<p><strong>ಡೆಹ್ರಾಡೂನ್</strong>: ಚಳಿಗಾಲದಲ್ಲಿ ಮುಚ್ಚಿದ್ದ ಕೇದಾರನಾಥ ದೇಗುಲದ ಬಾಗಿಲು ತೆರೆಯಲಿದ್ದು, ಮೇ 2ರಿಂದ ಭಕ್ತರಿಗೆ ದರ್ಶನ ಸಿಗಲಿದೆ.</p><p>ದೇಗುಲದ ಬಾಗಿಲು ತೆಗೆಯುವುದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳು ಒಂದೆಡೆ ಬಿರುಸಿನಿಂದ ನಡೆದಿದ್ದರೆ, ಮತ್ತೊಂದೆಡೆ ಉಖಿ ಮಠದಲ್ಲಿದ್ದ ಶಿವನ ಮೂರ್ತಿಗೆ ಸೋಮವಾರ ವಿಶೇಷ ಪೂಜೆ ಸಲ್ಲಿಸಿ, ಹೂವಿನ ಪಲ್ಲಕ್ಕಿಯಲ್ಲಿ ಬೀಳ್ಕೊಡಲಾಯಿತು.</p><p>ಚಳಿಗಾಲದಲ್ಲಿ ಉಖಿಮಠದ ಓಂಕಾರೇಶ್ವರ ದೇಗುಲದಲ್ಲಿ ಬಾಬಾ ಕೇದಾರನಾಥನನ್ನು (ಶಿವ) ಪೂಜಿಸಲಾಗುತ್ತದೆ. ಬಾಗಿಲನ್ನು ವಿಧ್ಯುಕ್ತವಾಗಿ ತೆರೆಯುವ ಮುನ್ನ ಕೇದಾರನಾಥ ದೇಗುಲಕ್ಕೆ ಮೂರ್ತಿಯನ್ನು ವಾಪಸ್ ಕೊಂಡೊಯ್ಯಲಾಗುತ್ತದೆ. </p><p>ಸೇನೆಯ ವಾದ್ಯ ತಂಡದ ಭಕ್ತಿ ಗೀತೆಗಳ ಮೊಳಗಿಸುವಿಕೆ ಯೊಂದಿಗೆ, ಬದರಿನಾಥ–ಕೇದಾರನಾಥ ದೇವಾಲಯ ಸಮಿತಿಯ (ಬಿಕೆಟಿಸಿ) ಅರ್ಚಕರು, ವೇದಪತಿಗಳು ಹಾಗೂ ಅಪಾರ ಸಂಖ್ಯೆಯ ಭಕ್ತರು ತಮ್ಮ ಹೆಗಲ ಮೇಲೆ ಪಂಚಮುಖಿ ಡೋಲಿಯಲ್ಲಿ (ಹೂವಿನಿಂದ ಅಲಂಕೃತವಾಗಿದ್ದ ಪಲ್ಲಕ್ಕಿ) ಶಿವನ ಮೂರ್ತಿಯನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಿದರು.</p><p>ರಾತ್ರಿ ವೇಳೆ ಗುಪ್ತಕಾಶಿ, ಫಾಟಾ ಹಾಗೂ ಗೌರಿಕುಂಡ್ನಲ್ಲಿ ವಾಸ್ತವ್ಯ ಹೂಡಲಿರುವ ಮೆರವಣಿಗೆಯು ಮೇ 1ರ ತಡರಾತ್ರಿ ಕೇದಾರನಾಥವನ್ನು ತಲುಪಲಿದೆ. ಮೇ 2ರ ಬೆಳಿಗ್ಗೆ 7 ಗಂಟೆಗೆ ದೇಗುಲದ ದ್ವಾರಗಳನ್ನು ತೆರೆಯಲಾಗುವುದು ಎಂದು ಬಿಕೆಟಿಸಿ ಮಾಧ್ಯಮ ಉಸ್ತುವಾರಿ ಹರೀಶ್ ಗೌರ್ ತಿಳಿಸಿದ್ದಾರೆ.</p><p>ಕಳೆದ ವರ್ಷ 48 ಲಕ್ಷ ಯಾತ್ರಿಕರು ಚಾರ್ ಧಾಮ್ ಯಾತ್ರೆಯಲ್ಲಿ ಭಾಗಿಯಾಗಿದ್ದರೆ, ಪ್ರಸ್ತುತ ವರ್ಷ ಈ ಸಂಖ್ಯೆ 60 ಲಕ್ಷ ತಲುಪುವ ನಿರೀಕ್ಷೆಯಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್</strong>: ಚಳಿಗಾಲದಲ್ಲಿ ಮುಚ್ಚಿದ್ದ ಕೇದಾರನಾಥ ದೇಗುಲದ ಬಾಗಿಲು ತೆರೆಯಲಿದ್ದು, ಮೇ 2ರಿಂದ ಭಕ್ತರಿಗೆ ದರ್ಶನ ಸಿಗಲಿದೆ.</p><p>ದೇಗುಲದ ಬಾಗಿಲು ತೆಗೆಯುವುದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳು ಒಂದೆಡೆ ಬಿರುಸಿನಿಂದ ನಡೆದಿದ್ದರೆ, ಮತ್ತೊಂದೆಡೆ ಉಖಿ ಮಠದಲ್ಲಿದ್ದ ಶಿವನ ಮೂರ್ತಿಗೆ ಸೋಮವಾರ ವಿಶೇಷ ಪೂಜೆ ಸಲ್ಲಿಸಿ, ಹೂವಿನ ಪಲ್ಲಕ್ಕಿಯಲ್ಲಿ ಬೀಳ್ಕೊಡಲಾಯಿತು.</p><p>ಚಳಿಗಾಲದಲ್ಲಿ ಉಖಿಮಠದ ಓಂಕಾರೇಶ್ವರ ದೇಗುಲದಲ್ಲಿ ಬಾಬಾ ಕೇದಾರನಾಥನನ್ನು (ಶಿವ) ಪೂಜಿಸಲಾಗುತ್ತದೆ. ಬಾಗಿಲನ್ನು ವಿಧ್ಯುಕ್ತವಾಗಿ ತೆರೆಯುವ ಮುನ್ನ ಕೇದಾರನಾಥ ದೇಗುಲಕ್ಕೆ ಮೂರ್ತಿಯನ್ನು ವಾಪಸ್ ಕೊಂಡೊಯ್ಯಲಾಗುತ್ತದೆ. </p><p>ಸೇನೆಯ ವಾದ್ಯ ತಂಡದ ಭಕ್ತಿ ಗೀತೆಗಳ ಮೊಳಗಿಸುವಿಕೆ ಯೊಂದಿಗೆ, ಬದರಿನಾಥ–ಕೇದಾರನಾಥ ದೇವಾಲಯ ಸಮಿತಿಯ (ಬಿಕೆಟಿಸಿ) ಅರ್ಚಕರು, ವೇದಪತಿಗಳು ಹಾಗೂ ಅಪಾರ ಸಂಖ್ಯೆಯ ಭಕ್ತರು ತಮ್ಮ ಹೆಗಲ ಮೇಲೆ ಪಂಚಮುಖಿ ಡೋಲಿಯಲ್ಲಿ (ಹೂವಿನಿಂದ ಅಲಂಕೃತವಾಗಿದ್ದ ಪಲ್ಲಕ್ಕಿ) ಶಿವನ ಮೂರ್ತಿಯನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಿದರು.</p><p>ರಾತ್ರಿ ವೇಳೆ ಗುಪ್ತಕಾಶಿ, ಫಾಟಾ ಹಾಗೂ ಗೌರಿಕುಂಡ್ನಲ್ಲಿ ವಾಸ್ತವ್ಯ ಹೂಡಲಿರುವ ಮೆರವಣಿಗೆಯು ಮೇ 1ರ ತಡರಾತ್ರಿ ಕೇದಾರನಾಥವನ್ನು ತಲುಪಲಿದೆ. ಮೇ 2ರ ಬೆಳಿಗ್ಗೆ 7 ಗಂಟೆಗೆ ದೇಗುಲದ ದ್ವಾರಗಳನ್ನು ತೆರೆಯಲಾಗುವುದು ಎಂದು ಬಿಕೆಟಿಸಿ ಮಾಧ್ಯಮ ಉಸ್ತುವಾರಿ ಹರೀಶ್ ಗೌರ್ ತಿಳಿಸಿದ್ದಾರೆ.</p><p>ಕಳೆದ ವರ್ಷ 48 ಲಕ್ಷ ಯಾತ್ರಿಕರು ಚಾರ್ ಧಾಮ್ ಯಾತ್ರೆಯಲ್ಲಿ ಭಾಗಿಯಾಗಿದ್ದರೆ, ಪ್ರಸ್ತುತ ವರ್ಷ ಈ ಸಂಖ್ಯೆ 60 ಲಕ್ಷ ತಲುಪುವ ನಿರೀಕ್ಷೆಯಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>