<p><strong>ಶಿವಮೊಗ್ಗ</strong>: ‘ಯುವಕರು, ಕುಶಲಕರ್ಮಿಗಳು ಸ್ವಾವಲಂಬಿ ಬದುಕು ನಡೆಸಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ವಿಶ್ವಕರ್ಮ ಯೋಜನೆ ರೂಪಿಸಿದ್ದಾರೆ. ಅದರ ಸದುಪಯೋಗ ಪಡೆದುಕೊಳ್ಳಿ’ ಎಂದು ಸಂಸದ ಬಿ.ವೈ. ರಾಘವೇಂದ್ರ ಸಲಹೆ ನೀಡಿದರು.</p>.<p>ಎಂಎಸ್ಎಂಇ ಡಿಎಫ್ಒ ಮತ್ತು ಜಿಲ್ಲಾ ಕೈಗಾರಿಕ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಗರದ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಪಿಎಂ ವಿಶ್ವಕರ್ಮ ವಸ್ತು ಪ್ರದರ್ಶನ ಮತ್ತು ವ್ಯಾಪಾರ ಮೇಳ ಉದ್ಘಾಟಿಸಿ ಮಾತನಾಡಿದರು.</p>.<p>‘ಕೇಂದ್ರ ಬಜೆಟ್ನಲ್ಲಿ ವಿಶ್ವಕರ್ಮ ಯೋಜನೆಗೆ ₹ 13,000 ಕೋಟಿ ಮೀಸಲಿಡಲಾಗಿದೆ. ಇದರಡಿ ಆಯ್ಕೆಯಾದವರಿಗೆ ಒಟ್ಟು ₹ 3 ಲಕ್ಷ ಸಾಲ ಶೇ 5 ಬಡ್ಡಿ ದರದಂತೆ ಕಂತಿನ ರೂಪದಲ್ಲಿ ನೀಡಲಾಗುತ್ತಿದೆ. ವಿಶ್ವಕರ್ಮ ಯೋಜನೆಯಲ್ಲಿ ಕೆಲಸ ಮಾಡುವಂತಹ ವಿಶ್ವಕರ್ಮ ಬಂಧುಗಳಿಗೆ ಐಡಿ ಕಾರ್ಡ್ ಹಾಗೂ ಅವರ ಮನೆಗೆ ನೇರವಾಗಿ ₹ 40 ಸಾವಿರದಿಂದ ₹ 50 ಸಾವಿರ ಬೆಲೆಬಾಳುವ ಕಿಟ್ ವಿತರಿಸಲಾಗುತ್ತಿದೆ’ ಎಂದರು.</p>.<p>‘ವಿಶ್ವಕರ್ಮ ಬಂಧುಗಳಿಗೆ ಐಡಿ ಕಾರ್ಡ್ ತುಂಬ ಮುಖ್ಯವಾಗಿದೆ. ಅದರಿಂದ ದೇಶದಲ್ಲಿ ಅವರನ್ನು ಗುರುತಿಸಲಾಗುತ್ತದೆ. ವಿಶ್ವಕರ್ಮ ಯೋಜನೆಯಡಿ ರಾಜ್ಯದಲ್ಲಿ 22 ಲಕ್ಷ ಅರ್ಜಿಗಳು ಬಂದಿದ್ದು, 5.39 ಲಕ್ಷ ಅರ್ಜಿಗಳ ಪರಿಶೀಲನೆ ಪೂರ್ಣಗೊಂಡು 1.25 ಲಕ್ಷ ಜನರಿಗೆ ಸಾಲ ವಿತರಣೆ ಮಾಡಲಾಗಿದೆ’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಎಂಎಸ್ಎಂಇ ಡಿಎಫ್ಒ ಬೆಂಗಳೂರು ನಿರ್ದೇಶಕ ಕೆ. ದೇವರಾಜ್, ಸಹಾಯಕ ನಿರ್ದೇಶಕ ಎ. ಶಿವಕುಮಾರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಎಚ್. ಸುರೇಶ್, ಎಂಎಸ್ಎಂಇ ಅಧಿಕಾರಿ ಗೀತಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-42-359925791</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ‘ಯುವಕರು, ಕುಶಲಕರ್ಮಿಗಳು ಸ್ವಾವಲಂಬಿ ಬದುಕು ನಡೆಸಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ವಿಶ್ವಕರ್ಮ ಯೋಜನೆ ರೂಪಿಸಿದ್ದಾರೆ. ಅದರ ಸದುಪಯೋಗ ಪಡೆದುಕೊಳ್ಳಿ’ ಎಂದು ಸಂಸದ ಬಿ.ವೈ. ರಾಘವೇಂದ್ರ ಸಲಹೆ ನೀಡಿದರು.</p>.<p>ಎಂಎಸ್ಎಂಇ ಡಿಎಫ್ಒ ಮತ್ತು ಜಿಲ್ಲಾ ಕೈಗಾರಿಕ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಗರದ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಪಿಎಂ ವಿಶ್ವಕರ್ಮ ವಸ್ತು ಪ್ರದರ್ಶನ ಮತ್ತು ವ್ಯಾಪಾರ ಮೇಳ ಉದ್ಘಾಟಿಸಿ ಮಾತನಾಡಿದರು.</p>.<p>‘ಕೇಂದ್ರ ಬಜೆಟ್ನಲ್ಲಿ ವಿಶ್ವಕರ್ಮ ಯೋಜನೆಗೆ ₹ 13,000 ಕೋಟಿ ಮೀಸಲಿಡಲಾಗಿದೆ. ಇದರಡಿ ಆಯ್ಕೆಯಾದವರಿಗೆ ಒಟ್ಟು ₹ 3 ಲಕ್ಷ ಸಾಲ ಶೇ 5 ಬಡ್ಡಿ ದರದಂತೆ ಕಂತಿನ ರೂಪದಲ್ಲಿ ನೀಡಲಾಗುತ್ತಿದೆ. ವಿಶ್ವಕರ್ಮ ಯೋಜನೆಯಲ್ಲಿ ಕೆಲಸ ಮಾಡುವಂತಹ ವಿಶ್ವಕರ್ಮ ಬಂಧುಗಳಿಗೆ ಐಡಿ ಕಾರ್ಡ್ ಹಾಗೂ ಅವರ ಮನೆಗೆ ನೇರವಾಗಿ ₹ 40 ಸಾವಿರದಿಂದ ₹ 50 ಸಾವಿರ ಬೆಲೆಬಾಳುವ ಕಿಟ್ ವಿತರಿಸಲಾಗುತ್ತಿದೆ’ ಎಂದರು.</p>.<p>‘ವಿಶ್ವಕರ್ಮ ಬಂಧುಗಳಿಗೆ ಐಡಿ ಕಾರ್ಡ್ ತುಂಬ ಮುಖ್ಯವಾಗಿದೆ. ಅದರಿಂದ ದೇಶದಲ್ಲಿ ಅವರನ್ನು ಗುರುತಿಸಲಾಗುತ್ತದೆ. ವಿಶ್ವಕರ್ಮ ಯೋಜನೆಯಡಿ ರಾಜ್ಯದಲ್ಲಿ 22 ಲಕ್ಷ ಅರ್ಜಿಗಳು ಬಂದಿದ್ದು, 5.39 ಲಕ್ಷ ಅರ್ಜಿಗಳ ಪರಿಶೀಲನೆ ಪೂರ್ಣಗೊಂಡು 1.25 ಲಕ್ಷ ಜನರಿಗೆ ಸಾಲ ವಿತರಣೆ ಮಾಡಲಾಗಿದೆ’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಎಂಎಸ್ಎಂಇ ಡಿಎಫ್ಒ ಬೆಂಗಳೂರು ನಿರ್ದೇಶಕ ಕೆ. ದೇವರಾಜ್, ಸಹಾಯಕ ನಿರ್ದೇಶಕ ಎ. ಶಿವಕುಮಾರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಎಚ್. ಸುರೇಶ್, ಎಂಎಸ್ಎಂಇ ಅಧಿಕಾರಿ ಗೀತಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-42-359925791</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>