<p><strong>ಲಖನೌ</strong>: ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಾಯಿಯೊಂದು ರೋಗಿಯ ದೇಹದಿಂದ ಸ್ರವಿಸಿರುವ ರಕ್ತ ನೆಕ್ಕುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಗುರುವಾರ ಹರಿದಾಡಿದೆ.</p>.<p>ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಜಿಲ್ಲಾ ಆಸ್ಪತ್ರೆಯ ವಾರ್ಡ್ವೊಂದರಲ್ಲಿ ನೆಲದ ಮೇಲೆ ಪ್ರಜ್ಞಾಹೀನನಾಗಿ ಮಲಗಿರುವಾಗ ನಾಯಿಯೊಂದು ಆತನ ದೇಹದಿಂದ ಸ್ರವಿಸಿರುವ ರಕ್ತವನ್ನು ನೆಕ್ಕುತ್ತಿರುವ ದೃಶ್ಯ ಈ ವಿಡಿಯೊದಲ್ಲಿದೆ. ಆತನಿಗೆ ಚಿಕಿತ್ಸೆ ನೀಡಲು ವಾರ್ಡ್ನಲ್ಲಿ ಸಿಬ್ಬಂದಿಯೇ ಇರಲಿಲ್ಲ ಎಂಬುದೂ ಈ ವಿಡಿಯೊದಿಂದ ಗೊತ್ತಾಗಿದೆ. ಈ ವಿಡಿಯೊವನ್ನು ಮಂಗಳವಾರ ಚಿತ್ರೀಕರಿಸಲಾಗಿತ್ತು ಎಂದು ಹೇಳಲಾಗಿದೆ.</p>.<p>‘ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಆಡಳಿತವು ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಆರು ಸಿಬ್ಬಂದಿಯನ್ನು ವಜಾಗೊಳಿಸಿದೆ’ ಎಂದು ಮೂಲಗಳು ತಿಳಿಸಿವೆ.</p>.<p>‘ಈ ಘಟನೆಯಿಂದ ಆಸ್ಪತ್ರೆಯ ಘನತೆಗೆ ಧಕ್ಕೆಯಾಗಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಕರ್ತವ್ಯದಲ್ಲಿದ್ದ ವೈದ್ಯರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುತ್ತದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಾಯಿಯೊಂದು ರೋಗಿಯ ದೇಹದಿಂದ ಸ್ರವಿಸಿರುವ ರಕ್ತ ನೆಕ್ಕುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಗುರುವಾರ ಹರಿದಾಡಿದೆ.</p>.<p>ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಜಿಲ್ಲಾ ಆಸ್ಪತ್ರೆಯ ವಾರ್ಡ್ವೊಂದರಲ್ಲಿ ನೆಲದ ಮೇಲೆ ಪ್ರಜ್ಞಾಹೀನನಾಗಿ ಮಲಗಿರುವಾಗ ನಾಯಿಯೊಂದು ಆತನ ದೇಹದಿಂದ ಸ್ರವಿಸಿರುವ ರಕ್ತವನ್ನು ನೆಕ್ಕುತ್ತಿರುವ ದೃಶ್ಯ ಈ ವಿಡಿಯೊದಲ್ಲಿದೆ. ಆತನಿಗೆ ಚಿಕಿತ್ಸೆ ನೀಡಲು ವಾರ್ಡ್ನಲ್ಲಿ ಸಿಬ್ಬಂದಿಯೇ ಇರಲಿಲ್ಲ ಎಂಬುದೂ ಈ ವಿಡಿಯೊದಿಂದ ಗೊತ್ತಾಗಿದೆ. ಈ ವಿಡಿಯೊವನ್ನು ಮಂಗಳವಾರ ಚಿತ್ರೀಕರಿಸಲಾಗಿತ್ತು ಎಂದು ಹೇಳಲಾಗಿದೆ.</p>.<p>‘ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಆಡಳಿತವು ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಆರು ಸಿಬ್ಬಂದಿಯನ್ನು ವಜಾಗೊಳಿಸಿದೆ’ ಎಂದು ಮೂಲಗಳು ತಿಳಿಸಿವೆ.</p>.<p>‘ಈ ಘಟನೆಯಿಂದ ಆಸ್ಪತ್ರೆಯ ಘನತೆಗೆ ಧಕ್ಕೆಯಾಗಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಕರ್ತವ್ಯದಲ್ಲಿದ್ದ ವೈದ್ಯರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುತ್ತದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>