<p><strong>ಭುವನೇಶ್ವರ:</strong> ‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರ ಸುಲಭವಾಗಿ ಸಿಗುತ್ತಿಲ್ಲ ಎನ್ನಲು ನನಗೆ ಹಿಂಜರಿಕೆ ಇಲ್ಲ. ರೈತರು ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಂಗಳವಾರ ಹೇಳಿದ್ದಾರೆ.</p>.ಮೋದಿ ಸರ್ಕಾರವು ತನ್ನ ವೈಫಲ್ಯಕ್ಕೆ ಕೊಲ್ಲಿ ಯುದ್ಧವನ್ನು ಹೊಣೆ ಮಾಡುತ್ತಿದೆ: ಮಾನ್.<p>ಇಲ್ಲಿ ನಡೆದ ಕೃಷಿ ಸಮ್ಮೇಳನವೊಂದರಲ್ಲಿ ಮಾತನಾಡಿದ ಅವರು, ‘ಜಾಗತಿಕ ನಿರ್ಬಂಧಗಳ ಹೊರತಾಗಿಯೂ ರೈತರಿಗೆ ರಸಗೊಬ್ಬರ ಪೂರೈಕೆಯಾಗುವಂತೆ ಮಾಡಲು ಕೇಂದ್ರ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ’ ಎಂದರು.</p><p>‘ಸಬ್ಸಿಡಿ ರಸಗೊಬ್ಬರಗಳು ಆನ್ಯ ಉದ್ದೇಶಕ್ಕೆ ಬಳಕೆಯಾಗದಂತೆ ನೋಡಿಕೊಳ್ಳಬೇಕು. ಅದರ ಜೊತೆಗೆ ಬೆಳೆ ಮತ್ತು ರೈತರ ಮೇಲೆ ಪರಿಣಾಮ ಬೀರುವ ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳನ್ನು ನಿಯಂತ್ರಿಸಬೇಕು. ಇಂಥ ಚಟುವಟಿಕೆಗಳ ವಿರುದ್ಧ ರಾಜ್ಯಗಳು ಕಠಿಣ ಕ್ರಮಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.</p><p>‘ಗುಣಮಟ್ಟದ ಕೀಟನಾಶಕ ಮತ್ತು ಬೀಜಗಳ ಲಭ್ಯವಾಗುವಂತೆ ಮಾಡುವ ಕಾನೂನು ಚೌಕಟ್ಟನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಎರಡು ಮಸೂದೆಗಳನ್ನು ತರಲು ಚಿಂತನೆ ನಡೆಸಿದೆ’ ಎಂದರು.</p>.ಕೊಲ್ಲಿ ಸಂಘರ್ಷ: ಅಮೆರಿಕ–ಇರಾನ್ ಮಧ್ಯೆ ಸಿಲುಕಿ ನಲುಗಿದ 'ಗುಬ್ಬಚ್ಚಿ' ಕತಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರ ಸುಲಭವಾಗಿ ಸಿಗುತ್ತಿಲ್ಲ ಎನ್ನಲು ನನಗೆ ಹಿಂಜರಿಕೆ ಇಲ್ಲ. ರೈತರು ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಂಗಳವಾರ ಹೇಳಿದ್ದಾರೆ.</p>.ಮೋದಿ ಸರ್ಕಾರವು ತನ್ನ ವೈಫಲ್ಯಕ್ಕೆ ಕೊಲ್ಲಿ ಯುದ್ಧವನ್ನು ಹೊಣೆ ಮಾಡುತ್ತಿದೆ: ಮಾನ್.<p>ಇಲ್ಲಿ ನಡೆದ ಕೃಷಿ ಸಮ್ಮೇಳನವೊಂದರಲ್ಲಿ ಮಾತನಾಡಿದ ಅವರು, ‘ಜಾಗತಿಕ ನಿರ್ಬಂಧಗಳ ಹೊರತಾಗಿಯೂ ರೈತರಿಗೆ ರಸಗೊಬ್ಬರ ಪೂರೈಕೆಯಾಗುವಂತೆ ಮಾಡಲು ಕೇಂದ್ರ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ’ ಎಂದರು.</p><p>‘ಸಬ್ಸಿಡಿ ರಸಗೊಬ್ಬರಗಳು ಆನ್ಯ ಉದ್ದೇಶಕ್ಕೆ ಬಳಕೆಯಾಗದಂತೆ ನೋಡಿಕೊಳ್ಳಬೇಕು. ಅದರ ಜೊತೆಗೆ ಬೆಳೆ ಮತ್ತು ರೈತರ ಮೇಲೆ ಪರಿಣಾಮ ಬೀರುವ ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳನ್ನು ನಿಯಂತ್ರಿಸಬೇಕು. ಇಂಥ ಚಟುವಟಿಕೆಗಳ ವಿರುದ್ಧ ರಾಜ್ಯಗಳು ಕಠಿಣ ಕ್ರಮಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.</p><p>‘ಗುಣಮಟ್ಟದ ಕೀಟನಾಶಕ ಮತ್ತು ಬೀಜಗಳ ಲಭ್ಯವಾಗುವಂತೆ ಮಾಡುವ ಕಾನೂನು ಚೌಕಟ್ಟನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಎರಡು ಮಸೂದೆಗಳನ್ನು ತರಲು ಚಿಂತನೆ ನಡೆಸಿದೆ’ ಎಂದರು.</p>.ಕೊಲ್ಲಿ ಸಂಘರ್ಷ: ಅಮೆರಿಕ–ಇರಾನ್ ಮಧ್ಯೆ ಸಿಲುಕಿ ನಲುಗಿದ 'ಗುಬ್ಬಚ್ಚಿ' ಕತಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>