<p>ಹಿಂದುತ್ವ ಸಿದ್ಧಾಂತವಾದಿ ವಿ.ಡಿ. ಸಾವರ್ಕರ್ ಹೆಸರಿನಲ್ಲಿ ನೀಡುವ ಪ್ರಶಸ್ತಿಗೆ ಅನುಮತಿ ಇಲ್ಲದೆ ನನ್ನ ಹೆಸರು ಘೋಷಿಸಲಾಗಿದೆ. ಇದು ಬೇಜವಾಬ್ದಾರಿ ವರ್ತನೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಬುಧವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>ಪ್ರಶಸ್ತಿ ನೀಡುವ ಸಂಸ್ಥೆಯ ಕುರಿತ ಸ್ಪಷ್ಟ ಮಾಹಿತಿ ಇಲ್ಲದಿದ್ದರೆ ಪ್ರಶಸ್ತಿ ಸ್ವೀಕರಿಸುವುದಿಲ್ಲ ಹಾಗೂ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.</p><p>ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ತರೂರ್, 'ವೀರ್ ಸಾವರ್ಕರ್ ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡಲಾಗಿದ್ದು, ದೆಹಲಿಯಲ್ಲಿ ಇಂದು ಪ್ರದಾನ ಮಾಡಲಾಗುತ್ತದೆ. ಈ ವಿಚಾರವು ಮಾಧ್ಯಮಗಳಿಂದ ಗೊತ್ತಾಯಿತು. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತ ಚಲಾಯಿಸುವ ಸಲುವಾಗಿ ಕೇರಳಕ್ಕೆ ಬಂದಿದ್ದೇನೆ' ಎಂದು ತಿಳಿಸಿದ್ದಾರೆ.</p><p>ಹಾಗೆಯೇ, 'ಅನುಮತಿ ಪಡೆಯದೆ ನನ್ನ ಹೆಸರು ಘೋಷಣೆ ಮಾಡಿರುವುದು ಸಂಘಟಕರ ಹೊಣೆಗೇಡಿತನವಾಗಿದೆ' ಎಂದು ಕಿಡಿಕಾರಿರುವ ಅವರು, 'ಪ್ರಶಸ್ತಿಯ ಬಗ್ಗೆ ನನಗೆ ಗೊತ್ತಿಲ್ಲ. ಅದನ್ನು ಸ್ವೀಕರಿಸುವುದಿಲ್ಲ' ಎಂದು ಖಚಿತಪಡಿಸಿದ್ದಾರೆ.</p><p>'ಈ ವಿಚಾರವಾಗಿ ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ. ಆದಾಗ್ಯೂ ಕೆಲವು ಮಾಧ್ಯಮಗಳು ಅದದೇ ಪ್ರಶ್ನೆಗಳನ್ನು ಕೇಳುತ್ತಿವೆ' ಎಂದೂ ಬೇಸರ ವ್ಯಕ್ತಪಡಿಸಿರುವ ತರೂರ್, ಎಲ್ಲ ಸಂದೇಹಗಳಿಗೆ ತೆರೆ ಎಳೆಯುವುದಕ್ಕಾಗಿ ಈ ಹೇಳಿಕೆ ನೀಡುತ್ತಿರುವುದಾಗಿ ಒತ್ತಿ ಹೇಳಿದ್ದಾರೆ.</p><p>'ಪ್ರಶಸ್ತಿ ಹಾಗೂ ಅದನ್ನು ನೀಡುವ ಸಂಸ್ಥೆಯ ಬಗ್ಗೆ ಸ್ಪಷ್ಟ ಮಾಹಿತಿ ಅಥವಾ ಯಾವುದೇ ವಿವರಗಳು ಲಭ್ಯವಿಲ್ಲ. ನಾನು ಕಾರ್ಯಕ್ರಮದಲ್ಲಿ ಭಾಗವಹಿಸುವ ಅಥವಾ ಪ್ರಶಸ್ತಿ ಸ್ವೀಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ' ಎಂದು ಹೇಳಿದ್ದಾರೆ.</p><p><strong>'ತರೂರ್ಗೆ ತಿಳಿಸಿದ್ದೆವು'<br></strong>ತಿರುವನಂತಪುರಂ ಸಂಸದ ತರೂರ್ ಹೇಳಿಕೆ ಬೆನ್ನಲ್ಲೇ, ಸಂಘಟಕರು ಪ್ರತಿಕ್ರಿಯೆ ನೀಡಿದ್ದಾರೆ.</p><p>ತರೂರ್ ಅವರಿಗೆ ಈ ವಿಚಾರವನ್ನು ಮೊದಲೇ ತಿಳಿಸಿದ್ದೆವು ಎಂದು ಹಿಘರೇಂಜ್ ಗ್ರಾಮೀಣಾಭಿವೃದ್ಧಿ ಸಮಾಜದ (ಎಚ್ಆರ್ಡಿಎಸ್) ಕಾರ್ಯದರ್ಶಿ ಆಜಿ ಕೃಷ್ಣನ್ ಅವರು ಸುದ್ದಿ ವಾಹಿನಿಯೊಂದಕ್ಕೆ ಹೇಳಿದ್ದಾರೆ.</p><p>'ನಾವು ಅವರಿಗೆ ಪಟ್ಟಿ ನೀಡಿದ್ದೆವು. ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂಬುದನ್ನು ನಮಗೆ ಇನ್ನೂ ಖಚಿತಪಡಿಸಿಲ್ಲ. ಬಹುಶಃ, ಕಾಂಗ್ರೆಸ್ ಈ ಇದನ್ನು ವಿವಾದ ಮಾಡಬಹುದು ಎಂಬ ಭಯ ಅವರಿಗೆ ಇರಬಹುದು' ಎಂದಿದ್ದಾರೆ.</p><p><strong>ಕಾಂಗ್ರೆಸ್ ಅಸಮಾಧಾನ<br></strong>ತರೂರ್ ಅವರಿಗೆ ಪ್ರಶಸ್ತಿ ಘೋಷಣೆಯಾಗಿರುವ ಬಗ್ಗೆ ಕಾಂಗ್ರೆಸ್ ನಾಯಕ ಕೆ. ಮುರಳೀಧರನ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>ಬ್ರಿಟಿಷರ ಎದುರು ತಲೆಬಾಗಿದ್ದ ಸಾವರ್ಕರ್ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಯನ್ನು ತರೂರ್ ಸೇರಿದಂತೆ ಪಕ್ಷದ ಯಾರೊಬ್ಬರೂ ಸ್ವೀಕರಿಸಬಾರದು ಎಂದು ಹೇಳಿದ್ದರು.</p><p>ತರೂರ್ ಅವರು ಪ್ರಶಸ್ತಿ ಸ್ವೀಕರಿಸಿದರೆ ಕಾಂಗ್ರೆಸ್ಗೆ ಮುಜುಗರವಾಗಲಿದೆ. ಹಾಗಾಗಿ, ಅವರು ಪ್ರಶಸ್ತಿ ಸ್ವೀಕರಿಸುವುದಿಲ್ಲ ಎಂದು ಭಾವಿಸಿದ್ದೇವೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿಂದುತ್ವ ಸಿದ್ಧಾಂತವಾದಿ ವಿ.ಡಿ. ಸಾವರ್ಕರ್ ಹೆಸರಿನಲ್ಲಿ ನೀಡುವ ಪ್ರಶಸ್ತಿಗೆ ಅನುಮತಿ ಇಲ್ಲದೆ ನನ್ನ ಹೆಸರು ಘೋಷಿಸಲಾಗಿದೆ. ಇದು ಬೇಜವಾಬ್ದಾರಿ ವರ್ತನೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಬುಧವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>ಪ್ರಶಸ್ತಿ ನೀಡುವ ಸಂಸ್ಥೆಯ ಕುರಿತ ಸ್ಪಷ್ಟ ಮಾಹಿತಿ ಇಲ್ಲದಿದ್ದರೆ ಪ್ರಶಸ್ತಿ ಸ್ವೀಕರಿಸುವುದಿಲ್ಲ ಹಾಗೂ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.</p><p>ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ತರೂರ್, 'ವೀರ್ ಸಾವರ್ಕರ್ ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡಲಾಗಿದ್ದು, ದೆಹಲಿಯಲ್ಲಿ ಇಂದು ಪ್ರದಾನ ಮಾಡಲಾಗುತ್ತದೆ. ಈ ವಿಚಾರವು ಮಾಧ್ಯಮಗಳಿಂದ ಗೊತ್ತಾಯಿತು. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತ ಚಲಾಯಿಸುವ ಸಲುವಾಗಿ ಕೇರಳಕ್ಕೆ ಬಂದಿದ್ದೇನೆ' ಎಂದು ತಿಳಿಸಿದ್ದಾರೆ.</p><p>ಹಾಗೆಯೇ, 'ಅನುಮತಿ ಪಡೆಯದೆ ನನ್ನ ಹೆಸರು ಘೋಷಣೆ ಮಾಡಿರುವುದು ಸಂಘಟಕರ ಹೊಣೆಗೇಡಿತನವಾಗಿದೆ' ಎಂದು ಕಿಡಿಕಾರಿರುವ ಅವರು, 'ಪ್ರಶಸ್ತಿಯ ಬಗ್ಗೆ ನನಗೆ ಗೊತ್ತಿಲ್ಲ. ಅದನ್ನು ಸ್ವೀಕರಿಸುವುದಿಲ್ಲ' ಎಂದು ಖಚಿತಪಡಿಸಿದ್ದಾರೆ.</p><p>'ಈ ವಿಚಾರವಾಗಿ ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ. ಆದಾಗ್ಯೂ ಕೆಲವು ಮಾಧ್ಯಮಗಳು ಅದದೇ ಪ್ರಶ್ನೆಗಳನ್ನು ಕೇಳುತ್ತಿವೆ' ಎಂದೂ ಬೇಸರ ವ್ಯಕ್ತಪಡಿಸಿರುವ ತರೂರ್, ಎಲ್ಲ ಸಂದೇಹಗಳಿಗೆ ತೆರೆ ಎಳೆಯುವುದಕ್ಕಾಗಿ ಈ ಹೇಳಿಕೆ ನೀಡುತ್ತಿರುವುದಾಗಿ ಒತ್ತಿ ಹೇಳಿದ್ದಾರೆ.</p><p>'ಪ್ರಶಸ್ತಿ ಹಾಗೂ ಅದನ್ನು ನೀಡುವ ಸಂಸ್ಥೆಯ ಬಗ್ಗೆ ಸ್ಪಷ್ಟ ಮಾಹಿತಿ ಅಥವಾ ಯಾವುದೇ ವಿವರಗಳು ಲಭ್ಯವಿಲ್ಲ. ನಾನು ಕಾರ್ಯಕ್ರಮದಲ್ಲಿ ಭಾಗವಹಿಸುವ ಅಥವಾ ಪ್ರಶಸ್ತಿ ಸ್ವೀಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ' ಎಂದು ಹೇಳಿದ್ದಾರೆ.</p><p><strong>'ತರೂರ್ಗೆ ತಿಳಿಸಿದ್ದೆವು'<br></strong>ತಿರುವನಂತಪುರಂ ಸಂಸದ ತರೂರ್ ಹೇಳಿಕೆ ಬೆನ್ನಲ್ಲೇ, ಸಂಘಟಕರು ಪ್ರತಿಕ್ರಿಯೆ ನೀಡಿದ್ದಾರೆ.</p><p>ತರೂರ್ ಅವರಿಗೆ ಈ ವಿಚಾರವನ್ನು ಮೊದಲೇ ತಿಳಿಸಿದ್ದೆವು ಎಂದು ಹಿಘರೇಂಜ್ ಗ್ರಾಮೀಣಾಭಿವೃದ್ಧಿ ಸಮಾಜದ (ಎಚ್ಆರ್ಡಿಎಸ್) ಕಾರ್ಯದರ್ಶಿ ಆಜಿ ಕೃಷ್ಣನ್ ಅವರು ಸುದ್ದಿ ವಾಹಿನಿಯೊಂದಕ್ಕೆ ಹೇಳಿದ್ದಾರೆ.</p><p>'ನಾವು ಅವರಿಗೆ ಪಟ್ಟಿ ನೀಡಿದ್ದೆವು. ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂಬುದನ್ನು ನಮಗೆ ಇನ್ನೂ ಖಚಿತಪಡಿಸಿಲ್ಲ. ಬಹುಶಃ, ಕಾಂಗ್ರೆಸ್ ಈ ಇದನ್ನು ವಿವಾದ ಮಾಡಬಹುದು ಎಂಬ ಭಯ ಅವರಿಗೆ ಇರಬಹುದು' ಎಂದಿದ್ದಾರೆ.</p><p><strong>ಕಾಂಗ್ರೆಸ್ ಅಸಮಾಧಾನ<br></strong>ತರೂರ್ ಅವರಿಗೆ ಪ್ರಶಸ್ತಿ ಘೋಷಣೆಯಾಗಿರುವ ಬಗ್ಗೆ ಕಾಂಗ್ರೆಸ್ ನಾಯಕ ಕೆ. ಮುರಳೀಧರನ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>ಬ್ರಿಟಿಷರ ಎದುರು ತಲೆಬಾಗಿದ್ದ ಸಾವರ್ಕರ್ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಯನ್ನು ತರೂರ್ ಸೇರಿದಂತೆ ಪಕ್ಷದ ಯಾರೊಬ್ಬರೂ ಸ್ವೀಕರಿಸಬಾರದು ಎಂದು ಹೇಳಿದ್ದರು.</p><p>ತರೂರ್ ಅವರು ಪ್ರಶಸ್ತಿ ಸ್ವೀಕರಿಸಿದರೆ ಕಾಂಗ್ರೆಸ್ಗೆ ಮುಜುಗರವಾಗಲಿದೆ. ಹಾಗಾಗಿ, ಅವರು ಪ್ರಶಸ್ತಿ ಸ್ವೀಕರಿಸುವುದಿಲ್ಲ ಎಂದು ಭಾವಿಸಿದ್ದೇವೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>