<p><strong>ಪುಣೆ</strong>: ಸರಪಂಚ್ ಸಂತೋಷ್ ದೇಶಮುಖ್ ಅವರ ಹತ್ಯೆಯನ್ನು ಖಂಡಿಸಿ ಶಿವಸೇನಾ ಕಾರ್ಯಕರ್ತರು ಇಂದು (ಮಂಗಳವಾರ) ಪ್ರತಿಭಟನೆ ನಡೆಸಿದ್ದು, ಅಪರಾಧದಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದೆ.</p><p>ಶಿವಸೇನಾ ಪಕ್ಷದ ಪುಣೆ ಘಟಕದ ಅಧ್ಯಕ್ಷ ಪ್ರಮೋದ್ ಭಂಗೈರ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಪ್ರತಿಭಟನೆಯ ವೇಳೆ ಕಾರ್ಯಕರ್ತರು ಸಚಿವ ಧನಂಜಯ ಮುಂಡೆ ಅವರ ಆಪ್ತ ವಾಲ್ಮಿಕ್ ಕರಾಡ್ ಅವರ ಪ್ರತಿಕೃತಿಯನ್ನು ದಹಿಸಿದರು. </p><p>ದೇಶಮುಖ್ ಅವರನ್ನು ಕ್ರೂರವಾಗಿ ಕೊಲ್ಲಲಾಗಿದ್ದು, ಅಪರಾಧಿಗಳಿಗೆ ಮರಣದಂಡನೆ ವಿಧಿಸಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಭಂಗೈರೆ ಹೇಳಿದರು.</p><p>ಠಾಣೆಯಲ್ಲಿಯೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಠಾಣೆ ಸಂಸದ ನರೇಶ್ ಮಾಸ್ಕೆ ಮತ್ತು ಮಾಜಿ ಮೇಯರ್ ಮೀನಾಕ್ಷಿ ಶಿಂದೆ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ದೇಶಮುಖ್ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಫಲಕಗಳನ್ನು ಹಿಡಿದು ಪ್ರತಿಭಟನಾಕಾರರು ಪ್ರತಿಭಟಿಸಿದರು.</p><p>ಬೀಡ್ನ ಮಸ್ಸಾಜೋಗ್ ಗ್ರಾಮದ ಸರಪಂಚ್ ಆಗಿದ್ದ ಸಂತೋಷ್ ದೇಶಮುಖ್ ಅವರನ್ನು ಕಳೆದ ವರ್ಷ ಡಿಸೆಂಬರ್ 6ರಂದು ಅಪಹರಿಸಿ, ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು.</p><p>ದೇಶಮುಖ್ ಕೊಲೆ ಪ್ರಕರಣದಲ್ಲಿ ಸಚಿವ ಧನಂಜಯ ಮುಂಡೆ ಅವರ ಆಪ್ತ ವಾಲ್ಮಿಕ್ ಕರಾಡ್ ಅವರನ್ನು ಪ್ರಮುಖ ಆರೋಪಿ ಎಂದು ಸಿಐಡಿ ಹೆಸರಿಸಿತ್ತು.</p><p>ತಮ್ಮ ಆಪ್ತನ ಹೆಸರು ಕೇಳಿ ಬಂದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ಅವರು ಇಂದು (ಮಂಗಳವಾರ) ರಾಜೀನಾಮೆ ಸಲ್ಲಿಸಿದ್ದಾರೆ.</p>.ರಾಜೀನಾಮೆ ಕೊಟ್ಟರೆ ಸಾಲದು, ಧನಂಜಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಜಾರಂಗೆ.ಜಮ್ಮು & ಕಾಶ್ಮೀರ | ಕಳೆದ 2 ವರ್ಷಗಳಲ್ಲಿ 4.40 ಕೋಟಿ ಪ್ರವಾಸಿಗರ ಭೇಟಿ: ಒಮರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ</strong>: ಸರಪಂಚ್ ಸಂತೋಷ್ ದೇಶಮುಖ್ ಅವರ ಹತ್ಯೆಯನ್ನು ಖಂಡಿಸಿ ಶಿವಸೇನಾ ಕಾರ್ಯಕರ್ತರು ಇಂದು (ಮಂಗಳವಾರ) ಪ್ರತಿಭಟನೆ ನಡೆಸಿದ್ದು, ಅಪರಾಧದಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದೆ.</p><p>ಶಿವಸೇನಾ ಪಕ್ಷದ ಪುಣೆ ಘಟಕದ ಅಧ್ಯಕ್ಷ ಪ್ರಮೋದ್ ಭಂಗೈರ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಪ್ರತಿಭಟನೆಯ ವೇಳೆ ಕಾರ್ಯಕರ್ತರು ಸಚಿವ ಧನಂಜಯ ಮುಂಡೆ ಅವರ ಆಪ್ತ ವಾಲ್ಮಿಕ್ ಕರಾಡ್ ಅವರ ಪ್ರತಿಕೃತಿಯನ್ನು ದಹಿಸಿದರು. </p><p>ದೇಶಮುಖ್ ಅವರನ್ನು ಕ್ರೂರವಾಗಿ ಕೊಲ್ಲಲಾಗಿದ್ದು, ಅಪರಾಧಿಗಳಿಗೆ ಮರಣದಂಡನೆ ವಿಧಿಸಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಭಂಗೈರೆ ಹೇಳಿದರು.</p><p>ಠಾಣೆಯಲ್ಲಿಯೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಠಾಣೆ ಸಂಸದ ನರೇಶ್ ಮಾಸ್ಕೆ ಮತ್ತು ಮಾಜಿ ಮೇಯರ್ ಮೀನಾಕ್ಷಿ ಶಿಂದೆ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ದೇಶಮುಖ್ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಫಲಕಗಳನ್ನು ಹಿಡಿದು ಪ್ರತಿಭಟನಾಕಾರರು ಪ್ರತಿಭಟಿಸಿದರು.</p><p>ಬೀಡ್ನ ಮಸ್ಸಾಜೋಗ್ ಗ್ರಾಮದ ಸರಪಂಚ್ ಆಗಿದ್ದ ಸಂತೋಷ್ ದೇಶಮುಖ್ ಅವರನ್ನು ಕಳೆದ ವರ್ಷ ಡಿಸೆಂಬರ್ 6ರಂದು ಅಪಹರಿಸಿ, ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು.</p><p>ದೇಶಮುಖ್ ಕೊಲೆ ಪ್ರಕರಣದಲ್ಲಿ ಸಚಿವ ಧನಂಜಯ ಮುಂಡೆ ಅವರ ಆಪ್ತ ವಾಲ್ಮಿಕ್ ಕರಾಡ್ ಅವರನ್ನು ಪ್ರಮುಖ ಆರೋಪಿ ಎಂದು ಸಿಐಡಿ ಹೆಸರಿಸಿತ್ತು.</p><p>ತಮ್ಮ ಆಪ್ತನ ಹೆಸರು ಕೇಳಿ ಬಂದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ಅವರು ಇಂದು (ಮಂಗಳವಾರ) ರಾಜೀನಾಮೆ ಸಲ್ಲಿಸಿದ್ದಾರೆ.</p>.ರಾಜೀನಾಮೆ ಕೊಟ್ಟರೆ ಸಾಲದು, ಧನಂಜಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಜಾರಂಗೆ.ಜಮ್ಮು & ಕಾಶ್ಮೀರ | ಕಳೆದ 2 ವರ್ಷಗಳಲ್ಲಿ 4.40 ಕೋಟಿ ಪ್ರವಾಸಿಗರ ಭೇಟಿ: ಒಮರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>