<p><strong>ತಿರುವನಂತಪುರ:</strong> ‘ಕೆಲವು ವಿಚಾರಗಳ ಕುರಿತ ನನ್ನ ನಿಲುವುಗಳು ಮಾಧ್ಯಮಗಳಿಗೆ ‘ಬಿಜೆಪಿ ಪರ’ ಎಂಬಂತೆ ಕಾಣಬಹುದು. ಆದರೆ ನಾನು ‘ಸರ್ಕಾರದ ಪರ’ ಅಥವಾ ‘ದೇಶದ ಪರ’ದ ನಿಲುವು ಇದು ಎಂದೇ ಪರಿಗಣಿಸುತ್ತೇನೆ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶುಕ್ರವಾರ ಹೇಳಿದರು.</p>.<p>‘ಈ ಹಿಂದೆಯೂ ಈ ಬಗ್ಗೆ ಸ್ಪಷ್ಟನೆ ನೀಡಿದ್ದೆ. ದೇಶದ ಕುರಿತಂತೆ ಮಾತನಾಡಲು ಆದ್ಯತೆ ನೀಡುತ್ತೇನೆ, ರಾಜಕೀಯದ ಬಗ್ಗೆ ಮಾತನಾಡಲು ಇಷ್ಟವಿಲ್ಲ’ ಎಂದು ಹೇಳಿದರು.</p>.<p>ಇದೇ ಸಂದರ್ಭದಲ್ಲಿ, ‘ಪಕ್ಷದ ಸದಸ್ಯರು ಪಕ್ಷದ ಗೆರೆಯನ್ನು ದಾಟಬಾರದು. ಸಂಸತ್ತಿನಲ್ಲಿ ಯಾವತ್ತೂ ಪಕ್ಷದ ಪರವಾಗಿ ನಿಂತಿದ್ದೇನೆ’ ಎಂದೂ ಹೇಳಿದರು.</p>.<p>‘ನಾನು ಕಾಂಗ್ರೆಸ್ನಲ್ಲಿಯೇ ಇರುತ್ತೇನೆ, ಎಲ್ಲಿಗೂ ಹೋಗುವುದಿಲ್ಲ. ಕೇರಳದ ಚುನಾವಣಾ ಪ್ರಚಾರದಲ್ಲೂ ಭಾಗಿಯಾಗುತ್ತೇನೆ. ಯುಡಿಎಫ್ ಜಯಕ್ಕಾಗಿ ಕೆಲಸ ಮಾಡುತ್ತೇನೆ’ ಎಂದರು.</p>.<p>ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ತರೂರ್ ಅವರನ್ನು ಕೆಲವು ನಾಯಕರು ಸರಿಯಾಗಿ ನಡೆಸಿಕೊಂಡಿರಲಿಲ್ಲ. ಈ ಬೆನ್ನಲ್ಲೇ, ತರೂರ್ ಅವರು ಗುರುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಬಳಿಕ ‘ಎಲ್ಲವೂ ಸರಿಯಾಗಿದೆ’ ಎಂದು ಹೇಳಿದ್ದರು.</p>.<p>ಪಹಲ್ಗಾಮ್ ಭಯೋತ್ಪಾದಕ ದಾಳಿ ನಂತರದ ಭಾರತ–ಪಾಕಿಸ್ತಾನ ಸಂಘರ್ಷದ ಬಗ್ಗೆ ತರೂರ್ ಅವರು ಕಳೆದ ವರ್ಷ ನೀಡಿದ್ದ ಹೇಳಿಕೆಯು ವಿವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಪಕ್ಷ ಮತ್ತು ಅವರ ಹೇಳಿಕೆ ನಡುವೆ ವೈರುಧ್ಯವಿತ್ತು. ಹಲವು ಕಾಂಗ್ರೆಸ್ ನಾಯಕರು ಅವರನ್ನು, ಅವರ ಉದ್ದೇಶವನ್ನು ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ‘ಕೆಲವು ವಿಚಾರಗಳ ಕುರಿತ ನನ್ನ ನಿಲುವುಗಳು ಮಾಧ್ಯಮಗಳಿಗೆ ‘ಬಿಜೆಪಿ ಪರ’ ಎಂಬಂತೆ ಕಾಣಬಹುದು. ಆದರೆ ನಾನು ‘ಸರ್ಕಾರದ ಪರ’ ಅಥವಾ ‘ದೇಶದ ಪರ’ದ ನಿಲುವು ಇದು ಎಂದೇ ಪರಿಗಣಿಸುತ್ತೇನೆ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶುಕ್ರವಾರ ಹೇಳಿದರು.</p>.<p>‘ಈ ಹಿಂದೆಯೂ ಈ ಬಗ್ಗೆ ಸ್ಪಷ್ಟನೆ ನೀಡಿದ್ದೆ. ದೇಶದ ಕುರಿತಂತೆ ಮಾತನಾಡಲು ಆದ್ಯತೆ ನೀಡುತ್ತೇನೆ, ರಾಜಕೀಯದ ಬಗ್ಗೆ ಮಾತನಾಡಲು ಇಷ್ಟವಿಲ್ಲ’ ಎಂದು ಹೇಳಿದರು.</p>.<p>ಇದೇ ಸಂದರ್ಭದಲ್ಲಿ, ‘ಪಕ್ಷದ ಸದಸ್ಯರು ಪಕ್ಷದ ಗೆರೆಯನ್ನು ದಾಟಬಾರದು. ಸಂಸತ್ತಿನಲ್ಲಿ ಯಾವತ್ತೂ ಪಕ್ಷದ ಪರವಾಗಿ ನಿಂತಿದ್ದೇನೆ’ ಎಂದೂ ಹೇಳಿದರು.</p>.<p>‘ನಾನು ಕಾಂಗ್ರೆಸ್ನಲ್ಲಿಯೇ ಇರುತ್ತೇನೆ, ಎಲ್ಲಿಗೂ ಹೋಗುವುದಿಲ್ಲ. ಕೇರಳದ ಚುನಾವಣಾ ಪ್ರಚಾರದಲ್ಲೂ ಭಾಗಿಯಾಗುತ್ತೇನೆ. ಯುಡಿಎಫ್ ಜಯಕ್ಕಾಗಿ ಕೆಲಸ ಮಾಡುತ್ತೇನೆ’ ಎಂದರು.</p>.<p>ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ತರೂರ್ ಅವರನ್ನು ಕೆಲವು ನಾಯಕರು ಸರಿಯಾಗಿ ನಡೆಸಿಕೊಂಡಿರಲಿಲ್ಲ. ಈ ಬೆನ್ನಲ್ಲೇ, ತರೂರ್ ಅವರು ಗುರುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಬಳಿಕ ‘ಎಲ್ಲವೂ ಸರಿಯಾಗಿದೆ’ ಎಂದು ಹೇಳಿದ್ದರು.</p>.<p>ಪಹಲ್ಗಾಮ್ ಭಯೋತ್ಪಾದಕ ದಾಳಿ ನಂತರದ ಭಾರತ–ಪಾಕಿಸ್ತಾನ ಸಂಘರ್ಷದ ಬಗ್ಗೆ ತರೂರ್ ಅವರು ಕಳೆದ ವರ್ಷ ನೀಡಿದ್ದ ಹೇಳಿಕೆಯು ವಿವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಪಕ್ಷ ಮತ್ತು ಅವರ ಹೇಳಿಕೆ ನಡುವೆ ವೈರುಧ್ಯವಿತ್ತು. ಹಲವು ಕಾಂಗ್ರೆಸ್ ನಾಯಕರು ಅವರನ್ನು, ಅವರ ಉದ್ದೇಶವನ್ನು ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>