<p><strong>ಲಖನೌ:</strong> ಆಜಂ ಖಾನ್ ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ಸೇರುತ್ತಾರೆ ಎಂಬ ವದಂತಿಗಳನ್ನು ಸಮಾಜವಾದಿ ಪಕ್ಷದ (ಎಸ್ಪಿ) ನಾಯಕ ಹಾಗೂ ಶಾಸಕ ಶಿವಪಾಲ್ ಸಿಂಗ್ ಯಾದವ್ ಮಂಗಳವಾರ ಅಲ್ಲಗಳೆದಿದ್ದಾರೆ.</p><p>ಅಜಂ ಖಾನ್ಗೆ ಜಾಮೀನು ಸಿಕ್ಕ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಶಿವಪಾಲ್ ಸಿಂಗ್, ಆಜಂ ಖಾನ್ ಸಮಾಜವಾದಿ ಪಕ್ಷದಲ್ಲಿಯೇ ಇರಲಿದ್ದಾರೆ ಎಂದರು. ಆಜಂ ಖಾನ್ ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿದ್ದರು.</p><p>ಅಜಂ ಖಾನ್ ಬೇರೆ ಪಕ್ಷ ಸೇರುವ ಪ್ರಶ್ನೆ ಇಲ್ಲ, ಅವರು ಸಮಾಜವಾದಿ ಪಕ್ಷದಲ್ಲಿದ್ದು ಅವರು ಸದಾ ಇಲ್ಲಿಯೇ ಉಳಿಯಲಿದ್ದಾರೆ ಎಂದು ಹೇಳಿದರು.</p><p>ಸಮಾಜವಾದಿ ಪಕ್ಷ ಅವರಿಗೆ ಯಾವಾಗಲೂ ಸಂಪೂರ್ಣ ಬೆಂಬಲವನ್ನು ನೀಡಿದೆ. ಆಗಾಗಿ ಅವರು ಬೇರೆ ಪಕ್ಷಕ್ಕೆ ಹೋಗುವ ಮಾತೇ ಇಲ್ಲ. ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಲ್ಲಿ ಯಾವುದೇ ಸತ್ಯ ಇಲ್ಲ ಎಂದರು.</p><p>ಸದ್ಯ ನ್ಯಾಯಾಲಯ ಅವರಿಗೆ ಜಾಮೀನು ನೀಡಿದ್ದು ಶೀಘ್ರದಲ್ಲೇ ಅಜಂ ಖಾಣ್ ಅವರನ್ನು ಭೇಟಿ ಮಾಡುವುದಾಗಿ ಹೇಳಿದರು.</p>.ಅನರ್ಹ ಶಾಸಕ ಆಜಂ ಖಾನ್ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ.ಭಯೋತ್ಪಾದಕ ಎಂಬಂತೆ ವರ್ತನೆ: ಆಜಂ ಖಾನ್ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಆಜಂ ಖಾನ್ ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ಸೇರುತ್ತಾರೆ ಎಂಬ ವದಂತಿಗಳನ್ನು ಸಮಾಜವಾದಿ ಪಕ್ಷದ (ಎಸ್ಪಿ) ನಾಯಕ ಹಾಗೂ ಶಾಸಕ ಶಿವಪಾಲ್ ಸಿಂಗ್ ಯಾದವ್ ಮಂಗಳವಾರ ಅಲ್ಲಗಳೆದಿದ್ದಾರೆ.</p><p>ಅಜಂ ಖಾನ್ಗೆ ಜಾಮೀನು ಸಿಕ್ಕ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಶಿವಪಾಲ್ ಸಿಂಗ್, ಆಜಂ ಖಾನ್ ಸಮಾಜವಾದಿ ಪಕ್ಷದಲ್ಲಿಯೇ ಇರಲಿದ್ದಾರೆ ಎಂದರು. ಆಜಂ ಖಾನ್ ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿದ್ದರು.</p><p>ಅಜಂ ಖಾನ್ ಬೇರೆ ಪಕ್ಷ ಸೇರುವ ಪ್ರಶ್ನೆ ಇಲ್ಲ, ಅವರು ಸಮಾಜವಾದಿ ಪಕ್ಷದಲ್ಲಿದ್ದು ಅವರು ಸದಾ ಇಲ್ಲಿಯೇ ಉಳಿಯಲಿದ್ದಾರೆ ಎಂದು ಹೇಳಿದರು.</p><p>ಸಮಾಜವಾದಿ ಪಕ್ಷ ಅವರಿಗೆ ಯಾವಾಗಲೂ ಸಂಪೂರ್ಣ ಬೆಂಬಲವನ್ನು ನೀಡಿದೆ. ಆಗಾಗಿ ಅವರು ಬೇರೆ ಪಕ್ಷಕ್ಕೆ ಹೋಗುವ ಮಾತೇ ಇಲ್ಲ. ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಲ್ಲಿ ಯಾವುದೇ ಸತ್ಯ ಇಲ್ಲ ಎಂದರು.</p><p>ಸದ್ಯ ನ್ಯಾಯಾಲಯ ಅವರಿಗೆ ಜಾಮೀನು ನೀಡಿದ್ದು ಶೀಘ್ರದಲ್ಲೇ ಅಜಂ ಖಾಣ್ ಅವರನ್ನು ಭೇಟಿ ಮಾಡುವುದಾಗಿ ಹೇಳಿದರು.</p>.ಅನರ್ಹ ಶಾಸಕ ಆಜಂ ಖಾನ್ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ.ಭಯೋತ್ಪಾದಕ ಎಂಬಂತೆ ವರ್ತನೆ: ಆಜಂ ಖಾನ್ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>