ಪೊಲೀಸ್ ತಿಕ್ಕಾಟದ ಹಿಂದೆ ರಾಜಕೀಯ!
'ಎಐ ಸಮಾವೇಶ'ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟಾಗಿತ್ತು. ಹೀಗಾಗಿ, ಪ್ರತಿಭಟನೆಯು ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿತ್ತು. ಅಂದಹಾಗೆ, ಹಿಮಾಚಲ ಪ್ರದೇಶದಲ್ಲಿ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರವಿದೆ. ದೆಹಲಿಯಲ್ಲಿ ರೇಖಾ ಗುಪ್ತಾ ಸಿಎಂ ಆಗಿದ್ದು, ಬಿಜೆಪಿ ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ. ಹೀಗಾಗಿ, ಪೊಲೀಸರ ತಿಕ್ಕಾಟದ ಹಿಂದೆ ರಾಜಕೀಯ ಲೆಕ್ಕಾಚಾರವಿದೆ ಎನ್ನಲಾಗುತ್ತಿದೆ.