ಸುದ್ದಿಗಾರರೊಂದಿಗೆ ಮಾತನಾಡಿದ ಟಿಕಾಯತ್, ‘ರಾಜಕೀಯದಲ್ಲಿ ಶತ್ರು ಯಾವಾಗ ಮಿತ್ರನಾಗುತ್ತಾನೆ ಎಂದು ಊಹಿಸಲು ಸಾಧ್ಯವಿಲ್ಲ. ಜಯಂತ್ ಸಿಂಗ್ ತಮ್ಮದೇ ಆದ ಆಲೋಚನೆಗಳನ್ನು ಹೊಂದಿದ್ದಾರೆ. ಆದರೆ, ಇಂತಹ ನಿರ್ಧಾರ ತೆಗೆದುಕೊಳ್ಳುವ ಮುನ್ನ ಅವರೊಟ್ಟಿಗೆ ಮೂರು ತಲೆಮಾರಿನಿಂದ ಇದ್ದ ಜನರನ್ನು ಸಂಪರ್ಕಿಸಬೇಕಿತ್ತು’ ಎಂದು ಹೇಳಿದ್ದಾರೆ.
ತಮ್ಮ ತಾತ, ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಘೋಷಿಸಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಜಯಂತ್ ಸಿಂಗ್ ಶ್ಲಾಘಿಸಿದ್ದರು. ಈ ಬೆನ್ನಲ್ಲೇ ಸಿಂಗ್ ಎನ್ಡಿಎ ಸೇರುತ್ತಾರೆ ಎಂಬ ಊಹಾಪೋಹಗಳು ತೀವ್ರಗೊಂಡಿವೆ.
ಚರಣ್ ಸಿಂಗ್ ಅವರು ರೈತರ ನಾಯಕರಾಗಿದ್ದರು. ಭಾರತ ರತ್ನ ಪ್ರಶಸ್ತಿಗೆ ಅವರು ಅರ್ಹರಾಗಿದ್ದರು. ಈ ಗೌರವವನ್ನು ಅವರು ಮೊದಲೇ ಸ್ವೀಕರಿಸಬೇಕಿತ್ತು. ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ನೀಡುವಂತೆ ರೈತರು ಒತ್ತಾಯಿಸಿದ್ದರು ಎಂದು ನರೇಶ್ ಟಿಕಾಯತ್ ತಿಳಿಸಿದ್ದಾರೆ.