ಮುಂಬೈ: ಮುಸ್ಲಿಮರಿಗೆ ಶಿಕ್ಷಣದಲ್ಲಿ ಶೇ.5 ಮೀಸಲಾತಿ ನೀಡುವ ತೀರ್ಮಾನಕ್ಕೆ ಶಿವಸೇನೆ ಬೆಂಬಲ ನೀಡಿದೆ. ಶಿವಸೇನೆಯ ಈ ನಿರ್ಧಾರವನ್ನು ಅಖಿಲ ಭಾರತ ಮಜ್ಲಿಸ್-ಇ-ಇಥೆಹಾದುಲ್ ಮುಸಲ್ಮಿನ್ (ಎಐಎಂಐಎಂ) ಧನಾತ್ಮಕ ನಡೆ ಎಂದು ಶ್ಲಾಘಿಸಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ, ಮರಾಠ ಸಮುದಾಯದವರ ಜತೆಗೆ ಧಂಗ್ರಾ, ಮುಸ್ಲಿಂ ಮತ್ತು ಇತರ ಸಮುದಾಯದವರಿಗೂ ಮೀಸಲಾತಿ ನೀಡಬೇಕೆಂದು ಹೇಳಿದ್ದಾರೆ.ಅದೇ ವೇಳೆ ಮುಸ್ಲಿಮರಿಗೆ ಮೀಸಲಾತಿ ನಿರಾಕರಿಸುವ ಮೂಲಕ ಫಡಣವಿಸ್ ಸರ್ಕಾರ ಬಾಂಬೆ ಹೈಕೋರ್ಟ್ ತೀರ್ಮಾನವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದ್ದಾರೆ.