ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯಂತ್‌ ಸಿಂಗ್‌ ಎನ್‌ಡಿಎ ಸೇರುವ ಮುನ್ನ ಜೊತೆಗಿರುವವರ ಬಗ್ಗೆ ಯೋಚಿಸಲಿ: ಟಿಕಾಯತ್‌

Published 12 ಫೆಬ್ರುವರಿ 2024, 3:10 IST
Last Updated 12 ಫೆಬ್ರುವರಿ 2024, 3:10 IST
ಅಕ್ಷರ ಗಾತ್ರ

ಬಾಗಪತ್‌ (ಉ.ಪ್ರದೇಶ): ರಾಷ್ಟ್ರೀಯ ಲೋಕ ದಳದ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್‌ ಸಿಂಗ್‌ ಅವರು ಆಡಳಿತ ಪಕ್ಷ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ಸೇರುವ ಒಲವು ತೋರಿದ್ದಾರೆ ಎಂಬ ವರದಿ ಕುರಿತು ಭಾರತೀಯ ಕಿಸಾನ್‌ ಯೂನಿಯನ್‌ (ಬಿಕೆಯು) ಅಧ್ಯಕ್ಷ ನರೇಶ್‌ ಟಿಕಾಯತ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಟಿಕಾಯತ್‌, ‘ರಾಜಕೀಯದಲ್ಲಿ ಶತ್ರು ಯಾವಾಗ ಮಿತ್ರನಾಗುತ್ತಾನೆ ಎಂದು ಊಹಿಸಲು ಸಾಧ್ಯವಿಲ್ಲ. ಜಯಂತ್‌ ಸಿಂಗ್‌ ತಮ್ಮದೇ ಆದ ಆಲೋಚನೆಗಳನ್ನು ಹೊಂದಿದ್ದಾರೆ. ಆದರೆ, ಇಂತಹ ನಿರ್ಧಾರ ತೆಗೆದುಕೊಳ್ಳುವ ಮುನ್ನ ಅವರೊಟ್ಟಿಗೆ ಮೂರು ತಲೆಮಾರಿನಿಂದ ಇದ್ದ ಜನರನ್ನು ಸಂಪರ್ಕಿಸಬೇಕಿತ್ತು’ ಎಂದು ಹೇಳಿದ್ದಾರೆ.

ತಮ್ಮ ತಾತ, ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್‌ ಸಿಂಗ್‌ ಅವರಿಗೆ ಭಾರತ ರತ್ನ ಘೋಷಿಸಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಜಯಂತ್‌ ಸಿಂಗ್‌ ಶ್ಲಾಘಿಸಿದ್ದರು. ಈ ಬೆನ್ನಲ್ಲೇ ಸಿಂಗ್‌ ಎನ್‌ಡಿಎ ಸೇರುತ್ತಾರೆ ಎಂಬ ಊಹಾಪೋಹಗಳು ತೀವ್ರಗೊಂಡಿವೆ.

ಚರಣ್‌ ಸಿಂಗ್‌ ಅವರು ರೈತರ ನಾಯಕರಾಗಿದ್ದರು. ಭಾರತ ರತ್ನ ಪ್ರಶಸ್ತಿಗೆ ಅವರು ಅರ್ಹರಾಗಿದ್ದರು. ಈ ಗೌರವವನ್ನು ಅವರು ಮೊದಲೇ ಸ್ವೀಕರಿಸಬೇಕಿತ್ತು. ಚೌಧರಿ ಚರಣ್‌ ಸಿಂಗ್‌ ಅವರಿಗೆ ಭಾರತ ರತ್ನ ನೀಡುವಂತೆ ರೈತರು ಒತ್ತಾಯಿಸಿದ್ದರು ಎಂದು ನರೇಶ್‌ ಟಿಕಾಯತ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT