ಮುಂಬೈ: ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುತ್ತಿರುವ ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಗುರುವಾರ 'ಮಹಾ ವಿಕಾಸ ಆಘಾಡಿ'ಯಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳ (ಸಿಎಂಪಿ) ಪಟ್ಟಿಯನ್ನು ಬಿಡುಗಡೆ ಮಾಡಿವೆ.
ಈ ಮೂರು ಪಕ್ಷಗಳು ಒಂದು ವಾರ ಮಾತುಕತೆ ನಡೆಸಿ ಈ ಸಾಮಾನ್ಯ ಕನಿಷ್ಠ ಕಾರ್ಯಕ್ರಮ (ಸಿಎಂಪಿ) ರೂಪಿಸಿದ್ದು, ಜಾತ್ಯಾತೀತವಾದ ಎಲ್ಲವನ್ನೂ ಒಳಗೊಂಡ ಕಾರ್ಯಕ್ರಮಗಳನ್ನು ಇದು ಒಳಗೊಂಡಿದೆ. ಯಾವ ಯಾವ ಕ್ಷೇತ್ರಕ್ಕೆ ಏನೇನು ಯೋಜನೆಗಳು ಎಂಬ ವಿವರ ಈ ಕೆಳಗಿದೆ.
ಕೃಷಿ
* ಪ್ರವಾಹದಿಂದ ಸಂತ್ರಸ್ತರಾಗಿರುವ ರೈತರಿಗೆ ತಕ್ಷಣ ನೆರವು
* ರೈತರ ಸಾಲ ಮನ್ನ ತಕ್ಷಣ ಜಾರಿ
* ಬೆಳೆ ಕಳೆದುಕೊಂಡ ರೈತರಿಗೆ ತಕ್ಷಣವೇ ಪರಿಹಾರ ಸಿಗುವಂತಾಗಲು ಬೆಳೆ ವಿಮೆ ಯೋಜನೆ ಪರಿಷ್ಕರಣೆ
* ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗಲು ಸೂಕ್ತ ಕ್ರಮ ಕೈಗೊಳ್ಳುವುದು
* ಬರಗಾಲ ಪೀಡಿತ ಪ್ರದೇಶಗಳಿಗೆ ಸೂಕ್ತ ನೀರಾವರಿ ಒದಗಿಸಲು ಕ್ರಮ
Common Minimum Program of 'Maha Vikas Aghadi' (NCP-Congress-Shiv Sena alliance): Immediate assistance & loan waiver for farmers. Crop Insurance Scheme to be revised to ensure immediate compensation to the farmers who have lost their crops. https://t.co/wahSgBmsXw
— ANI (@ANI) November 28, 2019
ನಿರುದ್ಯೋಗ
*ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ತಕ್ಷಣ ಕ್ರಮ
* ಶಿಕ್ಷಣ ಪಡೆದ ನಿರುದ್ಯೋಗಿಗಳಿಗೆ ಶಿಷ್ಯವೇತನ ನೀಡಲಾಗುವುದು
* ಸ್ಥಳೀಯ ಯುವಕರಿಗೆ ಉದ್ಯೋಗದಲ್ಲಿ ಶೇ 80ರಷ್ಟು ಮೀಸಲಾತಿ ಕಲ್ಪಿಸುವ ಕಾನೂನನ್ನು ಜಾರಿಗೆ ತರಲಾಗುವುದು
ಮಹಿಳೆ
* ಮಹಿಳಾ ಸುರಕ್ಷತೆಗೆ ಹೆಚ್ಚಿನ ಆದ್ಯತೆ
* ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ
* ಜಿಲ್ಲಾ ಕೇಂದ್ರಗಳು ಹಾಗೂ ನಗರಗಳಲ್ಲಿ ಔದ್ಯೋಗಿಕ ಮಹಿಳೆಯರಿಗೆ ಹಾಸ್ಟೆಲ್ ನಿರ್ಮಾಣ
* ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವಧನ ಏರಿಕೆ ಮತ್ತು ಇತರೆ ಸೇವಾ ಸೌಲಭ್ಯಗಳನ್ನು ನೀಡಲಾಗುವುದು
* ಮಹಿಳಾ ಸ್ವಸಹಾಯ ಗುಂಪುಗಳ ಬಲವರ್ಧನೆ
ಶಿಕ್ಷಣ
* ಶಿಕ್ಷಣದ ಗುಣಮಟ್ಟ ಉತ್ತಮ ಪಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು
* ಕೃಷಿ ಕಾರ್ಮಿಕರ ಮಕ್ಕಳು ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಶೂನ್ಯ ಬಡ್ಡಿದರದಲ್ಲಿ ಶಿಕ್ಷಣ ಸಾಲ ಒದಗಿಸಲಾಗುವುದು
ನಗರಾಭಿವೃದ್ಧಿ
* ಮುಖ್ಯಮಂತ್ರಿ ಗ್ರಾಮ ಸಡಕ್ ಯೋಜನೆಯ ರೀತಿಯಲ್ಲಿಯೇ ನಗರ ಪ್ರದೇಶದ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ರಸ್ತೆ ಅಭಿವೃದ್ಧಿಗಾಗಿಯೇ ನಗರ ಪಂಚಾಯಿತಿ, ಪುರಸಭೆ, ನಗರ ಪಾಲಿಕೆಗಳಲ್ಲಿ ಪ್ರತ್ಯೇಕ ಆಯವ್ಯಯ ಇಡಲಾಗುವುದು.
* ಕೊಳಗೇರಿ ಪುನರ್ವಸತಿ ಕಾರ್ಯಕ್ರಮದ ಅಡಿ ನೀಡಲಾಗುತ್ತಿದ್ದ 300 ಚದರ ಅಡಿ ಬದಲು 500 ಚದರ ಅಡಿ ಪ್ರದೇಶವನ್ನು ನೀಡಲು ನಿರ್ಧರಿಸಲಾಗಿದೆ.
ಆರೋಗ್ಯ
* ತಾಲ್ಲೂಕು ಮಟ್ಟದಲ್ಲಿ ₹1ಗೆ ಚಿಕಿತ್ಸೆ ನೀಡುವಂತಹ ಕ್ಲಿನಿಕ್ಗಳ ನಿರ್ಮಾಣ
* ಎಲ್ಲಾ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳ ಸ್ಥಾಪನೆ
* ರಾಜ್ಯದ ಎಲ್ಲಾ ನಾಗರಿಕರಿಗೆ ಆರೋಗ್ಯ ವಿಮೆ ಒದಗಿಸಲಾಗುವುದು
ಕೈಗಾರಿಕೆ
* ಹೊಸ ಕೈಗಾರಿಕೆ ಮತ್ತು ಹೂಡಿಕೆದಾರಿಗೆ ಅನುಕೂಲವಾಗುವಂತೆ ಅನುಮತಿ ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸುವುದು ಮತ್ತು ಸಾಧ್ಯವಾಗುಷ್ಟು ರಿಯಾಯಿತಿ ಒದಗಿಸಲಾಗುವುದು
* ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಹೂಡಿಕೆದಾರರನ್ನು ಸೆಳೆಯುವುದಕ್ಕಾಗಿ ನಿಯಮಗಳ ಪರಿಷ್ಕರಣೆ ಮಾಡಲಾಗುವುದು
ಸಾಮಾಜಿಕ ನ್ಯಾಯ
* ಪರಿಶಿಷ್ಟ ಜಾತಿ, ಪಂಗಡ, ಧಾಂಗರ್ ಮತ್ತು ಇತರೆ ಹಿಂದುಳಿದ ವರ್ಗಗಳ ಬಾಕಿ ಉಳಿದ ಪ್ರಕರಣಗಳ ಇತ್ಯರ್ಥ
* ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರ ಉನ್ನತಿಗಾಗಿ ಅನೇಕ ಯೋಜನೆಗಳನ್ನ ಜಾರಿಗೆ ತರಲಾಗುವುದು
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.