<p><strong>ಮುಂಬೈ:</strong> ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮೈತ್ರಿ ಪಕ್ಷಗಳ ಕಳಪೆ ಸಾಧನೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡಣವೀಸ್ ಹಾಗೂ ಅಜಿತ್ ಪವಾರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. </p><p>ಸಭೆಯ ನಿಖರ ವಿವರಗಳು ಲಭ್ಯವಾಗಿಲ್ಲ. ಸೋಮವಾರ ತಡರಾತ್ರಿವರೆಗೂ ಸಭೆ ಮುಂದುವರಿದಿದೆ. ಇದಾದ ಬಳಿಕ ರಾಜ್ಯದ ಬಿಜೆಪಿ ನಾಯಕರು ಪರಿಶೀಲನಾ ಸಭೆಗಾಗಿ ದೆಹಲಿಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. </p><p>ಸಿಎಂ ಅಧಿಕೃತ ನಿವಾಸದಲ್ಲಿ ಸಭೆ ನಡೆದಿದೆ. ಪವಾರ್ ತೆರಳಿದ ಬಳಿಕ ಫಡಣವೀಸ್ ಅವರೊಂದಿಗೆ ಶಿಂದೆ ಚರ್ಚೆ ಮುಂದುವರಿಸಿದ್ದರು ಎಂದು ಬಿಜೆಪಿ ಮೂಲಗಳು ತಿಳಿಸಿವೆ. </p><p>ಎನ್ಡಿಎ ಮೈತ್ರಿಕೂಟಕ್ಕೆ ಈ ಬಾರಿಯ ಚುನಾವಣಾ ಫಲಿತಾಂಶ ತೀವ್ರ ಹೊಡೆತ ನೀಡಿದೆ. ಪಕ್ಷದ ಸಾಧನೆಗೆ ಸಂಬಂಧಿಸಿದಂತೆ ಬಿಜೆಪಿಯ ಕೇಂದ್ರ ನೇತೃತ್ವವು ರಾಜ್ಯ ನಾಯಕರೊಂದಿಗೆ ಪರಿಶೀಲನಾ ಸಭೆ ಕರೆದಿದೆ. </p><p>ರಾಜ್ಯ ನಾಯಕರೊಂದಿಗೆ ಸಭೆ ನಡೆಸುವುದು ವಾಡಿಕೆಯಾಗಿದೆ. ಲೋಕಸಭೆ ಚುನಾವಣಾ ಫಲಿತಾಂಶದ ಬಳಿಕ ರಾಜೀನಾಮೆಗೆ ಫಡಣವೀಸ್ ಮುಂದಾಗಿದ್ದರು. ವಿಧಾನಸಭೆ ಚುನಾವಣೆವರೆಗೂ ಪಕ್ಷಕ್ಕಾಗಿ ದುಡಿಯುವ ಇಚ್ಛೆ ವ್ಯಕ್ತಪಡಿಸಿದ್ದರು. ಈ ಕುರಿತು ದೆಹಲಿಯ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ. </p><p>ಮಹಾರಾಷ್ಟ್ರ ಬಿಜೆಪಿ ಘಟಕದ ಉಸ್ತುವಾರಿಯನ್ನು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರಿಗೆ ವಹಿಸಲಾಗಿದೆ. ಅಶ್ವಿನಿ ವೈಷ್ಣವ್ ಸಹ ಪ್ರಭಾರಿ ಆಗಿದ್ದಾರೆ. </p><p>ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಅಕ್ಟೋಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆಯಿದೆ. </p><p>48 ಸದಸ್ಯ ಬಲದ ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನಾ (ಶಿಂದೆ ಬಣ) ಹಾಗೂ ಎನ್ಸಿಪಿ (ಅಜಿತ್ ಪವಾರ್) ಮೈತ್ರಿ ಪಕ್ಷಗಳು 17 ಸ್ಥಾನಗಳಲ್ಲಿ ಜಯಿಸಿತ್ತು. ಬಿಜೆಪಿಗೆ 9, ಶಿವಸೇನಾ 7 ಹಾಗೂ ಎನ್ಸಿಪಿಗೆ 1 ಸ್ಥಾನ ದೊರಕಿತ್ತು. </p><p>ವಿರೋಧ ಪಕ್ಷಗಳ ಒಕ್ಕೂಟ ಮಹಾ ವಿಕಾಪ್ ಆಘಾಡಿಯು 30 ಸ್ಥಾನಗಳಲ್ಲಿ ಜಯಭೇರಿ ಗಳಿಸಿದೆ. ಕಾಂಗ್ರೆಸ್, ಶಿವಸೇನಾ ಉದ್ಧವ್ ಠಾಕ್ರೆ ಹಾಗೂ ಎನ್ಸಿಪಿ ಶರದ್ ಪವಾರ್ ಬಣಗಳು ಪ್ರಮುಖ ಪ್ರಕ್ಷಗಳಾಗಿವೆ. </p>.Election Results: ಪ್ರಮುಖ ರಾಜ್ಯಗಳ ಫಲಿತಾಂಶ.ಮಹಾರಾಷ್ಟ್ರ: ಚುನಾವಣೆ ಸೋಲಿನ ಹೊಣೆಹೊತ್ತ ಫಡಣವಿಸ್; DCM ಸ್ಥಾನ ತೊರೆಯಲು ಇಂಗಿತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮೈತ್ರಿ ಪಕ್ಷಗಳ ಕಳಪೆ ಸಾಧನೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡಣವೀಸ್ ಹಾಗೂ ಅಜಿತ್ ಪವಾರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. </p><p>ಸಭೆಯ ನಿಖರ ವಿವರಗಳು ಲಭ್ಯವಾಗಿಲ್ಲ. ಸೋಮವಾರ ತಡರಾತ್ರಿವರೆಗೂ ಸಭೆ ಮುಂದುವರಿದಿದೆ. ಇದಾದ ಬಳಿಕ ರಾಜ್ಯದ ಬಿಜೆಪಿ ನಾಯಕರು ಪರಿಶೀಲನಾ ಸಭೆಗಾಗಿ ದೆಹಲಿಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. </p><p>ಸಿಎಂ ಅಧಿಕೃತ ನಿವಾಸದಲ್ಲಿ ಸಭೆ ನಡೆದಿದೆ. ಪವಾರ್ ತೆರಳಿದ ಬಳಿಕ ಫಡಣವೀಸ್ ಅವರೊಂದಿಗೆ ಶಿಂದೆ ಚರ್ಚೆ ಮುಂದುವರಿಸಿದ್ದರು ಎಂದು ಬಿಜೆಪಿ ಮೂಲಗಳು ತಿಳಿಸಿವೆ. </p><p>ಎನ್ಡಿಎ ಮೈತ್ರಿಕೂಟಕ್ಕೆ ಈ ಬಾರಿಯ ಚುನಾವಣಾ ಫಲಿತಾಂಶ ತೀವ್ರ ಹೊಡೆತ ನೀಡಿದೆ. ಪಕ್ಷದ ಸಾಧನೆಗೆ ಸಂಬಂಧಿಸಿದಂತೆ ಬಿಜೆಪಿಯ ಕೇಂದ್ರ ನೇತೃತ್ವವು ರಾಜ್ಯ ನಾಯಕರೊಂದಿಗೆ ಪರಿಶೀಲನಾ ಸಭೆ ಕರೆದಿದೆ. </p><p>ರಾಜ್ಯ ನಾಯಕರೊಂದಿಗೆ ಸಭೆ ನಡೆಸುವುದು ವಾಡಿಕೆಯಾಗಿದೆ. ಲೋಕಸಭೆ ಚುನಾವಣಾ ಫಲಿತಾಂಶದ ಬಳಿಕ ರಾಜೀನಾಮೆಗೆ ಫಡಣವೀಸ್ ಮುಂದಾಗಿದ್ದರು. ವಿಧಾನಸಭೆ ಚುನಾವಣೆವರೆಗೂ ಪಕ್ಷಕ್ಕಾಗಿ ದುಡಿಯುವ ಇಚ್ಛೆ ವ್ಯಕ್ತಪಡಿಸಿದ್ದರು. ಈ ಕುರಿತು ದೆಹಲಿಯ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ. </p><p>ಮಹಾರಾಷ್ಟ್ರ ಬಿಜೆಪಿ ಘಟಕದ ಉಸ್ತುವಾರಿಯನ್ನು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರಿಗೆ ವಹಿಸಲಾಗಿದೆ. ಅಶ್ವಿನಿ ವೈಷ್ಣವ್ ಸಹ ಪ್ರಭಾರಿ ಆಗಿದ್ದಾರೆ. </p><p>ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಅಕ್ಟೋಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆಯಿದೆ. </p><p>48 ಸದಸ್ಯ ಬಲದ ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನಾ (ಶಿಂದೆ ಬಣ) ಹಾಗೂ ಎನ್ಸಿಪಿ (ಅಜಿತ್ ಪವಾರ್) ಮೈತ್ರಿ ಪಕ್ಷಗಳು 17 ಸ್ಥಾನಗಳಲ್ಲಿ ಜಯಿಸಿತ್ತು. ಬಿಜೆಪಿಗೆ 9, ಶಿವಸೇನಾ 7 ಹಾಗೂ ಎನ್ಸಿಪಿಗೆ 1 ಸ್ಥಾನ ದೊರಕಿತ್ತು. </p><p>ವಿರೋಧ ಪಕ್ಷಗಳ ಒಕ್ಕೂಟ ಮಹಾ ವಿಕಾಪ್ ಆಘಾಡಿಯು 30 ಸ್ಥಾನಗಳಲ್ಲಿ ಜಯಭೇರಿ ಗಳಿಸಿದೆ. ಕಾಂಗ್ರೆಸ್, ಶಿವಸೇನಾ ಉದ್ಧವ್ ಠಾಕ್ರೆ ಹಾಗೂ ಎನ್ಸಿಪಿ ಶರದ್ ಪವಾರ್ ಬಣಗಳು ಪ್ರಮುಖ ಪ್ರಕ್ಷಗಳಾಗಿವೆ. </p>.Election Results: ಪ್ರಮುಖ ರಾಜ್ಯಗಳ ಫಲಿತಾಂಶ.ಮಹಾರಾಷ್ಟ್ರ: ಚುನಾವಣೆ ಸೋಲಿನ ಹೊಣೆಹೊತ್ತ ಫಡಣವಿಸ್; DCM ಸ್ಥಾನ ತೊರೆಯಲು ಇಂಗಿತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>