<p><strong>ಮುಂಬೈ:</strong> ಪುಣೆ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಪಕ್ಷದ ಅಭ್ಯರ್ಥಿಯೊಬ್ಬರು ತಮ್ಮ ಪ್ರತಿಸ್ಪರ್ಧಿಯ ‘ಬಿ’ ಫಾರಂ ಅನ್ನು ಹರಿದು ನುಂಗಿದ್ದಾರೆ ಎಂದು ವರದಿಯಾಗಿದೆ.</p><p>ಜನವರಿ 15ರಂದು ಪುಣೆ ಪಾಲಿಕೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪುಣೆ ನಗರದ ವಾರ್ಡ್ ಸಂಖ್ಯೆ 34ರಲ್ಲಿ ಇಬ್ಬರು ಅಭ್ಯರ್ಥಿಗಳಿಗೆ ಶಿವಸೇನಾ ‘ಬಿ’ ಫಾರಂ ನೀಡಿತ್ತು. ಇದು ಶಿವಸೇನಾ ಅಭ್ಯರ್ಥಿಗಳಾದ ಉದ್ಧವ್ ಕಾಂಬ್ಳೆ ಮತ್ತು ಮಚ್ಚಿಂದ್ರ ಧಾವಳೆ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿತ್ತು. </p><p>ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ ಕಾಂಬ್ಳೆ ಅವರು ಧಾವಳೆಯ ‘ಬಿ’ ಫಾರಂ ಅನ್ನು ಕಸಿದುಕೊಂಡು, ಅದನ್ನು ಹರಿದು ನುಂಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಚುನಾವಣಾ ಪ್ರಕ್ರಿಯೆಯಲ್ಲಿ ಸರ್ಕಾರಿ ಅಧಿಕಾರಿಯೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಕಾಂಬ್ಳೆ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸುತ್ತಿದ್ದೇವೆ’ ಎಂದೂ ಅವರು ವಿವರಿಸಿದ್ದಾರೆ. </p><p>‘ಎ’ ಮತ್ತು ‘ಬಿ’ ಫಾರಂಗಳನ್ನು ರಾಜಕೀಯ ಪಕ್ಷವು ಚುನಾವಣೆಯಲ್ಲಿ ನಿರ್ದಿಷ್ಟ ಅಭ್ಯರ್ಥಿಯನ್ನು ತನ್ನ ಅಭ್ಯರ್ಥಿಯಾಗಿ ಘೋಷಿಸುವ ಅಗತ್ಯ ದಾಖಲೆಗಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಪುಣೆ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಪಕ್ಷದ ಅಭ್ಯರ್ಥಿಯೊಬ್ಬರು ತಮ್ಮ ಪ್ರತಿಸ್ಪರ್ಧಿಯ ‘ಬಿ’ ಫಾರಂ ಅನ್ನು ಹರಿದು ನುಂಗಿದ್ದಾರೆ ಎಂದು ವರದಿಯಾಗಿದೆ.</p><p>ಜನವರಿ 15ರಂದು ಪುಣೆ ಪಾಲಿಕೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪುಣೆ ನಗರದ ವಾರ್ಡ್ ಸಂಖ್ಯೆ 34ರಲ್ಲಿ ಇಬ್ಬರು ಅಭ್ಯರ್ಥಿಗಳಿಗೆ ಶಿವಸೇನಾ ‘ಬಿ’ ಫಾರಂ ನೀಡಿತ್ತು. ಇದು ಶಿವಸೇನಾ ಅಭ್ಯರ್ಥಿಗಳಾದ ಉದ್ಧವ್ ಕಾಂಬ್ಳೆ ಮತ್ತು ಮಚ್ಚಿಂದ್ರ ಧಾವಳೆ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿತ್ತು. </p><p>ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ ಕಾಂಬ್ಳೆ ಅವರು ಧಾವಳೆಯ ‘ಬಿ’ ಫಾರಂ ಅನ್ನು ಕಸಿದುಕೊಂಡು, ಅದನ್ನು ಹರಿದು ನುಂಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಚುನಾವಣಾ ಪ್ರಕ್ರಿಯೆಯಲ್ಲಿ ಸರ್ಕಾರಿ ಅಧಿಕಾರಿಯೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಕಾಂಬ್ಳೆ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸುತ್ತಿದ್ದೇವೆ’ ಎಂದೂ ಅವರು ವಿವರಿಸಿದ್ದಾರೆ. </p><p>‘ಎ’ ಮತ್ತು ‘ಬಿ’ ಫಾರಂಗಳನ್ನು ರಾಜಕೀಯ ಪಕ್ಷವು ಚುನಾವಣೆಯಲ್ಲಿ ನಿರ್ದಿಷ್ಟ ಅಭ್ಯರ್ಥಿಯನ್ನು ತನ್ನ ಅಭ್ಯರ್ಥಿಯಾಗಿ ಘೋಷಿಸುವ ಅಗತ್ಯ ದಾಖಲೆಗಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>