ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಪಾಲ್‌ ಯಾದವ್‌ಗೆ ಮಾಯಾವತಿಯ ಹಳೆಯ ಬಂಗ್ಲೆ

Last Updated 12 ಅಕ್ಟೋಬರ್ 2018, 17:56 IST
ಅಕ್ಷರ ಗಾತ್ರ

ಲಖನೌ: ಸುಪ್ರೀಂಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ತೆರವುಗೊಳಿಸಿದ ಬಂಗ್ಲೆಯನ್ನು ಹಿರಿಯ ಶಾಸಕ ಶಿವಪಾಲ್‌ಯಾದವ್‌ಗೆ ನೀಡಿ ಯೋಗಿ ಆದಿತ್ಯನಾಥ್‌ ಸರ್ಕಾರ ಕ್ರಮ ಕೈಗೊಂಡಿದೆ.

‘ನನ್ನ ಜೀವಕ್ಕೆ ಅಪಾಯವಿದೆ ಎಂಬ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಈ ಬಂಗ್ಲೆಯನ್ನು ಸರ್ಕಾರ ನೀಡಿದೆ’ ಎಂದು ಶಿವಪಾಲ್‌ ಯಾದವ್‌ ಸಮರ್ಥಿಸಿಕೊಂಡಿದ್ದಾರೆ. ಶಿವಪಾಲ್‌ ಯಾದವ್‌ ಅವರು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂಸಿಂಗ್‌ ಯಾದವ್‌ ಅವರ ಸಹೋದರ ಹಾಗೂ ಮಾಜಿ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಅವರ ಚಿಕ್ಕಪ್ಪ.

‘ನಾನು ಐದು ಬಾರಿ ಶಾಸಕನಾಗಿದ್ದು, ಸದನದಲ್ಲಿ ಅತ್ಯಂತ ಹಿರಿಯ ಸದಸ್ಯನಾಗಿದ್ದೇನೆ’ ಎಂದರು.

‘ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಮಾರ್ಗದಲ್ಲಿಬಂಗ್ಲೆ ನೀಡುವಂತೆ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದೆ. ಸರ್ಕಾರದ ಎಲ್ಲ ನಿಯಮಗಳನ್ನು ಆಧರಿಸಿಯೇ, ಬಂಗ್ಲೆ ನೀಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT