<p><strong>ನವದೆಹಲಿ</strong>: ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದೇಶದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕಿದೆ ಎಂದು ಉಕ್ರೇನ್ನ ಹಾರ್ಕೀವ್ ನಗರದಲ್ಲಿ ಮೃತಪಟ್ಟಿರುವ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಅವರ ತಂದೆ ಶೇಖರಪ್ಪ ಹೇಳಿದ್ದಾಗಿ ಸಂಸದ ಶಿವಕುಮಾರ ಉದಾಸಿ ಮಾಹಿತಿ ನೀಡಿದರು.</p>.<p>ಲೋಕಸಭೆಯಲ್ಲಿ ಮಂಗಳವಾರ ಸಂಜೆ ನಡೆದ ಉಕ್ರೇನ್ ಸ್ಥಿತಿ ಕುರಿತ ಚರ್ಚೆಯ ವೇಳೆ ಅವರು ಮಾತನಾಡಿದರು.</p>.<p>ಪಿಯುಸಿಯಲ್ಲಿ ಶೇ 97ರಷ್ಟು ಅಂಕ ಗಳಿಸಿದ್ದರೂ ವೈದ್ಯಕೀಯ ಶಿಕ್ಷಣ ಪಡೆಯಲು ನವೀನ್ ಉಕ್ರೇನ್ಗೆ ತೆರಳಬೇಕಾಯಿತು. ಅಂಥ ಪ್ರತಿಭಾವಂತರು ಉನ್ನತ ಶಿಕ್ಷಣಕ್ಕಾಗಿ ವಿದೇಶಿ ಕಾಲೇಜುಗಳನ್ನು ನೆಚ್ಚಿಕೊಳ್ಳುವ ಅನಿವಾರ್ಯತೆಯಿಂದ ಹೊರಬರಬೇಕು ಎಂಬ ಆಶಯವನ್ನು ಅವರ ತಂದೆ ವ್ಯಕ್ತಪಡಿಸಿದ್ದಾಗಿ ಉದಾಸಿ ಹೇಳಿದರು.</p>.<p>‘ಮಗನ ಅಗಲಿಕೆಯ ನೋವಿನ ನಡುವೆಯೂ ಶೇಖರಪ್ಪ ಅವರು ಸಾಮಾಜಿಕ ಕಳಕಳಿ ವ್ಯಕ್ತಪಡಿಸಿದರು. ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯದ ಕುರಿತು ಅವರು ಚಿಂತನೆ ನಡೆಸಿದ್ದು ಅಭಿನಂದನೀಯ. ಈ ಕುರಿತು ಸರ್ಕಾರ ಗಂಭೀರವಾದ ಚರ್ಚೆ ನಡೆಸಬೇಕಿದೆ’ ಎಂದು ಅವರು ಹೇಳಿದರು.</p>.<p>ರಷ್ಯಾ ನಡೆಸಿರುವ ಶೆಲ್ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದ ನವೀನ್ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ವಾಪಸ್ ತರಲು ಕೇಂದ್ರ ಸರ್ಕಾರ ಸಾಕಷ್ಟು ಶ್ರಮಿಸಿತು ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದೇಶದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕಿದೆ ಎಂದು ಉಕ್ರೇನ್ನ ಹಾರ್ಕೀವ್ ನಗರದಲ್ಲಿ ಮೃತಪಟ್ಟಿರುವ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಅವರ ತಂದೆ ಶೇಖರಪ್ಪ ಹೇಳಿದ್ದಾಗಿ ಸಂಸದ ಶಿವಕುಮಾರ ಉದಾಸಿ ಮಾಹಿತಿ ನೀಡಿದರು.</p>.<p>ಲೋಕಸಭೆಯಲ್ಲಿ ಮಂಗಳವಾರ ಸಂಜೆ ನಡೆದ ಉಕ್ರೇನ್ ಸ್ಥಿತಿ ಕುರಿತ ಚರ್ಚೆಯ ವೇಳೆ ಅವರು ಮಾತನಾಡಿದರು.</p>.<p>ಪಿಯುಸಿಯಲ್ಲಿ ಶೇ 97ರಷ್ಟು ಅಂಕ ಗಳಿಸಿದ್ದರೂ ವೈದ್ಯಕೀಯ ಶಿಕ್ಷಣ ಪಡೆಯಲು ನವೀನ್ ಉಕ್ರೇನ್ಗೆ ತೆರಳಬೇಕಾಯಿತು. ಅಂಥ ಪ್ರತಿಭಾವಂತರು ಉನ್ನತ ಶಿಕ್ಷಣಕ್ಕಾಗಿ ವಿದೇಶಿ ಕಾಲೇಜುಗಳನ್ನು ನೆಚ್ಚಿಕೊಳ್ಳುವ ಅನಿವಾರ್ಯತೆಯಿಂದ ಹೊರಬರಬೇಕು ಎಂಬ ಆಶಯವನ್ನು ಅವರ ತಂದೆ ವ್ಯಕ್ತಪಡಿಸಿದ್ದಾಗಿ ಉದಾಸಿ ಹೇಳಿದರು.</p>.<p>‘ಮಗನ ಅಗಲಿಕೆಯ ನೋವಿನ ನಡುವೆಯೂ ಶೇಖರಪ್ಪ ಅವರು ಸಾಮಾಜಿಕ ಕಳಕಳಿ ವ್ಯಕ್ತಪಡಿಸಿದರು. ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯದ ಕುರಿತು ಅವರು ಚಿಂತನೆ ನಡೆಸಿದ್ದು ಅಭಿನಂದನೀಯ. ಈ ಕುರಿತು ಸರ್ಕಾರ ಗಂಭೀರವಾದ ಚರ್ಚೆ ನಡೆಸಬೇಕಿದೆ’ ಎಂದು ಅವರು ಹೇಳಿದರು.</p>.<p>ರಷ್ಯಾ ನಡೆಸಿರುವ ಶೆಲ್ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದ ನವೀನ್ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ವಾಪಸ್ ತರಲು ಕೇಂದ್ರ ಸರ್ಕಾರ ಸಾಕಷ್ಟು ಶ್ರಮಿಸಿತು ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>