<p>ಶಿಗ್ಗಾವಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಹಲವಾರು ವರ್ಷಗಳಿಂದ ಹೋರಾಟಗಳು ನಡೆದಿದ್ದವು. ಇದರ ಫಲವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಿಸಿದರು. ಮಂದಿರ ನಿರ್ಮಾಣದ ಶ್ರೇಯ ಅವರಿಗೆ ಸಲ್ಲಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>ಪಟ್ಟಣದ ಸಂತೆ ಮೈದಾನದಲ್ಲಿ ಬುಧವಾರ ಶ್ರೀರಾಮ ನವಮಿ ಉತ್ಸವ ಹಾಗೂ ಬೃಹತ್ ಶೋಭಾ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಯುವ ಬಿಜೆಪಿ ಮುಖಂಡ ಭರತ್ ಬೊಮ್ಮಾಯಿ ಮಾತನಾಡಿ, ರಾಮ ಎಂದರೆ ಭಾರತ, ರಾಮ ಎಂದರೆ ಚಿಂತನೆ, ರಾಮ ಎಂದರೆ ಸತ್ಯ, ರಾಮ ಎಂದರೆ ಜಗತ್ತು. ರಾಮ ಮಾನವೀಯತೆ ಗುಣಗಳ ಬಗ್ಗೆ ಹೇಳಿಕೊಟ್ಟಿದ್ದಾನೆ. ಅವುಗಳನ್ನು ಪಾಲಿಸೋಣ ಎಂದು ಮಾರ್ಮಿಕವಾಗಿ ನುಡಿದರು.</p>.<p>ಗಂಜೀಗಟ್ಟಿ ಚರಮೂರ್ತೇಶ್ವರ ಮಠದ ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ರೈತ ಆತ್ಮಹತ್ಯೆ ಮಾಡಿಕೊಂಡಾಗ ಹೋಗದ ಸರ್ಕಾರಿ ಅಧಿಕಾರಿಗಳು, ಲಕ್ಕುಂಡಿಯಲ್ಲಿ ನಿಧಿ ಸಿಕ್ಕಾಗ ದೌಡಾಯಿಸಿ ಬರುತ್ತಾರೆ ಏನಿದು ವ್ಯವಸ್ಥೆ ಎಂದು ವಿಷಾದಿಸಿದರು.</p>.<p>ಧಾರವಾಡ ವಿಭಾಗದ ಶ್ರೀರಾಮ ಸೇನೆಯ ಅಧ್ಯಕ್ಷ ಗದಿಯಪ್ಪ ಕುರುವತ್ತಿ ಮಾತನಾಡಿದರು, ಬೀರವಳ್ಳಿಯ ಗುರುದೇವ ತಪೋವನದ ಪೂಜ್ಯ ನಂದಾ ತಾಯಿ ಸಮ್ಮುಖ ವಹಿಸಿದ್ದರು. ಯುವ ಮುಖಂಡ ಉಮೇಶ ಗೌಳಿ, ಕಾರ್ಯಕ್ರಮ ಆಯೋಜಕ ಬಸವರಾಜ ಕಲ್ಲಪ್ಪನವರ, ಕಾರ್ಯಕರ್ತರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-22-1755065374</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಗ್ಗಾವಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಹಲವಾರು ವರ್ಷಗಳಿಂದ ಹೋರಾಟಗಳು ನಡೆದಿದ್ದವು. ಇದರ ಫಲವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಿಸಿದರು. ಮಂದಿರ ನಿರ್ಮಾಣದ ಶ್ರೇಯ ಅವರಿಗೆ ಸಲ್ಲಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>ಪಟ್ಟಣದ ಸಂತೆ ಮೈದಾನದಲ್ಲಿ ಬುಧವಾರ ಶ್ರೀರಾಮ ನವಮಿ ಉತ್ಸವ ಹಾಗೂ ಬೃಹತ್ ಶೋಭಾ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಯುವ ಬಿಜೆಪಿ ಮುಖಂಡ ಭರತ್ ಬೊಮ್ಮಾಯಿ ಮಾತನಾಡಿ, ರಾಮ ಎಂದರೆ ಭಾರತ, ರಾಮ ಎಂದರೆ ಚಿಂತನೆ, ರಾಮ ಎಂದರೆ ಸತ್ಯ, ರಾಮ ಎಂದರೆ ಜಗತ್ತು. ರಾಮ ಮಾನವೀಯತೆ ಗುಣಗಳ ಬಗ್ಗೆ ಹೇಳಿಕೊಟ್ಟಿದ್ದಾನೆ. ಅವುಗಳನ್ನು ಪಾಲಿಸೋಣ ಎಂದು ಮಾರ್ಮಿಕವಾಗಿ ನುಡಿದರು.</p>.<p>ಗಂಜೀಗಟ್ಟಿ ಚರಮೂರ್ತೇಶ್ವರ ಮಠದ ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ರೈತ ಆತ್ಮಹತ್ಯೆ ಮಾಡಿಕೊಂಡಾಗ ಹೋಗದ ಸರ್ಕಾರಿ ಅಧಿಕಾರಿಗಳು, ಲಕ್ಕುಂಡಿಯಲ್ಲಿ ನಿಧಿ ಸಿಕ್ಕಾಗ ದೌಡಾಯಿಸಿ ಬರುತ್ತಾರೆ ಏನಿದು ವ್ಯವಸ್ಥೆ ಎಂದು ವಿಷಾದಿಸಿದರು.</p>.<p>ಧಾರವಾಡ ವಿಭಾಗದ ಶ್ರೀರಾಮ ಸೇನೆಯ ಅಧ್ಯಕ್ಷ ಗದಿಯಪ್ಪ ಕುರುವತ್ತಿ ಮಾತನಾಡಿದರು, ಬೀರವಳ್ಳಿಯ ಗುರುದೇವ ತಪೋವನದ ಪೂಜ್ಯ ನಂದಾ ತಾಯಿ ಸಮ್ಮುಖ ವಹಿಸಿದ್ದರು. ಯುವ ಮುಖಂಡ ಉಮೇಶ ಗೌಳಿ, ಕಾರ್ಯಕ್ರಮ ಆಯೋಜಕ ಬಸವರಾಜ ಕಲ್ಲಪ್ಪನವರ, ಕಾರ್ಯಕರ್ತರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-22-1755065374</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>