ಹಲ್ಲೆಗೆ ಪಿತೂರಿ: ಕೇರಳ ಸಿಎಂ ಮೇಲೆ ರಾಜ್ಯಪಾಲ ಆರೋಪ
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನನ್ನ ಮೇಲೆ ಹಲ್ಲೆಗೆ ಪಿತೂರಿ ನಡೆಸಿದ್ದಾರೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆರೋಪಿಸಿದ್ದಾರೆ.
ಆರಿಫ್ ಅವರಿದ್ದ ವಾಹನವನ್ನು ಸಿಪಿಐ(ಎಂ) ಪಕ್ಷದ ವಿದ್ಯಾರ್ಥಿ ಘಟಕವಾದ ಎಸ್ಎಫ್ಐ ಕಾರ್ಯಕರ್ತರು ತಡೆದು ಕಪ್ಪು ಬಾವುಟವನ್ನು ಪ್ರದರ್ಶಿಸಿದ್ದರು. ಈ ವೇಳೆ ಕಾರಿನಿಂದ ಹೊರಗಿಳಿದು ಆರಿಫ್ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.