ಮುಂಬೈನಲ್ಲಿ ಶನಿವಾರ ನಡೆದ ರ್ಯಾಲಿಯೊಂದರಲ್ಲಿ ಕೃಷಿ ಸಂಕಷ್ಟ ಮತ್ತು ನಿರುದ್ಯೋಗದ ಜ್ವಲಂತ ಸಮಸ್ಯೆಗಳನ್ನು ಪ್ರಸ್ತಾಪಿಸದಿದ್ದಕ್ಕಾಗಿ ಠಾಕ್ರೆ ಅವರನ್ನು ಪತ್ರಿಕಾಗೋಷ್ಠಿಯಲ್ಲಿ ತರಾಟೆಗೆ ತೆಗೆದುಕೊಂಡ ರಾಣಾ ದಂಪತಿ, ‘ಹಿಂದೆ ಔರಂಗಾಬಾದ್ ಅನ್ನು ಸಂಭಾಜಿ ನಗರ ಎಂದು ಮರುನಾಮಕರಣ ಮಾಡುವುದಾಗಿ ಶಿವಸೇನಾ ಘೋಷಿಸಿತ್ತು. ಆದರೆ, ಈಗ ಮುಖ್ಯಮಂತ್ರಿ ಅದರ ಅಗತ್ಯವಿಲ್ಲ ಎನ್ನುತ್ತಿದ್ದಾರೆ. ಮರು ನಾಮಕರಣ ಮಾಡಿದರೆ ಮೈತ್ರಿಕೂಟದ ಪಾಲುದಾರರು ತಮ್ಮ ಬೆಂಬಲ ವಾಪಸ್ ಪಡೆದು ಸರ್ಕಾರವನ್ನು ಬೀಳಿಸುತ್ತಾರೆ ಎಂಬ ಭಯ ಮುಖ್ಯಮಂತ್ರಿ ಅವರನ್ನು ಆವರಿಸಿದೆ’ ಎಂದು ದೂರಿದ್ದಾರೆ.