ಬಂಧನಕ್ಕೂ ಮುನ್ನ ಮಾತನಾಡಿದ ಸುಖಬೀರ್ ಸಿಂಗ್, 'ಬಿರುಗಾಳಿ ಎದ್ದರೆ, ತನ್ನೆಲ್ಲ ಪಡೆಯ ಬಲವನ್ನು ಬಳಸಿದರೂ ಅದನ್ನು ಕ್ಯಾಪ್ಟನ್ ತಡೆಯಲು ಸಾಧ್ಯವಾಗುವುದಿಲ್ಲ. ಲಸಿಕೆಯಲ್ಲಿ ಹಗರಣವಾಗಿದೆ, ಫತೇಹ್ ಕಿಟ್ನಲ್ಲಿ (ರೋಗಿಗಳಿಗೆ ನೀಡುವ ವೈದ್ಯಕೀಯ ಕಿಟ್) ಹಗರಣ, ಎಸ್ಸಿ ವಿದ್ಯಾರ್ಥಿ ವೇತನದಲ್ಲಿ ಹಗರಣ, ರೈತರ ಭೂಮಿಯನ್ನು ಅತಿಕ್ರಮಿಸಿಕೊಳ್ಳಲಾಗಿದೆ' ಎಂದು ಆರೋಪಿಸಿದ್ದಾರೆ.