<p><strong>ನವದೆಹಲಿ:</strong> ಕೇರಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸಾಧನೆ ಸೀಮಿತವಾಗಿರಲಿದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ. </p><p>'ಕೇರಳ ರಾಜಕೀಯದಲ್ಲಿ ಬಿಜೆಪಿಗೆ ‘ಕಿಂಗ್ ಮೇಕರ್’ ಆಗಲು ಸಾಧ್ಯವಿಲ್ಲ. ಹೆಚ್ಚೆಂದರೆ ತನ್ನದೇ ಹಿಂದಿನ ಸಾಧನೆಯನ್ನು ಉತ್ತಮಪಡಿಸಿಕೊಳ್ಳಬಹುದು' ಎಂದು ಹೇಳಿದ್ದಾರೆ. </p>.ಕೇರಳ ವಿಧಾನಸಭೆಗೆ ದಿನಾಂಕ ಘೋಷಣೆ: ತ್ರಿಕೋನ ಹೋರಾಟಕ್ಕೆ ಸಜ್ಜು.ಕೇರಳ ವಿಧಾನಸಭೆ ಚುನಾವಣೆ: ತಂದೆ–ಮಗನಿಗೆ ಬಿಜೆಪಿ ಟಿಕೆಟ್. <p>ಈ ಹಿಂದೆ ಕಾಂಗ್ರೆಸ್ ನಾಯಕರೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ತರೂರ್ ಬಿಜೆಪಿ ಪರ ಒಲವು ತೋರಿರುವ ಬಗ್ಗೆ ವರದಿಯಾಗಿತ್ತು. </p><p>ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಕೇರಳ ರಾಜಕಾರಣದ ಕುರಿತು ಅವಲೋಕಿಸಿರುವ ತರೂರ್, 'ಪ್ರಮುಖವಾಗಿಯೂ ಆಡಳಿತಾರೂಢ ಎಲ್ಡಿಆಫ್ ಹಾಗೂ ಯುಡಿಎಫ್ ನಡುವೆ ಸ್ಪರ್ಧೆ ಏರ್ಪಟ್ಟಿದೆ' ಎಂದಿದ್ದಾರೆ. </p><p>'ಕೇರಳದಲ್ಲಿ ತ್ರಿಕೋನ ಸ್ಪರ್ಧೆಯಿಲ್ಲ. ಬಿಜೆಪಿ ಶೂನ್ಯ ಸಾಧನೆ ಹೊಂದಿರುವ ಪಕ್ಷ. ಹಾಗಾಗಿ ಶೂನ್ಯದಿಂದ ಒಂದೆರಡು ಸ್ಥಾನಗಳನ್ನು ಗೆದ್ದರೂ ಸಂಭ್ರಮಿಸುತ್ತಾರೆ' ಎಂದು ಹೇಳಿದ್ದಾರೆ. </p><p>'ಕೇರಳದಲ್ಲಿ ಬಿಜೆಪಿ ಕಿಂಗ್ ಮೇಕರ್ ಆಗುವ ಸಾಧ್ಯತೆ ಇಲ್ಲ. ಎಲ್ಡಿಎಫ್ ಮತ್ತು ಯುಡಿಎಫ್ ನಡುವೆ ಪೈಪೋಟಿ ನಡೆಯಲಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ' ಎಂದಿದ್ದಾರೆ. </p><p>'ಹಾಗಿದ್ದರೂ ಬಿಜೆಪಿಯನ್ನು ಕಡೆಗಣಿಸುತ್ತಿಲ್ಲ. ಏಕೆಂದರೆ ಪ್ರತಿಯೊಂದು ಕ್ಷೇತ್ರವೂ ನಿರ್ಣಾಯಕವಾಗಿದೆ' ಎಂದು ಹೇಳಿದ್ದಾರೆ. </p><p><strong>ನಾನು ಸಿಎಂ ಆಕಾಂಕ್ಷಿಯಲ್ಲ: ತರೂರ್</strong></p><p>'ನಾನು ಮುಖ್ಯಮಂತ್ರಿ ಆಕಾಂಕ್ಷಿಯಲ್ಲ. ಏಕೆಂದರೆ ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಚುನಾಯಿತ ಅಭ್ಯರ್ಥಿಗಳನ್ನೇ ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಬೇಕು' ಎಂದು ತರೂರ್ ಹೇಳಿದ್ದಾರೆ. </p><p>140 ಸದಸ್ಯ ಬಲದ ಕೇರಳದಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇರಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸಾಧನೆ ಸೀಮಿತವಾಗಿರಲಿದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ. </p><p>'ಕೇರಳ ರಾಜಕೀಯದಲ್ಲಿ ಬಿಜೆಪಿಗೆ ‘ಕಿಂಗ್ ಮೇಕರ್’ ಆಗಲು ಸಾಧ್ಯವಿಲ್ಲ. ಹೆಚ್ಚೆಂದರೆ ತನ್ನದೇ ಹಿಂದಿನ ಸಾಧನೆಯನ್ನು ಉತ್ತಮಪಡಿಸಿಕೊಳ್ಳಬಹುದು' ಎಂದು ಹೇಳಿದ್ದಾರೆ. </p>.ಕೇರಳ ವಿಧಾನಸಭೆಗೆ ದಿನಾಂಕ ಘೋಷಣೆ: ತ್ರಿಕೋನ ಹೋರಾಟಕ್ಕೆ ಸಜ್ಜು.ಕೇರಳ ವಿಧಾನಸಭೆ ಚುನಾವಣೆ: ತಂದೆ–ಮಗನಿಗೆ ಬಿಜೆಪಿ ಟಿಕೆಟ್. <p>ಈ ಹಿಂದೆ ಕಾಂಗ್ರೆಸ್ ನಾಯಕರೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ತರೂರ್ ಬಿಜೆಪಿ ಪರ ಒಲವು ತೋರಿರುವ ಬಗ್ಗೆ ವರದಿಯಾಗಿತ್ತು. </p><p>ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಕೇರಳ ರಾಜಕಾರಣದ ಕುರಿತು ಅವಲೋಕಿಸಿರುವ ತರೂರ್, 'ಪ್ರಮುಖವಾಗಿಯೂ ಆಡಳಿತಾರೂಢ ಎಲ್ಡಿಆಫ್ ಹಾಗೂ ಯುಡಿಎಫ್ ನಡುವೆ ಸ್ಪರ್ಧೆ ಏರ್ಪಟ್ಟಿದೆ' ಎಂದಿದ್ದಾರೆ. </p><p>'ಕೇರಳದಲ್ಲಿ ತ್ರಿಕೋನ ಸ್ಪರ್ಧೆಯಿಲ್ಲ. ಬಿಜೆಪಿ ಶೂನ್ಯ ಸಾಧನೆ ಹೊಂದಿರುವ ಪಕ್ಷ. ಹಾಗಾಗಿ ಶೂನ್ಯದಿಂದ ಒಂದೆರಡು ಸ್ಥಾನಗಳನ್ನು ಗೆದ್ದರೂ ಸಂಭ್ರಮಿಸುತ್ತಾರೆ' ಎಂದು ಹೇಳಿದ್ದಾರೆ. </p><p>'ಕೇರಳದಲ್ಲಿ ಬಿಜೆಪಿ ಕಿಂಗ್ ಮೇಕರ್ ಆಗುವ ಸಾಧ್ಯತೆ ಇಲ್ಲ. ಎಲ್ಡಿಎಫ್ ಮತ್ತು ಯುಡಿಎಫ್ ನಡುವೆ ಪೈಪೋಟಿ ನಡೆಯಲಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ' ಎಂದಿದ್ದಾರೆ. </p><p>'ಹಾಗಿದ್ದರೂ ಬಿಜೆಪಿಯನ್ನು ಕಡೆಗಣಿಸುತ್ತಿಲ್ಲ. ಏಕೆಂದರೆ ಪ್ರತಿಯೊಂದು ಕ್ಷೇತ್ರವೂ ನಿರ್ಣಾಯಕವಾಗಿದೆ' ಎಂದು ಹೇಳಿದ್ದಾರೆ. </p><p><strong>ನಾನು ಸಿಎಂ ಆಕಾಂಕ್ಷಿಯಲ್ಲ: ತರೂರ್</strong></p><p>'ನಾನು ಮುಖ್ಯಮಂತ್ರಿ ಆಕಾಂಕ್ಷಿಯಲ್ಲ. ಏಕೆಂದರೆ ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಚುನಾಯಿತ ಅಭ್ಯರ್ಥಿಗಳನ್ನೇ ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಬೇಕು' ಎಂದು ತರೂರ್ ಹೇಳಿದ್ದಾರೆ. </p><p>140 ಸದಸ್ಯ ಬಲದ ಕೇರಳದಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>