ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಪಾಲ ಕೊಶ್ಯಾರಿಯವರನ್ನು ರಾಜ್ಯದಿಂದ ಹೊರಗೆ ಕಳಿಸಿ: ಶಿವಸೇನೆ ಶಾಸಕ

Last Updated 21 ನವೆಂಬರ್ 2022, 10:51 IST
ಅಕ್ಷರ ಗಾತ್ರ

ಮುಂಬೈ: ಛತ್ರಪತಿ ಶಿವಾಜಿ ಮಹಾರಾಜರು ‘ಹಳೇ ಕಾಲದ ಐಕಾನ್‌‘ ಎಂದು ಹೇಳಿದ ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ವಿರುದ್ಧ ಆಡಳಿತರೂಢ ಬಾಳಾಸಾಹೇಬಾಂಚಿ ಶಿವಸೇನೆ ಆಕ್ರೋಶ ವ್ಯಕ್ತಪಡಿಸಿದೆ.

‘ರಾಜ್ಯಪಾಲ ಕೊಶ್ಯಾರಿ ಅವರನ್ನು ರಾಜ್ಯದ ಹೊರಗೆ ಕಳುಹಿಸಿ‘ ಎಂದು ಬಾಳಾಸಾಹೇಬಾಂಚಿ ಶಿವಸೇನಾ (ಏಕನಾಥ ಶಿಂದೆ ಬಣ)ದ ಬುಲ್ದಾನ ಕ್ಷೇತ್ರದ ಶಾಸಕ ಸಂಜಯ್‌ ಗಾಯಕ್ವಾಡ್‌ ಹೇಳಿದ್ದಾರೆ.

’ಛತ್ರಪತಿ ಶಿವಾಜಿ ಮಹಾರಾಜರ ಚಿಂತನೆಗಳು ಯಾವತ್ತೂ ಹಳತಾಗುವುದಿಲ್ಲ ಎಂದು ರಾಜ್ಯಪಾಲರು ಅರ್ಥ ಮಾಡಿಕೊಳ್ಳಬೇಕು. ಅವರನ್ನು ಪ್ರಪಂಚದ ಯಾವುದೇ ಗಣ್ಯ ವ್ಯಕ್ತಿಗಳಿಗೆ ಹೋಲಿಕೆ ಮಾಡಲಾಗದು. ರಾಜ್ಯದ ಇತಿಹಾಸ ಹಾಗೂ ಅದು ಹೇಗೆ ಕೆಲಸ ಮಾಡುತ್ತದೆ ಎಂದು ತಿಳಿಯದ ರಾಜ್ಯಪಾಲರನ್ನು ರಾಜ್ಯದಿಂದ ಬೇರೆ ಎಲ್ಲಾದರೂ ಹೊರಗೆ ಕಳುಹಿಸಬೇಕು ಎಂದು ನಾನು ಬಿಜೆಪಿ ನಾಯಕರನ್ನು ಹಾಗೂ ಕೇಂದ್ರ ಸರ್ಕಾರವನ್ನು ಕೋರುತ್ತೇನೆ‘ ಎಂದು ಗಾಯಕ್ವಾಡ್‌ ಹೇಳಿದ್ದಾರೆ.

ಶನಿವಾರ ಔರಂಗಾಬಾದ್‌ನಲ್ಲಿ ನಡೆದ, ಎನ್‌ಸಿಪಿ ನಾಯಕ ಶರದ್‌ ಪವಾರ್‌ ಹಾಗೂ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಗೌರವ ಡಿ.ಲಿಟ್‌ ಪದವಿ ಪ್ರದಾನ ಸಮಾರಂಭದಲ್ಲಿ ರಾಜ್ಯಪಾಲರು ಈ ರೀತಿ ಹೇಳಿದ್ದರು.

ಅವರ ಈ ಹೇಳಿಕೆ ಸಾಕಷ್ಟು ವಿವಾದಗಳಿಗೆ ಕಾರಣವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT