<p><strong>ನವದೆಹಲಿ:</strong> ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಚುನಾವಣೆಗೂ ಮುನ್ನ ಸಂಸದ ಶಶಿ ತರೂರ್ ಅವರು ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸೋಮವಾರ ಭೇಟಿಯಾಗಿದ್ದಾರೆ.</p>.<p>ಸೋನಿಯಾ ಗಾಂಧಿ ಅವರ ನಿವಾಸಕ್ಕೆ ತೆರಳಿದ ತರೂರ್, ಮಾತುಕತೆ ನಡೆಸಿದ್ದಾರೆ. ಮಾತುಕತೆಯ ವಿವರ ಬಹಿರಂಗವಾಗಿಲ್ಲ.</p>.<p>ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಶಶಿ ತರೂರ್ ಸ್ಪರ್ಧಿಸಬಹುದು ಮತ್ತು ಸೆಪ್ಟೆಂಬರ್ 22ರಿಂದ ಆರಂಭವಾಗಲಿರುವ ಚುನಾವಣೆ ಪ್ರಕ್ರಿಯೆಯಲ್ಲಿ ತರೂರ್ ಕೂಡ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/amarinder-singh-set-to-join-bjp-meets-nadda-973312.html" itemprop="url">ಅಮರಿಂದರ್ ಸಿಂಗ್ ಇಂದು ಬಿಜೆಪಿಗೆ ಸೇರ್ಪಡೆ; ಜೆ.ಪಿ ನಡ್ಡಾ ಜೊತೆಗೆ ಮಾತುಕತೆ </a></p>.<p>ಇವೆಲ್ಲದರ ನಡುವೆ ಸೋನಿಯಾ ಗಾಂಧಿ ಅವರನ್ನು ತರೂರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.</p>.<p>ಈ ಹಿಂದೆ ಪಕ್ಷ ಸಂಘಟನೆಯಲ್ಲಿ ಸುಧಾರಣೆ ಕುರಿತಂತೆ ಸೋನಿಯಾ ಗಾಂಧಿಗೆ ಪತ್ರ ಬರೆದ ಜಿ-23 ನಾಯಕರಲ್ಲಿ ತರೂರ್ ಕೂಡ ಸೇರಿದ್ದಾರೆ.</p>.<p>ಏತನ್ಮಧ್ಯೆ ರಾಹುಲ್ ಗಾಂಧಿ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವಂತೆ ರಾಜಸ್ಥಾನ, ತಮಿಳುನಾಡು, ಗುಜರಾತ್ ಹಾಗೂ ಬಿಹಾರ ಪ್ರದೇಶ ಕಾಂಗ್ರೆಸ್ ನಿರ್ಣಯವನ್ನು ಅಂಗೀಕರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಚುನಾವಣೆಗೂ ಮುನ್ನ ಸಂಸದ ಶಶಿ ತರೂರ್ ಅವರು ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸೋಮವಾರ ಭೇಟಿಯಾಗಿದ್ದಾರೆ.</p>.<p>ಸೋನಿಯಾ ಗಾಂಧಿ ಅವರ ನಿವಾಸಕ್ಕೆ ತೆರಳಿದ ತರೂರ್, ಮಾತುಕತೆ ನಡೆಸಿದ್ದಾರೆ. ಮಾತುಕತೆಯ ವಿವರ ಬಹಿರಂಗವಾಗಿಲ್ಲ.</p>.<p>ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಶಶಿ ತರೂರ್ ಸ್ಪರ್ಧಿಸಬಹುದು ಮತ್ತು ಸೆಪ್ಟೆಂಬರ್ 22ರಿಂದ ಆರಂಭವಾಗಲಿರುವ ಚುನಾವಣೆ ಪ್ರಕ್ರಿಯೆಯಲ್ಲಿ ತರೂರ್ ಕೂಡ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/amarinder-singh-set-to-join-bjp-meets-nadda-973312.html" itemprop="url">ಅಮರಿಂದರ್ ಸಿಂಗ್ ಇಂದು ಬಿಜೆಪಿಗೆ ಸೇರ್ಪಡೆ; ಜೆ.ಪಿ ನಡ್ಡಾ ಜೊತೆಗೆ ಮಾತುಕತೆ </a></p>.<p>ಇವೆಲ್ಲದರ ನಡುವೆ ಸೋನಿಯಾ ಗಾಂಧಿ ಅವರನ್ನು ತರೂರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.</p>.<p>ಈ ಹಿಂದೆ ಪಕ್ಷ ಸಂಘಟನೆಯಲ್ಲಿ ಸುಧಾರಣೆ ಕುರಿತಂತೆ ಸೋನಿಯಾ ಗಾಂಧಿಗೆ ಪತ್ರ ಬರೆದ ಜಿ-23 ನಾಯಕರಲ್ಲಿ ತರೂರ್ ಕೂಡ ಸೇರಿದ್ದಾರೆ.</p>.<p>ಏತನ್ಮಧ್ಯೆ ರಾಹುಲ್ ಗಾಂಧಿ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವಂತೆ ರಾಜಸ್ಥಾನ, ತಮಿಳುನಾಡು, ಗುಜರಾತ್ ಹಾಗೂ ಬಿಹಾರ ಪ್ರದೇಶ ಕಾಂಗ್ರೆಸ್ ನಿರ್ಣಯವನ್ನು ಅಂಗೀಕರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>