<p class="title"><strong>ನವದೆಹಲಿ </strong>(ಪಿಟಿಐ): ಛತ್ರಪತಿ ಶಿವಾಜಿ ಅವರ ಧೈರ್ಯ ಮತ್ತು ಉತ್ತಮ ಆಡಳಿತವು ನಮಗೆ ಸ್ಫೂರ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹೇಳಿದ್ದಾರೆ. </p>.<p class="title">ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ನಮನ ಸಲ್ಲಿಸಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಜೊತೆಗೆ ಹಲವು ವರ್ಷಗಳಿಂದ ಶಿವಾಜಿ ಅವರಿಗೆ ನಮನ ಸಲ್ಲಿಸಿದ ತಮ್ಮ ವಿಡಿಯೊವನ್ನು ಹಂಚಿಕೊಂಡಿದ್ದಾರೆ.</p>.<p class="bodytext">ವೈವಿಧ್ಯತೆ ಹೆಚ್ಚಿಸಿದೆ: ದಕ್ಷಿಣ ಆಫ್ರಿಕಾದಿಂದ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಮತ್ತೆ 12 ಚೀತಾಗಳನ್ನು ತಂದು ಬಿಟ್ಟಿರುವುದು ಭಾರತ ವನ್ಯಜೀವಿ ವೈವಿಧ್ಯತೆಯನ್ನು ಹೆಚ್ಚಿಸಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ.</p>.<p>ಪರಿಸರ ಸಚಿವ ಭೂಪೇಂದ್ರ ಯಾದವ್ ಅವರ ಚೀತಾಗಳ ಆಗಮನದ ಕುರಿತ ಟ್ವೀಟ್ ಅನ್ನು ಟ್ಯಾಗ್ ಮಾಡಿರುವ ಪ್ರಧಾನಿ ಮೋದಿ, ‘ಈ ಬೆಳವಣಿಗೆಯಿಂದ ಭಾರತದ ವನ್ಯಜೀವಿ ವೈವಿಧ್ಯತೆಗೆ ಉತ್ತೇಜನ ದೊರಕಿದಂತಾಗಿದೆ’ ಎಂದು ಹೇಳಿದ್ದಾರೆ.</p>.<p> ಲಡಾಕ್ ಜನರ ಜೀವನವನ್ನು ಸುಲಭವಾಗಿಸುವ ಯಾವುದೇ ಅವಕಾಶವನ್ನೂ ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ.</p>.<p> 4.1 ಕಿ.ಮೀ ಉದ್ದದ ಶಿಂಕುನ್ ಲಾ ಸುರಂಗ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ₹1,681.51 ಕೋಟಿ ಅನುದಾನ ನೀಡಿದೆ ಎಂದು ಲಡಾಕ್ ಸಂಸದ ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್ ಅವರು ಟ್ವೀಟ್ ಮಾಡಿದ್ದರು. ಇದನ್ನು ಟ್ಯಾಗ್ ಮಾಡಿರುವ ಪ್ರಧಾನಿ ಮೋದಿ, ಲಡಾಕ್ ಜನರ ಬದುಕನ್ನು ಸರಳವಾಗಿಸುವ ಯಾವುದೇ ಅವಕಾಶವನ್ನೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.</p>.<p>ಭಾರತ–ಯುಎಇ ಬಾಂಧವ್ಯ ಗಟ್ಟಿ:</p>.<p>ಭಾರತ–ಯುಎಇ ನಡುವಿನ ಸಮಗ್ರ ‘ಆರ್ಥಿಕ ಪಾಲುದಾರಿಕೆ ಒಪ್ಪಂದ’ವು (ಸಿಇಪಿಎ) ಭಾರತದ ಉದ್ಯಮಿಗಳು ಮತ್ತು ಗಲ್ಫ್ ರಾಷ್ಟ್ರದೊಂದಿಗಿನ ಬಾಂಧವ್ಯಕ್ಕೆ ಮತ್ತಷ್ಟು ಬಲ ತುಂಬಲಿದೆ ಎಂದು ಮೋದಿ ಹೇಳಿದ್ದಾರೆ. </p>.<p>ಸಿಇಪಿಎ ಒಪ್ಪಂದಕ್ಕೆ ಉಭಯ ದೇಶಗಳು ಕಳೆದ ವರ್ಷ ಫೆ.18ರಂದು ಸಹಿ ಹಾಕಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ </strong>(ಪಿಟಿಐ): ಛತ್ರಪತಿ ಶಿವಾಜಿ ಅವರ ಧೈರ್ಯ ಮತ್ತು ಉತ್ತಮ ಆಡಳಿತವು ನಮಗೆ ಸ್ಫೂರ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹೇಳಿದ್ದಾರೆ. </p>.<p class="title">ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ನಮನ ಸಲ್ಲಿಸಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಜೊತೆಗೆ ಹಲವು ವರ್ಷಗಳಿಂದ ಶಿವಾಜಿ ಅವರಿಗೆ ನಮನ ಸಲ್ಲಿಸಿದ ತಮ್ಮ ವಿಡಿಯೊವನ್ನು ಹಂಚಿಕೊಂಡಿದ್ದಾರೆ.</p>.<p class="bodytext">ವೈವಿಧ್ಯತೆ ಹೆಚ್ಚಿಸಿದೆ: ದಕ್ಷಿಣ ಆಫ್ರಿಕಾದಿಂದ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಮತ್ತೆ 12 ಚೀತಾಗಳನ್ನು ತಂದು ಬಿಟ್ಟಿರುವುದು ಭಾರತ ವನ್ಯಜೀವಿ ವೈವಿಧ್ಯತೆಯನ್ನು ಹೆಚ್ಚಿಸಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ.</p>.<p>ಪರಿಸರ ಸಚಿವ ಭೂಪೇಂದ್ರ ಯಾದವ್ ಅವರ ಚೀತಾಗಳ ಆಗಮನದ ಕುರಿತ ಟ್ವೀಟ್ ಅನ್ನು ಟ್ಯಾಗ್ ಮಾಡಿರುವ ಪ್ರಧಾನಿ ಮೋದಿ, ‘ಈ ಬೆಳವಣಿಗೆಯಿಂದ ಭಾರತದ ವನ್ಯಜೀವಿ ವೈವಿಧ್ಯತೆಗೆ ಉತ್ತೇಜನ ದೊರಕಿದಂತಾಗಿದೆ’ ಎಂದು ಹೇಳಿದ್ದಾರೆ.</p>.<p> ಲಡಾಕ್ ಜನರ ಜೀವನವನ್ನು ಸುಲಭವಾಗಿಸುವ ಯಾವುದೇ ಅವಕಾಶವನ್ನೂ ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ.</p>.<p> 4.1 ಕಿ.ಮೀ ಉದ್ದದ ಶಿಂಕುನ್ ಲಾ ಸುರಂಗ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ₹1,681.51 ಕೋಟಿ ಅನುದಾನ ನೀಡಿದೆ ಎಂದು ಲಡಾಕ್ ಸಂಸದ ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್ ಅವರು ಟ್ವೀಟ್ ಮಾಡಿದ್ದರು. ಇದನ್ನು ಟ್ಯಾಗ್ ಮಾಡಿರುವ ಪ್ರಧಾನಿ ಮೋದಿ, ಲಡಾಕ್ ಜನರ ಬದುಕನ್ನು ಸರಳವಾಗಿಸುವ ಯಾವುದೇ ಅವಕಾಶವನ್ನೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.</p>.<p>ಭಾರತ–ಯುಎಇ ಬಾಂಧವ್ಯ ಗಟ್ಟಿ:</p>.<p>ಭಾರತ–ಯುಎಇ ನಡುವಿನ ಸಮಗ್ರ ‘ಆರ್ಥಿಕ ಪಾಲುದಾರಿಕೆ ಒಪ್ಪಂದ’ವು (ಸಿಇಪಿಎ) ಭಾರತದ ಉದ್ಯಮಿಗಳು ಮತ್ತು ಗಲ್ಫ್ ರಾಷ್ಟ್ರದೊಂದಿಗಿನ ಬಾಂಧವ್ಯಕ್ಕೆ ಮತ್ತಷ್ಟು ಬಲ ತುಂಬಲಿದೆ ಎಂದು ಮೋದಿ ಹೇಳಿದ್ದಾರೆ. </p>.<p>ಸಿಇಪಿಎ ಒಪ್ಪಂದಕ್ಕೆ ಉಭಯ ದೇಶಗಳು ಕಳೆದ ವರ್ಷ ಫೆ.18ರಂದು ಸಹಿ ಹಾಕಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>