಅಸ್ಪಷ್ಟವಾಗಿದೆ' ಎಂದಿದ್ದಾರೆ.
'ಶಿಕ್ಷೆಗೆ ಗುರಿಯಾಗಿರುವವರ ಮನವಿಯನ್ನು ಪರಿಗಣಿಸಿ, ಅವರನ್ನು ದೇಶಕ್ಕೆ ವಾಪಸ್ ಕರೆತರಲು ವಿದೇಶಾಂಗ ಸಚಿವಾಲಯ ಮತ್ತು ಪ್ರಧಾನಮಂತ್ರಿ ಕಚೇರಿಯು ಕತಾರ್ನ ಉನ್ನತಾಧಿಕಾರಿಗಳೊಂದಿಗೆ ತಕ್ಷಣವೇ ಕಾರ್ಯಪ್ರವೃತ್ತವಾಗಲಿದೆ ಎಂಬ ವಿಶ್ವಾಸವಿದೆ' ಎಂದು ಹೇಳಿದ್ದಾರೆ.