<p><strong>ನವದೆಹಲಿ:</strong> ‘ಪ್ರಯಾಗರಾಜ್ ಅಭಿವೃದ್ಧಿ ಪ್ರಾಧಿಕಾರವು ನಗರದಲ್ಲಿ ಕೆಲವು ಮನೆಗಳನ್ನು ಧ್ವಂಸಗೊಳಿಸಿರುವುದು ‘ಅಮಾನವೀಯ ಹಾಗೂ ಕಾನೂನುಬಾಹಿರ’. ಈ ಕ್ರಮ ನಮ್ಮ ಆತ್ಮಸಾಕ್ಷಿಯನ್ನೇ ಅಲುಗಾಡಿಸಿದೆ’ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.</p>.<p>ಈ ವಿಚಾರವಾಗಿ ಉತ್ತರ ಪ್ರದೇಶ ಸರ್ಕಾರ ಹಾಗೂ ಪ್ರಾಧಿಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್, ಮನೆಗಳ ಮಾಲೀಕರಿಗೆ 6 ವಾರಗಳ ಒಳಗಾಗಿ ತಲಾ ₹10 ಲಕ್ಷ ಪರಿಹಾರ ನೀಡುವಂತೆ ನಿರ್ದೇಶನ ನೀಡಿದೆ.</p>.<p>ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಹಾಗೂ ಉಜ್ಜಲ್ ಭುಯಾನ್ ಅವರು ಇದ್ದ ನ್ಯಾಯಪೀಠ, ಈ ಕುರಿತ ಅರ್ಜಿ ವಿಚಾರಣೆ ನಡೆಸಿತು.</p>.<p>‘ದೇಶದಲ್ಲಿ ಕಾನೂನು ಪ್ರಕಾರವೇ ಎಲ್ಲ ನಡೆಯಬೇಕು. ಪ್ರತಿಯೊಬ್ಬರಿಗೂ ಸೂರು ಹೊಂದುವ ಹಕ್ಕು ಇದೆ. ಆದರೆ, ಮನೆಗಳನ್ನು ಈ ರೀತಿ ನೆಲಸಮಗೊಳಿಸಬಾರದು. ಮನೆಗಳನ್ನು ಧ್ವಂಸಗೊಳಿಸಿರುವ ಕ್ರಮವು, ಸರ್ವಾಧಿಕಾರ ಧೋರಣೆಯ ಪ್ರದರ್ಶನವೇ ಸರಿ. ಇದು ಆಘಾತಕಾರಿ’ ಎಂದು ಪೀಠ ಹೇಳಿದೆ.</p>.<p>ವಕೀಲ ಜುಲ್ಫೀಕರ್ ಹೈದರ್, ಪ್ರಾಧ್ಯಾಪಕ ಅಲಿ ಅಹ್ಮದ್ ಹಾಗೂ ಇತರರು, ತಮ್ಮ ಮನೆಗಳನ್ನು ಪ್ರಯಾಗರಾಜ್ ಅಭಿವೃದ್ಧಿ ಪ್ರಾಧಿಕಾರ ಧ್ವಂಸಗೊಳಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.</p>.<p>ವಿಚಾರಣೆ ವೇಳೆ, ‘ನನ್ನ ಕಕ್ಷಿದಾರರ ಮನೆಗಳು ಇರುವ ಜಾಗವು, 2023ರಲ್ಲಿ ಪೊಲೀಸ್ ಎನ್ಕೌಂಟರ್ನಲ್ಲಿ ಹತ್ಯೆಯಾದ ಗ್ಯಾಂಗ್ಸ್ಟರ್ ಹಾಗೂ ರಾಜಕಾರಣಿ ಅತಿಕ್ ಅಹ್ಮದ್ಗೆ ಸೇರಿದ್ದು ಎಂದು ತಪ್ಪಾಗಿ ಭಾವಿಸಿದ ರಾಜ್ಯ ಸರ್ಕಾರ, ಈ ಮನೆಗಳನ್ನು ಧ್ವಂಸಗೊಳಿಸಿದೆ’ ಎಂದು ಅರ್ಜಿದಾರರ ಪರ ವಕೀಲ, ನ್ಯಾಯಪೀಠಕ್ಕೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಪ್ರಯಾಗರಾಜ್ ಅಭಿವೃದ್ಧಿ ಪ್ರಾಧಿಕಾರವು ನಗರದಲ್ಲಿ ಕೆಲವು ಮನೆಗಳನ್ನು ಧ್ವಂಸಗೊಳಿಸಿರುವುದು ‘ಅಮಾನವೀಯ ಹಾಗೂ ಕಾನೂನುಬಾಹಿರ’. ಈ ಕ್ರಮ ನಮ್ಮ ಆತ್ಮಸಾಕ್ಷಿಯನ್ನೇ ಅಲುಗಾಡಿಸಿದೆ’ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.</p>.<p>ಈ ವಿಚಾರವಾಗಿ ಉತ್ತರ ಪ್ರದೇಶ ಸರ್ಕಾರ ಹಾಗೂ ಪ್ರಾಧಿಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್, ಮನೆಗಳ ಮಾಲೀಕರಿಗೆ 6 ವಾರಗಳ ಒಳಗಾಗಿ ತಲಾ ₹10 ಲಕ್ಷ ಪರಿಹಾರ ನೀಡುವಂತೆ ನಿರ್ದೇಶನ ನೀಡಿದೆ.</p>.<p>ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಹಾಗೂ ಉಜ್ಜಲ್ ಭುಯಾನ್ ಅವರು ಇದ್ದ ನ್ಯಾಯಪೀಠ, ಈ ಕುರಿತ ಅರ್ಜಿ ವಿಚಾರಣೆ ನಡೆಸಿತು.</p>.<p>‘ದೇಶದಲ್ಲಿ ಕಾನೂನು ಪ್ರಕಾರವೇ ಎಲ್ಲ ನಡೆಯಬೇಕು. ಪ್ರತಿಯೊಬ್ಬರಿಗೂ ಸೂರು ಹೊಂದುವ ಹಕ್ಕು ಇದೆ. ಆದರೆ, ಮನೆಗಳನ್ನು ಈ ರೀತಿ ನೆಲಸಮಗೊಳಿಸಬಾರದು. ಮನೆಗಳನ್ನು ಧ್ವಂಸಗೊಳಿಸಿರುವ ಕ್ರಮವು, ಸರ್ವಾಧಿಕಾರ ಧೋರಣೆಯ ಪ್ರದರ್ಶನವೇ ಸರಿ. ಇದು ಆಘಾತಕಾರಿ’ ಎಂದು ಪೀಠ ಹೇಳಿದೆ.</p>.<p>ವಕೀಲ ಜುಲ್ಫೀಕರ್ ಹೈದರ್, ಪ್ರಾಧ್ಯಾಪಕ ಅಲಿ ಅಹ್ಮದ್ ಹಾಗೂ ಇತರರು, ತಮ್ಮ ಮನೆಗಳನ್ನು ಪ್ರಯಾಗರಾಜ್ ಅಭಿವೃದ್ಧಿ ಪ್ರಾಧಿಕಾರ ಧ್ವಂಸಗೊಳಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.</p>.<p>ವಿಚಾರಣೆ ವೇಳೆ, ‘ನನ್ನ ಕಕ್ಷಿದಾರರ ಮನೆಗಳು ಇರುವ ಜಾಗವು, 2023ರಲ್ಲಿ ಪೊಲೀಸ್ ಎನ್ಕೌಂಟರ್ನಲ್ಲಿ ಹತ್ಯೆಯಾದ ಗ್ಯಾಂಗ್ಸ್ಟರ್ ಹಾಗೂ ರಾಜಕಾರಣಿ ಅತಿಕ್ ಅಹ್ಮದ್ಗೆ ಸೇರಿದ್ದು ಎಂದು ತಪ್ಪಾಗಿ ಭಾವಿಸಿದ ರಾಜ್ಯ ಸರ್ಕಾರ, ಈ ಮನೆಗಳನ್ನು ಧ್ವಂಸಗೊಳಿಸಿದೆ’ ಎಂದು ಅರ್ಜಿದಾರರ ಪರ ವಕೀಲ, ನ್ಯಾಯಪೀಠಕ್ಕೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>