<p><strong>ಠಾಣೆ</strong>: ಬಿಜೆಪಿ ಪದಾಧಿಕಾರಿ ಮತ್ತು ಅವರ ಬೆಂಬಲಿಗರು ಹಲ್ಲೆ ನಡೆಸಿದ್ದರಿಂದ ಶಿವಸೇನಾದ ಪಾಲಿಕೆ ಸದಸ್ಯರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ನಡೆದಿದೆ.</p>.<p>ಪಾಲಿಕೆ ಸದಸ್ಯ ಹೇಮಂತ್ ಛತುರೆ ಅವರು ಬದ್ಲಾಪುರದ ಸೋನಿವಲಿ ಪ್ರದೇಶದಲ್ಲಿನ ಮಾಘ ಗಣಪತಿ ಪೆಂಡಾಲ್ಗೆ ಭೇಟಿ ನೀಡಿದ್ದ ವೇಳೆ ಅವರ ಮೇಲೆ ಹಲ್ಲೆ ನಡೆದಿರುವುದಾಗಿ ಆರೋಪಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p>.<p>ಬಿಜೆಪಿ ಪದಾಧಿಕಾರಿ ತೇಜಸ್ ಅಲಿಯಾಸ್ ಬಂಟಿ ಮಹಸ್ಕರ್ ಮತ್ತು ಆತನ 20ರಿಂದ 25 ಬೆಂಬಲಿಗರು ವಾಗ್ವಾದ ನಡೆಸಿ ಹಲ್ಲೆ ಮಾಡಿದ್ದಾರೆ ಎಂದು ಹೇಮಂತ್ ಆಪ್ತರು ಆರೋಪಿಸಿದ್ದಾರೆ.</p>.<p>ಹೇಮಂತ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<p>ಘಟನೆಯ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳು ಸಾಮಾಜಿ ಜಾಲತಾಣದಲ್ಲಿ ಹರಿದಾಡುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಠಾಣೆ</strong>: ಬಿಜೆಪಿ ಪದಾಧಿಕಾರಿ ಮತ್ತು ಅವರ ಬೆಂಬಲಿಗರು ಹಲ್ಲೆ ನಡೆಸಿದ್ದರಿಂದ ಶಿವಸೇನಾದ ಪಾಲಿಕೆ ಸದಸ್ಯರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ನಡೆದಿದೆ.</p>.<p>ಪಾಲಿಕೆ ಸದಸ್ಯ ಹೇಮಂತ್ ಛತುರೆ ಅವರು ಬದ್ಲಾಪುರದ ಸೋನಿವಲಿ ಪ್ರದೇಶದಲ್ಲಿನ ಮಾಘ ಗಣಪತಿ ಪೆಂಡಾಲ್ಗೆ ಭೇಟಿ ನೀಡಿದ್ದ ವೇಳೆ ಅವರ ಮೇಲೆ ಹಲ್ಲೆ ನಡೆದಿರುವುದಾಗಿ ಆರೋಪಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p>.<p>ಬಿಜೆಪಿ ಪದಾಧಿಕಾರಿ ತೇಜಸ್ ಅಲಿಯಾಸ್ ಬಂಟಿ ಮಹಸ್ಕರ್ ಮತ್ತು ಆತನ 20ರಿಂದ 25 ಬೆಂಬಲಿಗರು ವಾಗ್ವಾದ ನಡೆಸಿ ಹಲ್ಲೆ ಮಾಡಿದ್ದಾರೆ ಎಂದು ಹೇಮಂತ್ ಆಪ್ತರು ಆರೋಪಿಸಿದ್ದಾರೆ.</p>.<p>ಹೇಮಂತ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<p>ಘಟನೆಯ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳು ಸಾಮಾಜಿ ಜಾಲತಾಣದಲ್ಲಿ ಹರಿದಾಡುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>