’ಛತ್ರಪತಿ ಶಿವಾಜಿ ಮಹಾರಾಜರ ಚಿಂತನೆಗಳು ಯಾವತ್ತೂ ಹಳತಾಗುವುದಿಲ್ಲ ಎಂದು ರಾಜ್ಯಪಾಲರು ಅರ್ಥ ಮಾಡಿಕೊಳ್ಳಬೇಕು. ಅವರನ್ನು ಪ್ರಪಂಚದ ಯಾವುದೇ ಗಣ್ಯ ವ್ಯಕ್ತಿಗಳಿಗೆ ಹೋಲಿಕೆ ಮಾಡಲಾಗದು. ರಾಜ್ಯದ ಇತಿಹಾಸ ಹಾಗೂ ಅದು ಹೇಗೆ ಕೆಲಸ ಮಾಡುತ್ತದೆ ಎಂದು ತಿಳಿಯದ ರಾಜ್ಯಪಾಲರನ್ನು ರಾಜ್ಯದಿಂದ ಬೇರೆ ಎಲ್ಲಾದರೂ ಹೊರಗೆ ಕಳುಹಿಸಬೇಕು ಎಂದು ನಾನು ಬಿಜೆಪಿ ನಾಯಕರನ್ನು ಹಾಗೂ ಕೇಂದ್ರ ಸರ್ಕಾರವನ್ನು ಕೋರುತ್ತೇನೆ‘ ಎಂದು ಗಾಯಕ್ವಾಡ್ ಹೇಳಿದ್ದಾರೆ.