<p><strong>ನವದೆಹಲಿ:</strong> ಬಿಹಾರದಲ್ಲಿ ನಳಂದ ವಿಶ್ವವಿದ್ಯಾಲಯವನ್ನು ಸ್ಥಾಪಿಸಿರುವುದಕ್ಕೆ ಮತ್ತು ದೇಶಕ್ಕೆ ಇತರ ಹಲವು ಕೊಡುಗೆ ನೀಡಿರುವುದಕ್ಕೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ಅವರ ಸಚಿವಾಲಯವನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಮಂಗಳವಾರ ಶ್ಲಾಘಿಸಿದ್ದಾರೆ.</p>.<p>‘ನಳಂದ ವಿ.ವಿಯಲ್ಲಿ ನಡೆದ ಸಾಹಿತ್ಯ ಉತ್ಸವದಲ್ಲಿ ಭಾಗಿಯಾಗಿದ್ದ ನನಗೆ ಅಲ್ಲಿನ ವಾತವರಣ ಇಷ್ಟವಾಯಿತು. ಇದಕ್ಕಾಗಿ ಜೈಶಂಕರ್ ಮತ್ತು ಭಾರತದ ರಾಜತಾಂತ್ರಿಕರನ್ನು ಅಭಿನಂದಿಸುತ್ತೇನೆ. ವಿದೇಶಾಂಗ ಇಲಾಖೆ ದೇಶಕ್ಕೆ ನೀಡಿದ ಕೊಡುಗೆಗಳಲ್ಲಿ ಇದು ಮಹತ್ವದ್ದಾಗಿದೆ’ ಎಂದು ಸಂಸದ ತರೂರ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>‘ನಾನು ಬಿಹಾರಕ್ಕೆ ಇಲ್ಲಿನ ಸಂಸ್ಕೃತಿಯ ಬಗ್ಗೆ ತಿಳಿಯಲು ಬಂದಿದ್ದೇನೆ. ರಾಜಕೀಯ ಕಾರಣಕ್ಕೆ ಅಲ್ಲ. ಬಿಹಾರ ವಸ್ತುಸಂಗ್ರಹಾಲಯ ಮತ್ತು ಬಾಪೂ ಗೋಪುರವನ್ನು ನೋಡುವಂತೆ ಇತರರಿಗೆ ಸಲಹೆ ನೀಡುತ್ತೇನೆ’ ಎಂದು ತಿಳಿಸಿದ್ದಾರೆ.</p>.<p>ತರೂರ್ ಅವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಪರವಾಗಿ ಹಾಗೂ ತಮ್ಮ ಪಕ್ಷ ಮತ್ತು ನಾಯಕರ ಸಿದ್ಧಾಂತಗಳಿಗೆ ವಿರುದ್ಧವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಹಾರದಲ್ಲಿ ನಳಂದ ವಿಶ್ವವಿದ್ಯಾಲಯವನ್ನು ಸ್ಥಾಪಿಸಿರುವುದಕ್ಕೆ ಮತ್ತು ದೇಶಕ್ಕೆ ಇತರ ಹಲವು ಕೊಡುಗೆ ನೀಡಿರುವುದಕ್ಕೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ಅವರ ಸಚಿವಾಲಯವನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಮಂಗಳವಾರ ಶ್ಲಾಘಿಸಿದ್ದಾರೆ.</p>.<p>‘ನಳಂದ ವಿ.ವಿಯಲ್ಲಿ ನಡೆದ ಸಾಹಿತ್ಯ ಉತ್ಸವದಲ್ಲಿ ಭಾಗಿಯಾಗಿದ್ದ ನನಗೆ ಅಲ್ಲಿನ ವಾತವರಣ ಇಷ್ಟವಾಯಿತು. ಇದಕ್ಕಾಗಿ ಜೈಶಂಕರ್ ಮತ್ತು ಭಾರತದ ರಾಜತಾಂತ್ರಿಕರನ್ನು ಅಭಿನಂದಿಸುತ್ತೇನೆ. ವಿದೇಶಾಂಗ ಇಲಾಖೆ ದೇಶಕ್ಕೆ ನೀಡಿದ ಕೊಡುಗೆಗಳಲ್ಲಿ ಇದು ಮಹತ್ವದ್ದಾಗಿದೆ’ ಎಂದು ಸಂಸದ ತರೂರ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>‘ನಾನು ಬಿಹಾರಕ್ಕೆ ಇಲ್ಲಿನ ಸಂಸ್ಕೃತಿಯ ಬಗ್ಗೆ ತಿಳಿಯಲು ಬಂದಿದ್ದೇನೆ. ರಾಜಕೀಯ ಕಾರಣಕ್ಕೆ ಅಲ್ಲ. ಬಿಹಾರ ವಸ್ತುಸಂಗ್ರಹಾಲಯ ಮತ್ತು ಬಾಪೂ ಗೋಪುರವನ್ನು ನೋಡುವಂತೆ ಇತರರಿಗೆ ಸಲಹೆ ನೀಡುತ್ತೇನೆ’ ಎಂದು ತಿಳಿಸಿದ್ದಾರೆ.</p>.<p>ತರೂರ್ ಅವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಪರವಾಗಿ ಹಾಗೂ ತಮ್ಮ ಪಕ್ಷ ಮತ್ತು ನಾಯಕರ ಸಿದ್ಧಾಂತಗಳಿಗೆ ವಿರುದ್ಧವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>