<p><strong>ಹೈದರಾಬಾದ್:</strong> ವ್ಯಕ್ತಿಯೊಬ್ಬ ಶಿವಲಿಂಗವನ್ನು ವಿರೂಪಗೊಳಿಸಿದ ಘಟನೆ ಆಂಧ್ರಪ್ರದೇಶದ ಐತಿಹಾಸಿಕ ದ್ರಾಕ್ಷಿರಾಮ ದೇವಾಲಯದಲ್ಲಿ ನಡೆದಿದೆ. </p>.<p>ಆರೋಪಿಯನ್ನು ರಾಮಚಂದ್ರಪುರ ಮಂಡಲದ ತೋಟಪೇಟ ನಿವಾಸಿ ಶ್ರೀಲಂ ಶ್ರೀನಿವಾಸ್ (38) ಎಂದು ಗುರುತಿಸಲಾಗಿದ್ದು, ಸೋಮವಾರ ರಾತ್ರಿ ಶಿವಲಿಂಗವನ್ನು ವಿರೂಪಗೊಳಿಸಿದ್ದಾನೆ ಎಂದು ಡಾ. ಬಿ.ಆರ್. ಅಂಬೇಡ್ಕರ್ ಕೊನಸೀಮ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಮೀನಾ ಬುಧವಾರ ತಿಳಿಸಿದ್ದಾರೆ.</p>.<p class="title">ದೇಗುಲದ ಸಿಬ್ಬಂದಿ ಜೊತೆಗಿನ ವೈಯಕ್ತಿಕ ದ್ವೇಷದ ಕಾರಣಕ್ಕೆ ಆರೋಪಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿಸಿದ್ದಾರೆ.</p>.<p class="title">ಆರೋಪಿ ಶಿವಲಿಂಗಕ್ಕೆ ಸುತ್ತಿಗೆಯಿಂದ ಹೊಡೆದು, ಅಲ್ಲಿಂದ ಪರಾರಿಯಾಗಿದ್ದ. ಸ್ಥಳೀಯರ ಮಾಹಿತಿ ಮತ್ತು ಸಿ.ಸಿ.ಟಿ.ವಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧರಿಸಿ, ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು. ಘಟನೆ ಬಳಿಕ, ಹೊಸ ಶಿವಲಿಂಗವನ್ನು ಸ್ಥಾಪಿಸಿ, ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದು ಹೇಳಿದರು.</p>.<p class="title"> ಪಾರದರ್ಶಕವಾಗಿ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ವ್ಯಕ್ತಿಯೊಬ್ಬ ಶಿವಲಿಂಗವನ್ನು ವಿರೂಪಗೊಳಿಸಿದ ಘಟನೆ ಆಂಧ್ರಪ್ರದೇಶದ ಐತಿಹಾಸಿಕ ದ್ರಾಕ್ಷಿರಾಮ ದೇವಾಲಯದಲ್ಲಿ ನಡೆದಿದೆ. </p>.<p>ಆರೋಪಿಯನ್ನು ರಾಮಚಂದ್ರಪುರ ಮಂಡಲದ ತೋಟಪೇಟ ನಿವಾಸಿ ಶ್ರೀಲಂ ಶ್ರೀನಿವಾಸ್ (38) ಎಂದು ಗುರುತಿಸಲಾಗಿದ್ದು, ಸೋಮವಾರ ರಾತ್ರಿ ಶಿವಲಿಂಗವನ್ನು ವಿರೂಪಗೊಳಿಸಿದ್ದಾನೆ ಎಂದು ಡಾ. ಬಿ.ಆರ್. ಅಂಬೇಡ್ಕರ್ ಕೊನಸೀಮ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಮೀನಾ ಬುಧವಾರ ತಿಳಿಸಿದ್ದಾರೆ.</p>.<p class="title">ದೇಗುಲದ ಸಿಬ್ಬಂದಿ ಜೊತೆಗಿನ ವೈಯಕ್ತಿಕ ದ್ವೇಷದ ಕಾರಣಕ್ಕೆ ಆರೋಪಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿಸಿದ್ದಾರೆ.</p>.<p class="title">ಆರೋಪಿ ಶಿವಲಿಂಗಕ್ಕೆ ಸುತ್ತಿಗೆಯಿಂದ ಹೊಡೆದು, ಅಲ್ಲಿಂದ ಪರಾರಿಯಾಗಿದ್ದ. ಸ್ಥಳೀಯರ ಮಾಹಿತಿ ಮತ್ತು ಸಿ.ಸಿ.ಟಿ.ವಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧರಿಸಿ, ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು. ಘಟನೆ ಬಳಿಕ, ಹೊಸ ಶಿವಲಿಂಗವನ್ನು ಸ್ಥಾಪಿಸಿ, ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದು ಹೇಳಿದರು.</p>.<p class="title"> ಪಾರದರ್ಶಕವಾಗಿ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>