<p><strong>ಪಾಲ್ಘರ್:</strong> ಮರಾಠಿ ವಿರೋಧಿ ಹೇಳಿಕೆ ನೀಡಿದ್ದಕ್ಕಾಗಿ ಆಟೊ ಚಾಲಕನನ್ನು ಉದ್ಧವ್ ಠಾಕ್ರೆ ನೇತೃತ್ವದ ಶಿವ ಸೇನಾ (ಯುಬಿಟಿ) ಕಾರ್ಯಕರ್ತರು ಶನಿವಾರ ಮನಸೋಇಚ್ಛೆ ಥಳಿಸಿದ್ದಾರೆ.</p> <p>ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಿರಾರ್ ರೈಲು ನಿಲ್ದಾಣ ಸಮೀಪ ಮಹಿಳೆಯರು ಸೇರಿದಂತೆ ಕಾರ್ಯಕರ್ತರ ಗುಂಪೊಂದು ಹಲ್ಲೆ ನಡೆಸಿದ್ದು, ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಒತ್ತಾಯಿಸಿತ್ತು. ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದು, ರಾಜ್ಯದಲ್ಲಿ ಭಾಷಾ ವಿಷಯದ ವಿವಾದಕ್ಕೆ ಕಾರಣವಾಗಿದೆ.</p> <p>‘ಆಟೊ ಚಾಲಕನನ್ನು ಥಳಿಸುತ್ತಿರುವ ವಿಡಿಯೊ ಲಭ್ಯವಾಗಿದೆ. ಆದರೆ, ಈ ವಿಚಾರವಾಗಿ ಯಾವುದೇ ಅಧಿಕೃತ ದೂರು ಬಂದಿಲ್ಲ. ಹೀಗಾಗಿ, ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p> <p>‘ಆಟೊ ಚಾಲಕನಿಗೆ ತಕ್ಕ ಪಾಠ ಕಲಿಸಲಾಗಿದೆ. ಮಹಾರಾಷ್ಟ್ರ ಹಾಗೂ ಮರಾಠಿ ಭಾಷೆಯನ್ನು ಅವಮಾನಿಸುವ ಯಾರಿಗಾದರೂ ನಿಜವಾದ ಶಿವಸೇನಾ ಶೈಲಿಯಲ್ಲಿ ಉತ್ತರ ನೀಡುತ್ತೇವೆ’ ಎಂದು ಶಿವಸೇನಾ (ಯುಬಿಟಿ) ವಿರಾರ್ ನಗರ ಘಟಕದ ಮುಖ್ಯಸ್ಥ ಉದಯ್ ಜಾಧವ್ ಎಚ್ಚರಿಕೆ ನೀಡಿದ್ದಾರೆ.</p> <p>ವಿರಾರ್ ಪ್ರದೇಶದಲ್ಲಿ ವಾಸವಾಗಿರುವ ಆಟೊ ಚಾಲಕ, ಮಹಾರಾಷ್ಟ್ರ, ಮರಾಠಿ ಭಾಷೆ ಹಾಗೂ ಮರಾಠಿ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾನೆಂದು ಆರೋಪಿಸಲಾಗಿದೆ. ಆತ ಮಾತನಾಡಿರುವ ವಿಡಿಯೊ ಹಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿತ್ತು.</p> <p>ಠಾಣೆ ಜಿಲ್ಲೆಯ ಮಿರಾ ರಸ್ತೆಯಲ್ಲಿ ಸಿಹಿ ತಿನಿಸುಗಳ ಅಂಗಡಿ ಮಾಲೀಕರನ್ನು ರಾಜ್ ಠಾಕ್ರೆ ನೇತೃತ್ವದ ಎಂಎನ್ಎಸ್ನ ಕಾರ್ಯಕರ್ತರು ಥಳಿಸಿದ 15 ದಿನಗಳ ನಂತರ ಈ ಘಟನೆ ನಡೆದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಲ್ಘರ್:</strong> ಮರಾಠಿ ವಿರೋಧಿ ಹೇಳಿಕೆ ನೀಡಿದ್ದಕ್ಕಾಗಿ ಆಟೊ ಚಾಲಕನನ್ನು ಉದ್ಧವ್ ಠಾಕ್ರೆ ನೇತೃತ್ವದ ಶಿವ ಸೇನಾ (ಯುಬಿಟಿ) ಕಾರ್ಯಕರ್ತರು ಶನಿವಾರ ಮನಸೋಇಚ್ಛೆ ಥಳಿಸಿದ್ದಾರೆ.</p> <p>ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಿರಾರ್ ರೈಲು ನಿಲ್ದಾಣ ಸಮೀಪ ಮಹಿಳೆಯರು ಸೇರಿದಂತೆ ಕಾರ್ಯಕರ್ತರ ಗುಂಪೊಂದು ಹಲ್ಲೆ ನಡೆಸಿದ್ದು, ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಒತ್ತಾಯಿಸಿತ್ತು. ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದು, ರಾಜ್ಯದಲ್ಲಿ ಭಾಷಾ ವಿಷಯದ ವಿವಾದಕ್ಕೆ ಕಾರಣವಾಗಿದೆ.</p> <p>‘ಆಟೊ ಚಾಲಕನನ್ನು ಥಳಿಸುತ್ತಿರುವ ವಿಡಿಯೊ ಲಭ್ಯವಾಗಿದೆ. ಆದರೆ, ಈ ವಿಚಾರವಾಗಿ ಯಾವುದೇ ಅಧಿಕೃತ ದೂರು ಬಂದಿಲ್ಲ. ಹೀಗಾಗಿ, ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p> <p>‘ಆಟೊ ಚಾಲಕನಿಗೆ ತಕ್ಕ ಪಾಠ ಕಲಿಸಲಾಗಿದೆ. ಮಹಾರಾಷ್ಟ್ರ ಹಾಗೂ ಮರಾಠಿ ಭಾಷೆಯನ್ನು ಅವಮಾನಿಸುವ ಯಾರಿಗಾದರೂ ನಿಜವಾದ ಶಿವಸೇನಾ ಶೈಲಿಯಲ್ಲಿ ಉತ್ತರ ನೀಡುತ್ತೇವೆ’ ಎಂದು ಶಿವಸೇನಾ (ಯುಬಿಟಿ) ವಿರಾರ್ ನಗರ ಘಟಕದ ಮುಖ್ಯಸ್ಥ ಉದಯ್ ಜಾಧವ್ ಎಚ್ಚರಿಕೆ ನೀಡಿದ್ದಾರೆ.</p> <p>ವಿರಾರ್ ಪ್ರದೇಶದಲ್ಲಿ ವಾಸವಾಗಿರುವ ಆಟೊ ಚಾಲಕ, ಮಹಾರಾಷ್ಟ್ರ, ಮರಾಠಿ ಭಾಷೆ ಹಾಗೂ ಮರಾಠಿ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾನೆಂದು ಆರೋಪಿಸಲಾಗಿದೆ. ಆತ ಮಾತನಾಡಿರುವ ವಿಡಿಯೊ ಹಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿತ್ತು.</p> <p>ಠಾಣೆ ಜಿಲ್ಲೆಯ ಮಿರಾ ರಸ್ತೆಯಲ್ಲಿ ಸಿಹಿ ತಿನಿಸುಗಳ ಅಂಗಡಿ ಮಾಲೀಕರನ್ನು ರಾಜ್ ಠಾಕ್ರೆ ನೇತೃತ್ವದ ಎಂಎನ್ಎಸ್ನ ಕಾರ್ಯಕರ್ತರು ಥಳಿಸಿದ 15 ದಿನಗಳ ನಂತರ ಈ ಘಟನೆ ನಡೆದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>